AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಭಾರತ-ಇಂಗ್ಲೆಂಡ್ ಸರಣಿಯ ವೇಳಾಪಟ್ಟಿ ಪ್ರಕಟ

India vs England Schedule 2022: ಕಳೆದ ವರ್ಷ ನಡೆದ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಕೊರೋನಾ ಭೀತಿ ಹಿನ್ನಲೆಯಲ್ಲಿ ಮುಂದೂಡಲಾಗಿತ್ತು. ಈ ಪಂದ್ಯವನ್ನು ಜುಲೈ 1 ರಿಂದ 5 ರವರೆಗೆ ಆಡಲಾಗುತ್ತದೆ.

India vs England: ಭಾರತ-ಇಂಗ್ಲೆಂಡ್ ಸರಣಿಯ ವೇಳಾಪಟ್ಟಿ ಪ್ರಕಟ
india vs england 2022
TV9 Web
| Edited By: |

Updated on:Jun 20, 2022 | 10:42 AM

Share

ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಟಿ20 ಸರಣಿ ಮುಗಿದಿದ್ದು, ಇದರ ಬೆನ್ನಲ್ಲೇ ಟೀಮ್ ಇಂಡಿಯಾ (Team India) ಆಟಗಾರರು ಐರ್ಲೆಂಡ್​ ಹಾಗೂ ಇಂಗ್ಲೆಂಡ್​ಗೆ ಪ್ರಯಾಣ ಬೆಳೆಸಲಿದ್ದಾರೆ. ಏಕೆಂದರೆ ಟೀಮ್ ಇಂಡಿಯಾ ಇದೇ ತಿಂಗಳು ಐರ್ಲೆಂಡ್ ವಿರುದ್ದ ಮತ್ತೊಂದು ಟಿ20 ಸರಣಿ ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಪಂದ್ಯಗಳನ್ನು ಆಡಲಿದ್ದು, ಮೊದಲ ಪಂದ್ಯವು ಜೂನ್ 26 ರಂದು ನಡೆದರೆ, 2ನೇ ಪಂದ್ಯ ಜೂನ್ 28 ರಂದು ನಡೆಯಲಿದೆ. ಇದಾದ ಬಳಿಕ ಇಂಗ್ಲೆಂಡ್ ವಿರುದ್ದದ ಸರಣಿ ಶುರುವಾಗಲಿದೆ. ಜುಲೈ 1 ರಿಂದ ಇಂಗ್ಲೆಂಡ್ ವಿರುದ್ದ ಏಕೈಕ ಟೆಸ್ಟ್ ಪಂದ್ಯ ನಡೆಯಲಿದ್ದು, ಇದಕ್ಕೂ ಮುನ್ನ ಜೂನ್ 24 ರಿಂದ ವಾರ್ಮ್-ಅಪ್ ಮ್ಯಾಚ್ ಆಡಲಿದೆ.

ಕಳೆದ ವರ್ಷ ನಡೆದ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಕೊರೋನಾ ಭೀತಿ ಹಿನ್ನಲೆಯಲ್ಲಿ ಮುಂದೂಡಲಾಗಿತ್ತು. ಈ ಪಂದ್ಯವನ್ನು ಜುಲೈ 1 ರಿಂದ 5 ರವರೆಗೆ ಆಡಲಾಗುತ್ತದೆ. ಇದಾದ ಬಳಿಕ ಟೀಮ್ ಇಂಡಿಯಾ 3 ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿಗಳನ್ನು ಆಡಲಿದೆ. ಮುಂಬರುವ ಟಿ20 ವಿಶ್ವಕಪ್​ ಹಿನ್ನಲೆಯಲ್ಲಿ ಇಂಗ್ಲೆಂಡ್ ವಿರುದ್ದದ ಸೀಮಿತ ಓವರ್​ಗಳ ಸರಣಿಯೂ ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದಾಗಿದೆ.

ಐರ್ಲೆಂಡ್ ವಿರುದ್ದದ 2 ಪಂದ್ಯಗಳ ಟಿ20 ಸರಣಿಯ ಬಳಿಕ ಪ್ರಮುಖ ಆಟಗಾರರು ಇಂಗ್ಲೆಂಡ್ ವಿರುದ್ದದ ಟಿ20 ಸರಣಿಗಾಗಿ ತೆರಳಲಿದ್ದಾರೆ. ಅದರಂತೆ ಐರ್ಲೆಂಡ್ ವಿರುದ್ದದ ಸರಣಿ ಮುಕ್ತಾಯದ ಬೆನ್ನಲ್ಲೇ ಇಂಗ್ಲೆಂಡ್ ವಿರುದ್ದದ ಏಕದಿನ ಹಾಗೂ ಟಿ20 ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳಾಪಟ್ಟಿ ಹೀಗಿದೆ:

  1. ಜುಲೈ 1 – 5: ಏಕೈಕ ಟೆಸ್ಟ್ ಪಂದ್ಯ (ಎಡ್ಜ್‌ಬಾಸ್ಟನ್)
  2. ಜುಲೈ 7: ಮೊದಲ ಟಿ20 ಪಂದ್ಯ (ಏಜಿಯಾಸ್ ಬೌಲ್)
  3. ಜುಲೈ 9: 2ನೇ ಟಿ20 ಪಂದ್ಯ (ಎಡ್ಜ್‌ಬಾಸ್ಟನ್)
  4. ಜುಲೈ 10: 3ನೇ ಟಿ20 ಪಂದ್ಯ (ಟ್ರೆಂಟ್ ಬ್ರಿಡ್ಜ್)

ಏಕದಿನ ಸರಣಿ ವೇಳಾಪಟ್ಟಿ:

  1. ಜುಲೈ 12- ಮೊದಲ ಏಕದಿನ ಪಂದ್ಯ (ಕಿಯಾ ಓವಲ್)
  2. ಜುಲೈ 14- 2ನೇ ಏಕದಿನ ಪಂದ್ಯ (ಲಾರ್ಡ್ಸ್)
  3. ಜುಲೈ 17- 3ನೇ ಏಕದಿನ ಪಂದ್ಯ (ಮ್ಯಾಂಚೆಸ್ಟರ್)

ಐರ್ಲೆಂಡ್ ಸರಣಿ ವೇಳಾಪಟ್ಟಿ:

  1. ಜೂನ್ 26- ಮೊದಲ ಟಿ20 ಪಂದ್ಯ (ಡಬ್ಲಿನ್)
  2. ಜೂನ್ 28- 2ನೇ ಟಿ20 ಪಂದ್ಯ (ಡಬ್ಲಿನ್)

ಭಾರತ ತಂಡ: ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಇಶಾನ್ ಕಿಶನ್, ರಿತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ದೀಪಕ್ ಹೂಡಾ, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್

ಭಾರತೀಯ ಟೆಸ್ಟ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಪ್ರಸಿಧ್ದ್ ಕೃಷ್ಣ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:40 am, Mon, 20 June 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ