AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ರಾಹುಲ್- ಸಿರಾಜ್​ಗೆ ಸ್ಥಾನ.. ಭಾರತದ ಪ್ಲೇಯಿಂಗ್ ಇಲೆವೆನ್ ಹೀಗಿದೆ

India vs England: ಟಾಸ್ ಸೋತ ನಂತರ ಭಾರತದ ನಾಯಕ ವಿರಾಟ್ ಕೊಹ್ಲಿ ಅವರು ಕೂಡ ಮೊದಲು ಬ್ಯಾಟಿಂಗ್ ಮಾಡಲು ಬಯಸಿದ್ದೆ ಎಂದು ಹೇಳಿದರು.

India vs England: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ರಾಹುಲ್- ಸಿರಾಜ್​ಗೆ ಸ್ಥಾನ.. ಭಾರತದ ಪ್ಲೇಯಿಂಗ್ ಇಲೆವೆನ್ ಹೀಗಿದೆ
ಜೋ ರೂಟ್, ವಿರಾಟ್ ಕೊಹ್ಲಿ
TV9 Web
| Updated By: ಪೃಥ್ವಿಶಂಕರ|

Updated on:Aug 04, 2021 | 3:22 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಆರಂಭವಾಗಿದೆ. ಉಭಯ ದೇಶಗಳ ನಡುವಿನ ಈ ಟೆಸ್ಟ್ ಪಂದ್ಯ ನಾಟಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಇದರರ್ಥ ಭಾರತ ಮೊದಲು ಬೌಲಿಂಗ್ ಮಾಡುತ್ತಿದೆ. ಟಾಸ್ ಸೋತ ನಂತರ ಭಾರತದ ನಾಯಕ ವಿರಾಟ್ ಕೊಹ್ಲಿ ಅವರು ಕೂಡ ಮೊದಲು ಬ್ಯಾಟಿಂಗ್ ಮಾಡಲು ಬಯಸಿದ್ದೆ ಎಂದು ಹೇಳಿದರು.

ಅಶ್ವಿನ್ ಮತ್ತು ಇಶಾಂತ್ ತಂಡದಲಿಲ್ಲ ಭಾರತದ ತಂಡದಲ್ಲಿ, ಅಶ್ವಿನ್ ಮತ್ತು ಇಶಾಂತ್ ಗೆ ಪ್ಲೇಯಿಂಗ್ ಇಲೆವೆನ್ ನಲ್ಲಿ ಅವಕಾಶ ಸಿಕ್ಕಿಲ್ಲ. ಗಾಯಗೊಂಡಿದ್ದಾರೆ ಎಂದು ಇಶಾಂತ್ ಬಗ್ಗೆ ಹೇಳಲಾಗುತ್ತಿದೆ, ಆದ್ದರಿಂದ ಅವರ ಜಾಗದಲ್ಲಿ ಶಾರ್ದೂಲ್ ಠಾಕೂರ್ ಅವರಿಗೆ ಅವಕಾಶ ನೀಡಲಾಗಿದೆ. ಅದೇ ಸಮಯದಲ್ಲಿ, ಅಶ್ವಿನ್ ಅವರನ್ನು ಪ್ಲೇಯಿಂಗ್ ಇಲೆವೆನ್ ನಲ್ಲಿ ಸೇರಿಸದಿರುವುದಕ್ಕೆ ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅಶ್ವಿನ್ ಬದಲಿಗೆ ಸಿರಾಜ್ ಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಭಾರತ 4 ವೇಗದ ಬೌಲರ್‌ಗಳೊಂದಿಗೆ ಮೊದಲ ಟೆಸ್ಟ್‌ಗೆ ಹೋಗುತ್ತಿದೆ. ಅದೇ ಸಮಯದಲ್ಲಿ, ಮಯಾಂಕ್ ಅಗರ್ವಾಲ್ ಆರಂಭಿಕ ಹಂತದಲ್ಲಿ ಗಾಯಗೊಂಡರು. ಆದ್ದರಿಂದ, ರೋಹಿತ್ ಶರ್ಮಾ ಜೊತೆ ಇನಿಂಗ್ಸ್ ಆರಂಭಿಸುವ ಜವಾಬ್ದಾರಿಯನ್ನು ಕೆಎಲ್ ರಾಹುಲ್ ಅವರಿಗೆ ವಹಿಸಲಾಗಿದೆ.

ಭಾರತವು ಕೊನೆಯದಾಗಿ 2007 ರಲ್ಲಿ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿತು. ಕೊನೆಯ 3 ಪ್ರವಾಸಗಳಲ್ಲಿ ಆಡಿದ ಸರಣಿಯಲ್ಲಿ, ಅವರು ಕೇವಲ 2 ಪಂದ್ಯಗಳನ್ನು ಗೆಲ್ಲಲು ಸಾಧ್ಯವಾಯಿತು. ಅದೇ ಸಮಯದಲ್ಲಿ, ಭಾರತ ತಂಡವು ಇಂಗ್ಲೆಂಡಿನಲ್ಲಿ ಇದುವರೆಗೆ 62 ಟೆಸ್ಟ್ ಪಂದ್ಯಗಳನ್ನು ಆಡಿದೆ ಆದರೆ ಕೇವಲ 7 ಮಾತ್ರ ಗೆಲ್ಲಲು ಸಾಧ್ಯವಾಗಿದೆ. ಅಂದರೆ 34 ಸೋಲು ಮತ್ತು 21 ಪಂದ್ಯಗಳು ಡ್ರಾ ಆಗಿವೆ. ನಿಸ್ಸಂಶಯವಾಗಿ, ವಿರಾಟ್ ಮತ್ತು ತಂಡ ಈ ಬಾರಿ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲಬೇಕಾದರೆ, ಅದು ನಾಟಿಂಗ್‌ಹ್ಯಾಮ್‌ನಿಂದಲೇ ಆರಂಭವಾಗಬೇಕು.

ಭಾರತದ ಪ್ಲೇಯಿಂಗ್ ಇಲೆವೆನ್ ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ರಿಷಭ್ ಪಂತ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್

Published On - 3:17 pm, Wed, 4 August 21

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ