AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಟೀಮ್ ಇಂಡಿಯಾ 2-1 ಮುನ್ನಡೆಗೆ ಅಡ್ಡಿ ಪಡಿಸುತ್ತಾನ ವರುಣ?: ಅಂತಿಮ ದಿನದ ಹವಾಮಾನ ವರದಿ ಇಲ್ಲಿದೆ

ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್​ನ ಅಂತಿಮ ದಿನ ಭಾರತಕ್ಕೆ ಸುಲಭ ಗೆಲುವು ಸಾಧಿಸುವ ಅವಕಾಶವಿತ್ತು. ಆದರೆ, ಇಂಗ್ಲೆಂಡ್​ಗೆ ಮಳೆರಾಯ ವರವಾಗಿ ಪರಿಣಮಿಸಿದೆ. ಆದರೆ, ಈ ಬಾರಿ ಹಾಗಾಗಲು ಚಾನ್ಸ್ ಇಲ್ಲ.

India vs England: ಟೀಮ್ ಇಂಡಿಯಾ 2-1 ಮುನ್ನಡೆಗೆ ಅಡ್ಡಿ ಪಡಿಸುತ್ತಾನ ವರುಣ?: ಅಂತಿಮ ದಿನದ ಹವಾಮಾನ ವರದಿ ಇಲ್ಲಿದೆ
India vs England
TV9 Web
| Updated By: Vinay Bhat|

Updated on: Sep 06, 2021 | 10:18 AM

Share

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ನಾಲ್ಕನೇ ಟೆಸ್ಟ್​ನ ಅಂತಿಮ ಐದನೇ ದಿನದಾಟದ ಮೇಲೆ ಎಲ್ಲರ ಕಣ್ಣಿದೆ. ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಉಭಯ ತಂಡಗಳು 1-1 ಅಂತರದ ಸಮಬಲ ಸಾಧಿಸಿದೆ. ಮೊದಲ ಟೆಸ್ಟ್ ಪಂದ್ಯ ಮಳೆಯಿಂದ ಡ್ರಾ ಆದರೆ, ಎರಡನೇ ಟೆಸ್ಟ್​ನಲ್ಲಿ ಭಾರತ ಗೆದ್ದು ಬೀಗಿತು. ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ಜಯಿಸಿದ್ದು, ಸದ್ಯ ನಾಲ್ಕನೇ ಟೆಸ್ಟ್ (4th test) ಕುತೂಹಲ ಕೆರಳಿಸಿದೆ. ಅಂತಿಮ ದಿನದಲ್ಲಿ ಇಂಗ್ಲೆಂಡ್ ಗೆಲುವಿಗೆ 291 ರನ್​ಗಳ ಅವಶ್ಯಕತೆಯಿದ್ದರೆ, ಟೀಮ್ ಇಂಡಿಯಾ (Team India) ಗೆಲುವಿನಗೆ ಇಂಗ್ಲೆಂಡ್​ನ 10 ವಿಕೆಟ್ ಕೀಳಬೇಕಿದೆ. ಇದರ ನಡುವೆ ಈ ರೋಚಕ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆಯೇ?.

ಮೊದಲ ಟೆಸ್ಟ್​ನ ಅಂತಿಮ ದಿನ ಭಾರತಕ್ಕೆ ಸುಲಭ ಗೆಲುವು ಸಾಧಿಸುವ ಅವಕಾಶವಿತ್ತು. ಆದರೆ, ಇಂಗ್ಲೆಂಡ್​ಗೆ ಮಳೆರಾಯ ವರವಾಗಿ ಪರಿಣಮಿಸಿದೆ. ಆದರೆ, ಈ ಬಾರಿ ಹಾಗಾಗಲು ಚಾನ್ಸ್ ಇಲ್ಲ. ಇಂದಿನ ಐದನೇ ದಿನ ಲಂಡನ್​ನ ಕೆನ್ನಿಂಗ್ಟನ್ ಓವಲ್​ನಲ್ಲಿ ಮಳೆಯ ಸಾಧ್ಯತೆ ಇಲ್ಲ ಎಂದು ಹವಾಮಾನ ವರದಿ ಹೇಳಿದೆ. ಪಂದ್ಯ ಆರಂಭವಾಗುವ ಹೊತ್ತಿಗೆ ಮೋಡ ಮುಸುಕಿದ ವಾತಾವರಣ ಇದ್ದರೂ, ಮಳೆ ಬರುವ ಸಾಧ್ಯತೆ ಇಲ್ಲ.

ಲಂಡನ್​ನ ನ್ಯಾಟಿಂಗ್​ಹ್ಯಾಮ್​ ಓವಲ್​ನಲ್ಲಿ ನಡೆಯುತ್ತಿರು ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾಕ್ಕೆ ಗೆಲುವು ಅಥವಾ ಪಂದ್ಯ ಡ್ರಾ ಆಗುವುದು ಖಚಿತ ಎಂದೇ ಹೇಳಲಾಗುತ್ತಿದೆ. ಇಂದು ಅಂತಿಮ ದಿನದಾಟದಲ್ಲಿ ಆಂಗ್ಲರ ಗೆಲುವುಗೆ 291 ರನ್​ಗಳ ಅವಶ್ಯತೆಯಿದೆ. ಹೊಸ ಬಾಲ್ ಪ್ರಯೋಜವನ್ನು ಭಾರತೀಯ ವೇಗಿಗಳು ಯಾವ ರೀತಿ ಉಪಯೋಗಿಸಿಕೊಳ್ಳುತ್ತಾರೆ ಎಂಬುದನ್ನು ನೋಡಬೇಕಿದೆ.

ಕೊಹ್ಲಿ ಪಡೆ ನೀಡಿರುವ 367 ರನ್​ಗಳ ಸವಾಲಿನ ಟಾರ್ಗೆಟ್ ಬೆನ್ನಟ್ಟಿರುವ ಆಂಗ್ಲರು ನಾಲ್ಕನೇ ದಿನದಾಟದ ಅಂತ್ಯಕ್ಕೆ ಯಾವುದೇ ವಿಕೆಟ್ ಕಳೆದುಕೊಳ್ಳದೆ 77 ರನ್ ಬಾರಿಸಿದೆ. ಪಂದ್ಯದ ಫಲಿತಾಂಶ ಅಂತಿಮ ದಿನಕ್ಕೆ ತಲುಪಿದ್ದು ಇಂಗ್ಲೆಂಡ್ ಗೆಲುವಿಗೆ 291 ರನ್​ಗಳ ಅವಶ್ಯಕತೆಯಿದ್ದರೆ, ಭಾರತದ ಗೆಲುವಿಗೆ ರೂಟ್ ಪಡೆಯ ವಿಕೆಟ್​ಗಳು ಬೇಕಾಗಿದೆ. ಹೀಗಾಗಿ ಐದನೇ ದಿನದಾಟದ ಸಾಕಷ್ಟು ಕುತೂಹಲ ಕೆರಳಿಸಿದೆ.

India vs England: ಟೀಮ್ ಇಂಡಿಯಾಕ್ಕೆ ಡಬಲ್ ಶಾಕ್: ಇಂದು ಫೀಲ್ಡ್​​ಗಿಳಿಯಲ್ಲ ಈ ಆಟಗಾರರು: 5ನೇ ಟೆಸ್ಟ್​ಗೂ ಅನುಮಾನ

Shardul Thakur: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಲಾರ್ಡ್ ಠಾಕೂರ್

(India vs England Kennington Oval Weather Day 5 No chances of rain as India aims to go 2-1 up against England)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ