AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಟೀಮ್ ಇಂಡಿಯಾ 2-1 ಮುನ್ನಡೆಗೆ ಅಡ್ಡಿ ಪಡಿಸುತ್ತಾನ ವರುಣ?: ಅಂತಿಮ ದಿನದ ಹವಾಮಾನ ವರದಿ ಇಲ್ಲಿದೆ

ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್​ನ ಅಂತಿಮ ದಿನ ಭಾರತಕ್ಕೆ ಸುಲಭ ಗೆಲುವು ಸಾಧಿಸುವ ಅವಕಾಶವಿತ್ತು. ಆದರೆ, ಇಂಗ್ಲೆಂಡ್​ಗೆ ಮಳೆರಾಯ ವರವಾಗಿ ಪರಿಣಮಿಸಿದೆ. ಆದರೆ, ಈ ಬಾರಿ ಹಾಗಾಗಲು ಚಾನ್ಸ್ ಇಲ್ಲ.

India vs England: ಟೀಮ್ ಇಂಡಿಯಾ 2-1 ಮುನ್ನಡೆಗೆ ಅಡ್ಡಿ ಪಡಿಸುತ್ತಾನ ವರುಣ?: ಅಂತಿಮ ದಿನದ ಹವಾಮಾನ ವರದಿ ಇಲ್ಲಿದೆ
India vs England
TV9 Web
| Edited By: |

Updated on: Sep 06, 2021 | 10:18 AM

Share

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ನಾಲ್ಕನೇ ಟೆಸ್ಟ್​ನ ಅಂತಿಮ ಐದನೇ ದಿನದಾಟದ ಮೇಲೆ ಎಲ್ಲರ ಕಣ್ಣಿದೆ. ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಉಭಯ ತಂಡಗಳು 1-1 ಅಂತರದ ಸಮಬಲ ಸಾಧಿಸಿದೆ. ಮೊದಲ ಟೆಸ್ಟ್ ಪಂದ್ಯ ಮಳೆಯಿಂದ ಡ್ರಾ ಆದರೆ, ಎರಡನೇ ಟೆಸ್ಟ್​ನಲ್ಲಿ ಭಾರತ ಗೆದ್ದು ಬೀಗಿತು. ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ಜಯಿಸಿದ್ದು, ಸದ್ಯ ನಾಲ್ಕನೇ ಟೆಸ್ಟ್ (4th test) ಕುತೂಹಲ ಕೆರಳಿಸಿದೆ. ಅಂತಿಮ ದಿನದಲ್ಲಿ ಇಂಗ್ಲೆಂಡ್ ಗೆಲುವಿಗೆ 291 ರನ್​ಗಳ ಅವಶ್ಯಕತೆಯಿದ್ದರೆ, ಟೀಮ್ ಇಂಡಿಯಾ (Team India) ಗೆಲುವಿನಗೆ ಇಂಗ್ಲೆಂಡ್​ನ 10 ವಿಕೆಟ್ ಕೀಳಬೇಕಿದೆ. ಇದರ ನಡುವೆ ಈ ರೋಚಕ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆಯೇ?.

ಮೊದಲ ಟೆಸ್ಟ್​ನ ಅಂತಿಮ ದಿನ ಭಾರತಕ್ಕೆ ಸುಲಭ ಗೆಲುವು ಸಾಧಿಸುವ ಅವಕಾಶವಿತ್ತು. ಆದರೆ, ಇಂಗ್ಲೆಂಡ್​ಗೆ ಮಳೆರಾಯ ವರವಾಗಿ ಪರಿಣಮಿಸಿದೆ. ಆದರೆ, ಈ ಬಾರಿ ಹಾಗಾಗಲು ಚಾನ್ಸ್ ಇಲ್ಲ. ಇಂದಿನ ಐದನೇ ದಿನ ಲಂಡನ್​ನ ಕೆನ್ನಿಂಗ್ಟನ್ ಓವಲ್​ನಲ್ಲಿ ಮಳೆಯ ಸಾಧ್ಯತೆ ಇಲ್ಲ ಎಂದು ಹವಾಮಾನ ವರದಿ ಹೇಳಿದೆ. ಪಂದ್ಯ ಆರಂಭವಾಗುವ ಹೊತ್ತಿಗೆ ಮೋಡ ಮುಸುಕಿದ ವಾತಾವರಣ ಇದ್ದರೂ, ಮಳೆ ಬರುವ ಸಾಧ್ಯತೆ ಇಲ್ಲ.

ಲಂಡನ್​ನ ನ್ಯಾಟಿಂಗ್​ಹ್ಯಾಮ್​ ಓವಲ್​ನಲ್ಲಿ ನಡೆಯುತ್ತಿರು ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾಕ್ಕೆ ಗೆಲುವು ಅಥವಾ ಪಂದ್ಯ ಡ್ರಾ ಆಗುವುದು ಖಚಿತ ಎಂದೇ ಹೇಳಲಾಗುತ್ತಿದೆ. ಇಂದು ಅಂತಿಮ ದಿನದಾಟದಲ್ಲಿ ಆಂಗ್ಲರ ಗೆಲುವುಗೆ 291 ರನ್​ಗಳ ಅವಶ್ಯತೆಯಿದೆ. ಹೊಸ ಬಾಲ್ ಪ್ರಯೋಜವನ್ನು ಭಾರತೀಯ ವೇಗಿಗಳು ಯಾವ ರೀತಿ ಉಪಯೋಗಿಸಿಕೊಳ್ಳುತ್ತಾರೆ ಎಂಬುದನ್ನು ನೋಡಬೇಕಿದೆ.

ಕೊಹ್ಲಿ ಪಡೆ ನೀಡಿರುವ 367 ರನ್​ಗಳ ಸವಾಲಿನ ಟಾರ್ಗೆಟ್ ಬೆನ್ನಟ್ಟಿರುವ ಆಂಗ್ಲರು ನಾಲ್ಕನೇ ದಿನದಾಟದ ಅಂತ್ಯಕ್ಕೆ ಯಾವುದೇ ವಿಕೆಟ್ ಕಳೆದುಕೊಳ್ಳದೆ 77 ರನ್ ಬಾರಿಸಿದೆ. ಪಂದ್ಯದ ಫಲಿತಾಂಶ ಅಂತಿಮ ದಿನಕ್ಕೆ ತಲುಪಿದ್ದು ಇಂಗ್ಲೆಂಡ್ ಗೆಲುವಿಗೆ 291 ರನ್​ಗಳ ಅವಶ್ಯಕತೆಯಿದ್ದರೆ, ಭಾರತದ ಗೆಲುವಿಗೆ ರೂಟ್ ಪಡೆಯ ವಿಕೆಟ್​ಗಳು ಬೇಕಾಗಿದೆ. ಹೀಗಾಗಿ ಐದನೇ ದಿನದಾಟದ ಸಾಕಷ್ಟು ಕುತೂಹಲ ಕೆರಳಿಸಿದೆ.

India vs England: ಟೀಮ್ ಇಂಡಿಯಾಕ್ಕೆ ಡಬಲ್ ಶಾಕ್: ಇಂದು ಫೀಲ್ಡ್​​ಗಿಳಿಯಲ್ಲ ಈ ಆಟಗಾರರು: 5ನೇ ಟೆಸ್ಟ್​ಗೂ ಅನುಮಾನ

Shardul Thakur: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಲಾರ್ಡ್ ಠಾಕೂರ್

(India vs England Kennington Oval Weather Day 5 No chances of rain as India aims to go 2-1 up against England)

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ