
ಭಾರತ ತಂಡ ಶುಕ್ರವಾರ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವನ್ನು ಆಡಲಿದ್ದು, ತಂಡದ ನಾಯಕತ್ವ ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೈಯಲ್ಲಿದೆ. ಅಭ್ಯಾಸ ಪಂದ್ಯದ ವೇಳೆ ತಂಡದ ನಾಯಕ ರೋಹಿತ್ ಶರ್ಮಾಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದರಿಂದ ಬುಮ್ರಾಗೆ ನಾಯಕತ್ವ ನೀಡಲಾಗಿದೆ.

ಬುಮ್ರಾ ನಾಯಕನಾಗುವುದು ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಬಹಳ ವಿಶೇಷವಾದ ಸಂದರ್ಭವಾಗಿದೆ. 35 ವರ್ಷಗಳ ನಂತರ ಟೀಮ್ ಇಂಡಿಯಾದ ನಾಯಕತ್ವವನ್ನು ವೇಗದ ಬೌಲರ್ ವಹಿಸಿಕೊಳ್ಳುತ್ತಿದ್ದಾರೆ. ವಿಶ್ವ ಚಾಂಪಿಯನ್ ನಾಯಕ ಕಪಿಲ್ ದೇವ್ ನಂತರ, ಯಾವುದೇ ವೇಗದ ಬೌಲರ್ ಭಾರತದ ಟೆಸ್ಟ್ ನಾಯಕನಾಗಿರಲಿಲ್ಲ.


ಜಸ್ಪ್ರೀತ್ ಬುಮ್ರಾ ಅವರ ಬೆನ್ನು ನೋವು ಟೀಮ್ ಇಂಡಿಯಾಕ್ಕೆ ಬಹಳ ಕಳವಳಕಾರಿಯಾಗಿದೆ. ಇತ್ತೀಚೆಗೆ, ದೀಪಕ್ ಹೂಡಾ ಕೂಡ ಇದೇ ರೀತಿಯ ಬೆನ್ನುನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ದಕ್ಷಿಣ ಆಫ್ರಿಕಾ ಸರಣಿಯಿಂದಲೇ ಹೊರಗಿಡಲಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಭಾರೀ ಹಿನ್ನಡೆ ಅನುಭವಿಸಿದೆ. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ.
Published On - 8:08 pm, Thu, 30 June 22