AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ

India vs England: ಭಾರತದ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಗೆ ಉಭಯ ತಂಡಗಳನ್ನು ಘೋಷಿಸಲಾಗಿದೆ. 16 ಸದಸ್ಯರ ಈ ಬಳಗವನ್ನು ಸ್ಟಾರ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ (Ben Stokes) ಮುನ್ನಡೆಸಲಿದ್ದಾರೆ. ಇನ್ನು ಈ ಸರಣಿಗಾಗಿ ಆಯ್ಕೆ ಮಾಡಲಾದ ಇಂಗ್ಲೆಂಡ್ ತಂಡದಲ್ಲಿ ವೇಗಿ ಗಸ್ ಅಟ್ಕಿನ್ಸನ್ ಸೇರಿದಂತೆ ಮೂವರು ಅನ್‌ಕ್ಯಾಪ್ಡ್ ಆಟಗಾರರಿಗೆ ಅವಕಾಶ ನೀಡಲಾಗಿದೆ.

IND vs ENG: ಭಾರತದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ
Team India
TV9 Web
| Edited By: |

Updated on: Jan 18, 2024 | 7:13 AM

Share

ಭಾರತ ಮತ್ತು ಅಫ್ಘಾನಿಸ್ತಾನ್ (India vs Afghanistan) ನಡುವಣ ಟಿ20 ಸರಣಿ ಮುಗಿದಿದೆ. ಮೂರು ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ (Team India) 3-0 ಅಂತರದಿಂದ ವಶಪಡಿಸಿಕೊಂಡಿದೆ. ಇದೀಗ ಭಾರತ ತಂಡವು ಟೆಸ್ಟ್​ ಸರಣಿಗಾಗಿ ಸಜ್ಜಾಗಬೇಕಿದೆ. ಅಂದರೆ ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಇದೇ ತಿಂಗಳ 25 ರಿಂದ ಶುರುವಾಗಲಿದೆ. 5 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಇನ್ನು 2ನೇ ಪಂದ್ಯವು ವಿಶಾಖಪಟ್ಟಣಂನಲ್ಲಿರುವ ವೈಎಸ್​ಆರ್​ ಸ್ಟೇಡಿಯಂನಲ್ಲಿ ನಡೆದರೆ, 3ನೇ ಪಂದ್ಯವು ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ಜರುಗಲಿದೆ. ನಾಲ್ಕನೇ ಟೆಸ್ಟ್ ಪಂದವು ರಾಂಚಿಯ ಜೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಪಂದ್ಯಕ್ಕೆ ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:

  1. ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)
  2. ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
  3. ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್​ಕೋಟ್)
  4. ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
  5. ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)

ಉಭಯ ತಂಡಗಳ ಘೋಷಣೆ:

ಭಾರತದ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಗೆ ಉಭಯ ತಂಡಗಳನ್ನು ಘೋಷಿಸಲಾಗಿದೆ. 16 ಸದಸ್ಯರ ಈ ಬಳಗವನ್ನು ಸ್ಟಾರ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ (Ben Stokes) ಮುನ್ನಡೆಸಲಿದ್ದಾರೆ. ಇನ್ನು ಈ ಸರಣಿಗಾಗಿ ಆಯ್ಕೆ ಮಾಡಲಾದ ಇಂಗ್ಲೆಂಡ್ ತಂಡದಲ್ಲಿ ವೇಗಿ ಗಸ್ ಅಟ್ಕಿನ್ಸನ್ ಸೇರಿದಂತೆ ಮೂವರು ಅನ್‌ಕ್ಯಾಪ್ಡ್ ಆಟಗಾರರಿಗೆ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ತಂಡದಲ್ಲಿ ಸ್ಟಾರ್ ಆಟಗಾರರಾದ ಜೇಮ್ಸ್ ಅ್ಯಂಡರ್ಸನ್, ಜಾನಿ ಬೈರ್ಸ್ಟೋವ್, ಜೋ ರೂಟ್, ಝಾಕ್ ಕ್ರಾಲಿ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಮತ್ತೊಂದೆಡೆ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಆಯ್ಕೆಯಾಗಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಯುವ ಆಟಗಾರ ಧ್ರುವ್​ ಜುರೇಲ್ ಚೊಚ್ಚಲ ಬಾರಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈ ಸರಣಿಯಿಂದ ಶಾರ್ದೂಲ್ ಠಾಕೂರ್, ಪ್ರಸಿದ್ಧ್ ಕೃಷ್ಣ ಹಾಗೂ ಇಶಾನ್ ಕಿಶನ್ ಅವರನ್ನು ಕೈ ಬಿಡಲಾಗಿದೆ. ಬದಲಿಗೆ ಅವೇಶ್ ಖಾನ್, ಧ್ರುವ್ ಜುರೇಲ್ ಹಾಗೂ ಕುಲ್ದೀಪ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

ಇದನ್ನೂ ಓದಿ: 147 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆ ಬರೆದ ಟೀಮ್ ಇಂಡಿಯಾ

ಭಾರತ ಟೆಸ್ಟ್ ತಂಡ (ಮೊದಲೆರಡು ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ