IND vs ENG: ಭಾರತ ವಿರುದ್ಧದ ಮೊದಲೆರಡು ಟೆಸ್ಟ್​ ಪಂದ್ಯಗಳಿಗೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ

IND vs ENG: ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಮಾತ್ರ ಇಂಗ್ಲೆಂಡ್ ಮಂಡಳಿ ತಂಡವನ್ನು ಘೋಷಿಸಿದೆ. ಜೋ ರೂಟ್ ನಾಯಕತ್ವದಲ್ಲಿ 17 ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ.

IND vs ENG: ಭಾರತ ವಿರುದ್ಧದ ಮೊದಲೆರಡು ಟೆಸ್ಟ್​ ಪಂದ್ಯಗಳಿಗೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ
ಇಂಗ್ಲೆಂಡ್ ಕ್ರಿಕೆಟ್ ತಂಡ
Follow us
| Updated By: ಪೃಥ್ವಿಶಂಕರ

Updated on:Jul 21, 2021 | 6:12 PM

ಭಾರತ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡವನ್ನು ಘೋಷಿಸಲಾಗಿದೆ. ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಮಾತ್ರ ಇಂಗ್ಲೆಂಡ್ ಮಂಡಳಿ ತಂಡವನ್ನು ಘೋಷಿಸಿದೆ. ಜೋ ರೂಟ್ ನಾಯಕತ್ವದಲ್ಲಿ 17 ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ. ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್, ಜಾನಿ ಬೈರ್‌ಸ್ಟೋವ್, ಸ್ಯಾಮ್ ಕುರ್ರನ್ ತಂಡಕ್ಕೆ ಮರಳಿದ್ದಾರೆ. ಅದೇ ಸಮಯದಲ್ಲಿ, ವೇಗದ ಬೌಲರ್ ಆಲಿ ರಾಬಿನ್ಸನ್ ಅವರನ್ನು ಸಹ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಅವರು ನ್ಯೂಜಿಲೆಂಡ್ ಸರಣಿಯ ಮೂಲಕ ಟೆಸ್ಟ್​ಗೆ ಪಾದಾರ್ಪಣೆ ಮಾಡಿದರು. ಆದರೆ ಹಳೆಯ ಟ್ವೀಟ್‌ಗಳ ವಿವಾದದಿಂದಾಗಿ ಅವರನ್ನು ಅಮಾನತುಗೊಳಿಸಲಾಗಿತ್ತು.

ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಇಬ್ಬರು ಸ್ಪಿನ್ನರ್‌ಗಳು ಮತ್ತು ಐದು ವೇಗದ ಬೌಲರ್‌ಗಳನ್ನು ಇಂಗ್ಲೆಂಡ್ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಫೆಬ್ರವರಿ-ಮಾರ್ಚ್ನಲ್ಲಿ ಭಾರತ ಪ್ರವಾಸ ಮಾಡಿದ ಇಂಗ್ಲೆಂಡ್ ತಂಡ ಹಾಗೂ ಈಗ ಪ್ರಕಟವಾಗಿರುವ ತಂಡ ಹೆಚ್ಚು ಕಡಿಮೆ ಒಂದೇ ಆಗಿದೆ. ಇಲ್ಲಿ ರಾಬಿನ್ಸನ್ ಮತ್ತು ಹಸೀಬ್ ಹಮೀದ್ ಮಾತ್ರ ಹೊಸ ಹೆಸರುಗಳು. ಸುಮಾರು ಐದು ವರ್ಷಗಳ ನಂತರ ಹಮೀದ್ ಇತ್ತೀಚೆಗೆ ಇಂಗ್ಲೆಂಡ್ ತಂಡಕ್ಕೆ ಮರಳಿದ್ದಾರೆ. ಅವರು ಭಾರತ ಪ್ರವಾಸದೊಂದಿಗೆ 2016 ರಲ್ಲಿ ಟೆಸ್ಟ್ ಚೊಚ್ಚಲ ಪ್ರವೇಶ ಮಾಡಿದರು. ಆದರೆ ಈ ಪ್ರವಾಸದಲ್ಲಿ ಅವರು ಗಾಯಗೊಂಡ ನಂತರ ಅವರು ಫಾರ್ಮ್ ಕಳಪೆಯಾಗಿತ್ತು. ಈ ಕಾರಣದಿಂದಾಗಿ ಅವರು ಇಂಗ್ಲೆಂಡ್ ತಂಡಕ್ಕೆ ಮರಳಲು ಸಾಧ್ಯವಾಗಲಿಲ್ಲ. ಆದರೆ ಇತ್ತೀಚಿನ ಕೌಂಟಿ ಋತುವಿನಲ್ಲಿ, ಉತ್ತಮ ಪ್ರದರ್ಶನ ನೀಡಿದರು.

ಆದಾಗ್ಯೂ, ಜೋಫ್ರಾ ಆರ್ಚರ್ ಮತ್ತು ಕ್ರಿಸ್ ವೋಕ್ಸ್ ಅವರನ್ನು ಈ ತಂಡದಲ್ಲಿ ಸೇರಿಸಲಾಗಿಲ್ಲ. ಆರ್ಚರ್ ಇತ್ತೀಚೆಗೆ ಗಾಯದಿಂದಾಗಿ ಮರಳಿದ್ದಾರೆ ಆದರೆ ಟೆಸ್ಟ್ ತಂಡಕ್ಕೆ ಪ್ರವೇಶಿಸಲು ಕಾಯಬೇಕಾಗುತ್ತದೆ. ಅದೇ ಸಮಯದಲ್ಲಿ, ವೋಕ್ಸ್ ಸಹ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಲ್ಲದೆ, ವಿಕೆಟ್‌ಕೀಪರ್ ಬೆನ್ ಫಾಕ್ಸ್ ಮತ್ತು ವೇಗದ ಬೌಲರ್ ಆಲಿ ಸ್ಟೋನ್ ಕೂಡ ಗಾಯದಿಂದಾಗಿ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ತಂಡದಲ್ಲಿ ಸ್ಥಾನ ಪಡೆದಿಲ್ಲ.

ಇಂಗ್ಲೆಂಡ್ ತಂಡವು ಈ ಕೆಳಗಿನಂತಿದೆ ಜೋ ರೂಟ್ (ನಾಯಕ), ಜೋಸ್ ಬಟ್ಲರ್, ಜ್ಯಾಕ್ ಲೀಚ್, ಆಲಿ ಪೋಪ್, ಜ್ಯಾಕ್ ಕ್ರೌಲಿ, ಜೇಮ್ಸ್ ಆಂಡರ್ಸನ್, ಡೊಮ್ ಬೆಸ್, ಸ್ಯಾಮ್ ಕರ್ರನ್, ಆಲಿ ರಾಬಿನ್ಸನ್, ಹಸೀಬ್ ಹಮೀದ್, ಡೊಮ್ ಸಿಬ್ಲಿ, ಡಾನ್ ಲಾರೆನ್ಸ್, ಬೆನ್ ಸ್ಟೋಕ್ಸ್, ಸ್ಟುವರ್ಟ್ ಬ್ರಾಡ್, ರೋರಿ ಬರ್ನ್ಸ್, ಮಾರ್ಕ್ ವುಡ್.

Published On - 6:09 pm, Wed, 21 July 21

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು