AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ತಂದೆಯ ಆರೋಗ್ಯದ ಅಪ್‌ಡೇಟ್‌ ನೀಡಿದ ರೋಹಿತ್ ಶರ್ಮಾ ಮಗಳು ಸಮೈರಾ! ವಿಡಿಯೋ ಸಖತ್ ವೈರಲ್

IND vs ENG: ಸುದ್ದಿಗಾರರ ಪ್ರಶ್ನೆಗೆ ಉತ್ತರವಾಗಿ, ಸಮೈರಾ ತನ್ನ ತಂದೆ ಲಿವಿಂಗ್ ರೂಂನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಉತ್ತರಿಸಿದ್ದಾರೆ. ಸಮೈರಾ ರೋಹಿತ್ ಬಗ್ಗೆ ಅಪ್‌ಡೇಟ್ ನೀಡಿರುವ ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

IND vs ENG: ತಂದೆಯ ಆರೋಗ್ಯದ ಅಪ್‌ಡೇಟ್‌ ನೀಡಿದ ರೋಹಿತ್ ಶರ್ಮಾ ಮಗಳು ಸಮೈರಾ! ವಿಡಿಯೋ ಸಖತ್ ವೈರಲ್
ರೋಹಿತ್ ಶರ್ಮಾ ಅವರ ಮಗಳು ಸಮೈರಾ
TV9 Web
| Updated By: ಪೃಥ್ವಿಶಂಕರ|

Updated on:Jun 28, 2022 | 6:02 PM

Share

ಭಾರತ ಇನ್ನೊಂದು ವಾರದಲ್ಲಿ ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯವನ್ನು ಆಡಲಿದೆ. ಕುತೂಹಲದಿಂದ ಕಾಯುತ್ತಿದ್ದ ಟೆಸ್ಟ್‌ಗೆ ಮುಂಚಿತವಾಗಿ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಇದು ಭಾರತಕ್ಕೆ ಭಾರೀ ಹಿನ್ನಡೆಯಾಗಿತ್ತು. ಏಕೆಂದರೆ, ಹಿಂದಿನ 4 ಟೆಸ್ಟ್‌ಗಳಲ್ಲಿ ರೋಹಿತ್ ಶರ್ಮಾ ಅಗ್ರ ಸ್ಕೋರರ್ ಆಗಿದ್ದರು. ಆದರೆ, ರೋಹಿತ್ ಟೆಸ್ಟ್‌ಗೆ ಲಭ್ಯರಾಗುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಈ ನಿಟ್ಟಿನಲ್ಲಿ ರೋಹಿತ್ ಪುತ್ರಿ ಅವರ ಆರೋಗ್ಯದ ಬಗ್ಗೆ ಪ್ರಮುಖ ಮಾಹಿತಿ ನೀಡಿದ್ದಾರೆ. ಇಂಗ್ಲೆಂಡ್‌ನ ಪತ್ರಕರ್ತರು, ಹೋಟೆಲ್‌ನಿಂದ ಹೊರಬರುತ್ತಿದ್ದ ಸಮೈರಾ (Samaira) ಅವರನ್ನು ರೋಹಿತ್ ಶರ್ಮಾ ಈಗ ಹೇಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಸಮೈರಾ ನೀಡಿದ ಉತ್ತರ ಹಾಗೂ ಆಕೆಯ ಮುಗ್ದತೆಯ ವಿಡಿಯೋ ಈಗ ಎಲ್ಲೆಡೆ ಸಖತ್ ವೈರಲ್ ಆಗುತ್ತಿದೆ.

ಸುದ್ದಿಗಾರರ ಪ್ರಶ್ನೆಗೆ ಉತ್ತರವಾಗಿ, ಸಮೈರಾ ತನ್ನ ತಂದೆ ಲಿವಿಂಗ್ ರೂಂನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಉತ್ತರಿಸಿದ್ದಾರೆ. ಸಮೈರಾ ರೋಹಿತ್ ಬಗ್ಗೆ ಅಪ್‌ಡೇಟ್ ನೀಡಿರುವ ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ಇದರೊಂದಿಗೆ, ಸಮೈರಾ ಕ್ಯೂಟ್ ಎಕ್ಸ್‌ಪ್ರೆಶನ್‌ಗಳಿಗೆ ಕಾಮೆಂಟ್‌ಗಳೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ರೋಹಿತ್ ಶರ್ಮಾ ಅಭಿಮಾನಿಗಳು ಈ ವಿಡಿಯೋವನ್ನು ಟ್ರೆಂಡ್ ಮಾಡಿದ್ದಾರೆ.

ಇದನ್ನೂ ಓದಿ
Image
Wimbledon 2022: ಒಂದೇ ದಿನದಲ್ಲಿ 2 ಪ್ರಕರಣ; ಕೊರೊನಾ ಸೋಂಕಿನಿಂದ ಕಳೆದ ವರ್ಷದ ಫೈನಲಿಸ್ಟ್ ಟೂರ್ನಿಯಿಂದ ಔಟ್!
Image
Varinder Singh: ಧ್ಯಾನ್​ಚಂದ್ ಪ್ರಶಸ್ತಿ ಪುರಸ್ಕೃತ ಭಾರತದ ಹಾಕಿ ಲೆಜೆಂಡ್ ವರೀಂದರ್ ಸಿಂಗ್ ನಿಧನ

ರೋಹಿತ್​ಗೆ ಕೊರೊನಾ

ಇತ್ತೀಚೆಗೆ ಲೀಸೆಸ್ಟರ್‌ಶೈರ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ತಂಡವನ್ನು ಸೇರಿಕೊಂಡಿದ್ದರು. ಕೋವಿಡ್ ಇರುವುದು ದೃಢಪಟ್ಟಿದ್ದರಿಂದ ಅವರು ಪಂದ್ಯದ ಅಂತಿಮ ದಿನದಂದು ಆಡಲಿಲ್ಲ. ಅಂದಿನಿಂದ ಅವರು ಐಸೋಲೇಷನ್‌ನಲ್ಲಿದ್ದಾರೆ. ಜೊತೆಗೆ ವೈದ್ಯರ ಮೇಲ್ವಿಚಾರಣೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆಯ್ಕೆಗಾರ ಚೇತನ್ ಶರ್ಮಾ ಯುಕೆಗೆ ಆಗಮಿಸುತ್ತಿದ್ದು, ಮುಂಬರುವ ಟೆಸ್ಟ್​ನಲ್ಲಿ ಟೀಂ ಇಂಡಿಯಾವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಬಗ್ಗೆ ಇಂದು ನಿರ್ಧಾರವಾಗಲಿದೆಯಂತೆ.

ಇದನ್ನೂ ಓದಿ: T20I World Record: ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನಕ್ಕೆ ಸೆಡ್ಡು ಹೊಡೆಯಲಿದೆ ಭಾರತ; ಹೊಸ ದಾಖಲೆಯತ್ತ ರೋಹಿತ್ ಸೇನೆ!

ರೋಹಿತ್ ಕೇವಲ ನಾಯಕನಾಗಿ ಮಾತ್ರವಲ್ಲದೆ ಅಗ್ರ ಕ್ರಮಾಂಕದಲ್ಲಿಯೂ ಪ್ರಮುಖ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ರೋಹಿತ್ ಟೆಸ್ಟ್ ಆಡದಿದ್ದರೆ ಭಾರತಕ್ಕೆ ಭಾರಿ ಹಿನ್ನಡೆಯಾಗಲಿದೆ. ಜಸ್ಪ್ರೀತ್ ಬುಮ್ರಾ ನಾಯಕತ್ವ ವಹಿಸಲು ಸಿದ್ಧರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಆದರೆ ಇದು ಖಚಿತವಾಗಿಲ್ಲ.

ಮಯಾಂಕ್ ಅಗರ್ವಾಲ್‌ಗೆ ಅವಕಾಶ ಸಿಗಬಹುದು

ವೈದ್ಯಕೀಯ ತಂಡ ರೋಹಿತ್ ಆರೋಗ್ಯದ ಮೇಲೆ ನಿಗಾ ಇರಿಸಿದೆ. ಅವರು ಫಿಟ್ ಆಗಲು ಮ್ಯಾನೇಜ್ ಮೆಂಟ್ ಕಾಯುತ್ತದೆ. ಹೀಗಾಗಿ ನಾಯಕತ್ವದ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಓಪನರ್ ಆಗಿ ಅವರ ಹೆಸರು ಇನ್ನೂ ಯೋಜನೆಯಲ್ಲಿದೆ ಎಂದು ಇದು ಸೂಚಿಸುತ್ತದೆ. ರೋಹಿತ್ ಸಮಯಕ್ಕೆ ಸರಿಯಾಗಿ ಫಿಟ್ ಆಗದಿದ್ದರೆ ಮಯಾಂಕ್ ಅಗರ್ವಾಲ್​ಗೆ ಅವಕಾಶ ಸಿಗಬಹುದು. ಮಯಾಂಕ್ ಈ ವರ್ಷದ ಮಾರ್ಚ್‌ನಲ್ಲಿ ಶ್ರೀಲಂಕಾ ವಿರುದ್ಧ ಭಾರತಕ್ಕಾಗಿ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಅವರು ಇಂಗ್ಲೆಂಡ್ ವಿರುದ್ಧದ ಭಾರತೀಯ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದಿದ್ದರೂ, ಆದರೆ ಈಗ ಪರಿಸ್ಥಿತಿಗಳು ಅವರ ಪರವಾಗಿ ತಿರುಗುತ್ತಿವೆ.

Published On - 6:02 pm, Tue, 28 June 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ