AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ರೂಟ್ ದಾಖಲೆಯ ಶತಕ, ಇಂಗ್ಲೆಂಡ್ ಬೃಹತ್ ಮುನ್ನಡೆ: ಎರಡನೇ ದಿನದಾಟದ ಹೈಲೈಟ್ಸ್ ಇಲ್ಲಿದೆ

ನಂತರ ಶುರುವಾಗಿದ್ದು ನಾಯಕ ಜೋ ರೂಟ್ ಹಾಗೂ ಡೇವಿಡ್ ಮಲನ್ ಆಟ. ರೂಟ್ ಆಟಕ್ಕೆ ಬ್ರೇಕ್ ಹಾಕಲು ಭಾರತೀಯ ಬೌಲರ್​ಗಳು ಈ ಬಾರಿ ಕೂಡ ವಿಫಲವಾದರು. ಅಬ್ಬರದ ಶತಕ ಬಾರಿಸಿದ ರೂಟ್ ತಂಡಕ್ಕೆ ಬಲವಾಗಿ ನಿಂತರು.

India vs England: ರೂಟ್ ದಾಖಲೆಯ ಶತಕ, ಇಂಗ್ಲೆಂಡ್ ಬೃಹತ್ ಮುನ್ನಡೆ: ಎರಡನೇ ದಿನದಾಟದ ಹೈಲೈಟ್ಸ್ ಇಲ್ಲಿದೆ
India vs England
TV9 Web
| Edited By: |

Updated on: Aug 27, 2021 | 8:09 AM

Share

ಲೀಡ್ಸ್: ಇಲ್ಲಿನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಸಾಗುತ್ತಿರುವ ಭಾರತ (India) ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ (England) ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ. ನಾಯಕ ಜೋ ರೂಟ್ (Joe Root) ಅವರ ದಾಖಲೆಯ ಶತಕದ ನೆರವಿನಿಂದ ಇಂಗ್ಲೆಂಡ್ 423 ರನ್ ಕಲೆಹಾಕಿದ್ದು, 345 ರನ್​ಗಳ ಮುನ್ನಡೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಪಿಚ್‌ನ ಸಂಪೂರ್ಣ ಲಾಭ ಪಡೆದ ಆತಿಥೇಯ ಇಂಗ್ಲೆಂಡ್‌ ತಂಡ ಮೂರನೇ ಟೆಸ್ಟ್‌ ಪಂದ್ಯವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಇತ್ತ ಟೀಮ್ ಇಂಡಿಯಾ (Team India) ಈ ಪಂದ್ಯವನ್ನು ಬಹುತೇಕ ಕೈಚೆಲ್ಲಿದೆ.

ಮೊದಲ ದಿನವೇ ಆರಂಭಿಕ ಬ್ಯಾಟ್ಸ್‌ಮನ್‌ಗಳ ಶತಕದ ಜೊತೆಯಾಟದ ಫಲವಾಗಿ 42 ರನ್‌ಗಳ ಮುನ್ನಡೆ ಗಳಿಸಿದ್ದ ಇಂಗ್ಲೆಂಡ್‌, ಎರಡನೇ ದಿನ ಇಬ್ಬರೂ ಓಪನರ್‌ಗಳನ್ನು ಕಳೆದುಕೊಂಡರೂ ಒಟ್ಟು ಮುನ್ನಡೆಯನ್ನು 104 ರನ್‌ಗಳಿಗೆ ವಿಸ್ತರಿಸಿತು. 153 ಎಸೆತಗಳನ್ನು ಎದುರಿಸಿದ ಎಡಗೈ ಬ್ಯಾಟ್ಸ್‌ಮನ್‌ ರೋರಿ ಬರ್ನ್ಸ್‌, 6 ಫೋರ್‌ ಮತ್ತು 1 ಸಿಕ್ಸರ್‌ನೊಂದಿಗೆ 61 ರನ್‌ಗಳಿಸಿ ಉತ್ತಮವಾಗಿ ಬ್ಯಾಟ್‌ ಮಾಡಿದರು. ಆದರೆ, ವೇಗಿ ಮೊಹಮ್ಮದ್‌ ಶಮಿ ಎದುರು ಕ್ಲೀನ್‌ ಬೌಲ್ಡ್‌ ಆಗಿ ಪೆವಿಲಿಯನ್‌ ಸೇರಿದರು. ಇದರ ಬೆನ್ನಲ್ಲೇ ದಾಳಿಗಿಳಿದ ರವೀಂದ್ರ ಜಡೇಜಾ, 195 ಎಸೆತಗಳಲ್ಲಿ 12 ಫೋರ್‌ಗಳೊಂದಿಗೆ 68 ರನ್‌ ಗಳಿಸಿದ್ದ ಹಸೀಬ್‌ ಹಮೀದ್ ಅವರನ್ನು ಕ್ಲೀನ್‌ ಬೌಲ್ಡ್‌ ಮಾಡಿದರು.

ನಂತರ ಶುರುವಾಗಿದ್ದು ನಾಯಕ ಜೋ ರೂಟ್ ಹಾಗೂ ಡೇವಿಡ್ ಮಲನ್ ಆಟ. ರೂಟ್ ಆಟಕ್ಕೆ ಬ್ರೇಕ್ ಹಾಕಲು ಭಾರತೀಯ ಬೌಲರ್​ಗಳು ಈ ಬಾರಿ ಕೂಡ ವಿಫಲವಾದರು. ಅಬ್ಬರದ ಶತಕ ಬಾರಿಸಿದ ರೂಟ್ ತಂಡಕ್ಕೆ ಬಲವಾಗಿ ನಿಂತರು. ಇವರಿಗೆ ಮಲನ್ ಅತ್ಯುತ್ತಮ ಸಾಥ್ ನೀಡಿದರು. ಈ ಜೋಡಿ 3ನೇ ವಿಕೆಟ್​ಗೆ 139 ರನ್​ಗಳ ಜೊತೆಯಾಟ ಆಡಿತು. ಮಲನ್ 128 ಎಸೆತಗಳಲ್ಲಿ 70 ರನ್ ಬಾರಿಸಿದರು. ರೂಟ್ 165 ಎಸೆತಗಳಲ್ಲಿ 121 ರನ್ ಸಿಡಿಸಿರು.

ನಂತರ ಬಂದ ಜಾನಿ ಬೈರ್​​ಸ್ಟೋ (29), ಜಾಸ್ ಬಟ್ಲರ್ (7), ಮೊಯೀನ್ ಅಲಿ (8) ಹಾಗೂ ಸ್ಯಾಮ್ ಕುರ್ರನ್ (15) ಬೇಗನೆ ನಿರ್ಗಮಿಸಿದರು. ಪರಿಣಾಮ ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 8 ವಿಕೆಟ್ ನಷ್ಟಕ್ಕೆ 423 ರನ್ ಗಳಿಸಿತು. 345 ರನ್​ಗಳ ಮುನ್ನಡೆ ಪಡೆದುಕೊಂಡಿತು. ಭಾರತ ಪರ ಮೊಹಮ್ಮದ್ ಶಮಿ 3 ವಿಕೆಟ್ ಕಿತ್ತರೆ, ಮೊಹಮ್ಮದ್ ಸಿರಾಜ್ ಹಾಗೂ ರವೀಂದ್ರ ಜಡೇಜಾ ತಲಾ 2 ಮತ್ತು ಜಸ್​ಪ್ರೀತ್ ಬುಮ್ರಾ 1 ವಿಕೆಟ್ ಪಡೆದರು. ಮೂರನೇ ದಿನಕ್ಕೆ ಕ್ರೈಗ್ ಓವರ್​ಟನ್ 25 ರನ್ ಹಾಗೂ ಓಲಿ ರಾಬಿನ್ಸನ್ ಖಾತೆ ತೆರೆಯದೆ ಕ್ರೀಸ್​ನಲ್ಲಿದ್ದಾರೆ.

ಜೋ ರೂಟ್ ವಿಶೇಷ ದಾಖಲೆ:

ಈ ಸರಣಿಯ ಮೂರು ಪಂದ್ಯಗಳಲ್ಲಿಯೂ ಜೋ ರೂಟ್ ಶತಕವನ್ನು ಬಾರಿಸಿದ್ದಾರೆ. ಈ ಶತಕದ ಸಾಧನೆಯೊಂದಿಗೆ ಜೋ ರೂಟ್ ದಿಗ್ಗಜ ಕ್ರಿಕೆಟಿಗರ ದಾಖಲೆಯನ್ನು ಮುರಿದಿದ್ದಾರೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆಯನ್ನು ಈಗ ಜೋ ರೂಟ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ದಿಗ್ಗಜ ಆಟಗಾರರಾದ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಹಾಗೂ ಆಲೆಸ್ಟರ್ ಕುಕ್ ದಾಖಲೆಯನ್ನು ಮೀರಿ ನಿಂತಿದ್ದಾರೆ.

ಇನ್ನೂ ಈ ಶತಕದ ಮೂಲಕ ಜೋ ರೂಟ್ ಮತ್ತೊಂದು ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಒಂದೇ ವರ್ಷದಲ್ಲಿ ಎರಡು ಬಾರಿ ಸತತ 3 ಪಂದ್ಯಗಳಲ್ಲಿ ಶತಕ ಸಿಡಿಸಿದ ಪ್ರಥಮ ಆಟಗಾರ ಎನಿಸಿದ್ದಾರೆ. ಅಷ್ಟೇ ಅಲ್ಲದೆ ಭಾರತ ಹಾಗೂ ಇಂಗ್ಲೆಂಡ್ ನಡುವಿನ ದ್ವಿಪಕ್ಷೀಯ ಸರಣಿಯ ಸಂದರ್ಭದಲ್ಲಿ ಇಂಗ್ಲೆಂಡ್‌ನಲ್ಲಿ ಅತಿ ಹೆಚ್ಚು 50+ ರನ್‌ಗಳನ್ನು ಬಾರಿಸಿದ ನಾಯಕ ಎನಿಸಿದ್ದಾರೆ. ಈ ದಾಖಲೆಯಲ್ಲಿ ಅವರು ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರನ್ನು ಸರಿಗಟ್ಟಿದ್ದಾರೆ.

India vs England: ಟೀಮ್ ಇಂಡಿಯಾದ ಈ ವೈಫಲ್ಯಕ್ಕೆ ಅತಿಯಾದ ಕ್ರಿಕೆಟ್ ಕಾರಣ: ಸಲ್ಮಾನ್ ಬಟ್

ಇಂಗ್ಲೆಂಡ್​ನ ಸರ್ವಕಾಲಿಕ ಶ್ರೇಷ್ಠ ‘ಲಾರ್ಡ್ ಟೆಡ್’ ತಮ್ಮ ಬದುಕಿನ ಇನ್ನಿಂಗ್ಸ್ ಅಂತ್ಯಗೊಳಿಸಿದರು

(India vs England Joe Roots record century gives England 345 runs lead test almost out of Indias grip)

Follow Us
TV9 Web
TV9 Web

TV9 Kannada

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ