AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ತಂಡದ ಮುಂದಿನ ಸರಣಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

India vs England: ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದೆ. ಈ ಬಾರಿ ಕೂಡ ಭಾರತ ತಂಡದ ಎದುರಾಳಿ ಇಂಗ್ಲೆಂಡ್. ಆಂಗ್ಲರ ವಿರುದ್ಧ ಟಿ20 ಸರಣಿಯನ್ನು 4-1 ಅಂತರದಿಂದ ಗೆದ್ದು ಬೀಗಿರುವ ಟೀಮ್ ಇಂಡಿಯಾ ಇದೀಗ ಏಕದಿನ ಸರಣಿಗಾಗಿ ಸಜ್ಜಾಗುತ್ತಿದೆ. ಈ ಸರಣಿಯು ಫೆಬ್ರವರಿ 6 ರಿಂದ ಶುರುವಾಗಲಿದೆ.

ಭಾರತ ತಂಡದ ಮುಂದಿನ ಸರಣಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
Team India
ಝಾಹಿರ್ ಯೂಸುಫ್
|

Updated on: Feb 03, 2025 | 2:03 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿ ಮುಗಿದಿದೆ. ಈ ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ, ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ಜಯ ಸಾಧಿಸಿತ್ತು. ಆದರೆ ನಾಲ್ಕನೇ ಮತ್ತು ಐದನೇ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ 4-1 ಅಂತರದಿಂದ ಸರಣಿ ಗೆದ್ದುಕೊಂಡಿದೆ.

ಇದೀಗ ಟಿ20 ಸರಣಿ ಮುಗಿಸಿರುವ ಭಾರತ ತಂಡವು ಏಕದಿನ ಸರಣಿಗಾಗಿ ಸಜ್ಜಾಗಬೇಕಿದೆ. ಏಕೆಂದರೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯು ಫೆಬ್ರವರಿ 6 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನಾಡಲಾಗುತ್ತದೆ.

ಮುಂಬರುವ ಚಾಂಪಿಯನ್ಸ್ ಟ್ರೋಫಿ ದೃಷ್ಟಿಯಿಂದ ಟೀಮ್ ಇಂಡಿಯಾ ಪಾಲಿಗೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ತುಂಬಾ ಮಹತ್ವದ್ದು. ಏಕೆಂದರೆ ಆಂಗ್ಲರ ವಿರುದ್ಧದ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಗಾಗಿ ತೆರಳಲಿದೆ.

ಹೀಗಾಗಿ ಗೆಲುವಿನ ಲಯದೊಂದಿಗೆ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಪಾಲ್ಗೊಳ್ಳಲು ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಲೇಬೇಕು. ಈ ಸರಣಿಯ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

ದಿನಾಂಕ  ಪಂದ್ಯ ಮತ್ತು ಸ್ಥಳ ಸಮಯ
ಫೆಬ್ರವರಿ 06, ಗುರುವಾರ ಭಾರತ vs ಇಂಗ್ಲೆಂಡ್, ಮೊದಲ ಏಕದಿನ ಪಂದ್ಯ (ನಾಗ್ಪುರ)  01:30 PM IST
ಫೆಬ್ರವರಿ 09, ಭಾನುವಾರ ಭಾರತ vs ಇಂಗ್ಲೆಂಡ್, ಎರಡನೇ ಏಕದಿನ ಪಂದ್ಯ ( ಕಟಕ್)  01:30 PM IST
ಫೆಬ್ರವರಿ 12, ಬುಧವಾರ ಭಾರತ vs ಇಂಗ್ಲೆಂಡ್, ಮೂರನೇ ಏಕದಿನ ಪಂದ್ಯ (ಅಹಮದಾಬಾದ್)  01:30 PM IST

ಏಕದಿನ ಸರಣಿಗೆ ಭಾರತ ಮತ್ತು ಇಂಗ್ಲೆಂಡ್ ತಂಡಗಳು:

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕೊಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್​ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ.

ಇದನ್ನೂ ಓದಿ: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಡೇವಿಡ್ ವಾರ್ನರ್

ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ:

  1. ಭಾರತ vs ಬಾಂಗ್ಲಾದೇಶ್: ಫೆಬ್ರವರಿ 20 (ದುಬೈ)
  2. ಭಾರತ vs ಪಾಕಿಸ್ತಾನ್: ಫೆಬ್ರವರಿ 23 (ದುಬೈ)
  3. ಭಾರತ vs ನ್ಯೂಝಿಲೆಂಡ್: ಮಾರ್ಚ್ 2 (ದುಬೈ)
  4. ಸೆಮಿಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 4 (ದುಬೈ)
  5. ಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 9 (ದುಬೈ)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ