India vs England: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾದ ಇಬ್ಬರು ಕ್ರಿಕೆಟಿಗರಿಗೆ ಕೊರೋನಾ ಪಾಸಿಟಿವ್

ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಗಾಗಿ ಭಾರತೀಯ ಕ್ರಿಕೆಟ್​ನ 23 ಸದಸ್ಯರು ಆಂಗ್ಲರ ನಾಡಿಗೆ ತೆರಳಿದ್ದರು. 20 ದಿನಗಳ ವಿರಾಮದ ಬಳಿಕ ಎಲ್ಲರೂ ಬಯೋ ಬಬಲ್​ನಿಂದ ಹೊರಬಂದಿದ್ದು ಈ ವೇಳೆ ಸೋಂಕು ತಗುಲಿರಬಹುದು ಎಂದು ಹೇಳಲಾಗಿದೆ.

India vs England: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾದ ಇಬ್ಬರು ಕ್ರಿಕೆಟಿಗರಿಗೆ ಕೊರೋನಾ ಪಾಸಿಟಿವ್
ಟೀಮ್ ಇಂಡಿಯಾ
Follow us
| Updated By: Vinay Bhat

Updated on:Jul 15, 2021 | 9:58 AM

ಇಂಗ್ಲೆಂಡ್ (England) ವಿರುದ್ಧ ಆಗಸ್ಟ್​ 4 ರಿಂದ ಆರಂಭವಾಗಲಿರುವ ಐದು ಪಂದ್ಯಗಳ ಟೆಸ್ಟ್​ ಸರಣಿಗಾಗಿ ಆಂಗ್ಲರ ನಾಡಿಗೆ ತೆರಳಿರುವ ಟೀಮ್ ಇಂಡಿಯಾ (Team India) ಆಟಗಾರರಲ್ಲಿ ಇಬ್ಬರಿಗೆ ಕೊರೋನಾ (Corona) ಸೋಂಕು ದೃಢಪಟ್ಟಿದೆ. ಆಟಗಾರರ ಹೆಸರನ್ನು ಇನ್ನೂ ಗೌಪ್ಯವಾಗಿ ಇಡಲಾಗಿದ್ದು, ಶೀಘ್ರವೇ ಬಿಸಿಸಿಐಯಿಂದ (BCCI) ಅಧಿಕೃತ ಪ್ರಕಟಣೆ ಬಿಡುಗಡೆ ಆಗುವ ಸಾಧ್ಯತೆ ಇದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಗಾಗಿ ಭಾರತೀಯ ಕ್ರಿಕೆಟ್​ನ 23 ಸದಸ್ಯರು ಆಂಗ್ಲರ ನಾಡಿಗೆ ತೆರಳಿದ್ದರು. 20 ದಿನಗಳ ವಿರಾಮದ ಬಳಿಕ ಎಲ್ಲರೂ ಬಯೋ ಬಬಲ್​ನಿಂದ ಹೊರಬಂದಿದ್ದು ಈ ವೇಳೆ ಸೋಂಕು ತಗುಲಿರಬಹುದು ಎಂದು ಹೇಳಲಾಗಿದೆ.

“ಹೌದು, ಭಾರತದ ಇಬ್ಬರು ಆಟಗಾರನಿಗೆ ಕೊರೋನಾ ಪಾಸಿಟಿವ್ ಬಂದಿದೆ. ಆದರೆ, ಅವರಿಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ. ಅವರು ಸರಿಯಾದ ಸ್ಥಳದಲ್ಲಿ ಕ್ವಾರಂಟೈನ್​ನಲ್ಲಿದ್ದಾರೆ. ಅವರು ತಂಡದ ಜೊತೆ ಪ್ರಯಾಣ ಬೆಳೆಸುತ್ತಿಲ್ಲ” ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಜನದಟ್ಟನೆ ಇರುವ ಸ್ಥಳಗಳಿಗೆ ಹೋಗಬಾರದು ಎಂದು ಬಿಸಿಸಿಐ ಟೀಮ್ ಇಂಡಿಯಾ ಕ್ರಿಕೆಟಿಗರಿಗೆ ಖಡಕ್ ಆಗಿ ಹೇಳಿದೆ.

ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್​ ಆರಂಭವಾಗಲಿದ್ದು, ಈ ಪ್ರಯುಕ್ತತ ಇಡೀ ತಂಡ ಡರ್‌ಹ್ಯಾಮ್‌ನ ಬಯೋಬಬಲ್‌ನಲ್ಲಿ ಮರು ಒಟ್ಟು ಸೇರಲಿತ್ತು. ಆದರೆ ಇಬ್ಬರು ಆಟಗಾರರಿಗೆ ಕೊರೋನಾ ಕಾಣಿಸಿಕೊಂಡಿದೆ. ಈ ಪೈಕಿ ಒಬ್ಬರು ಗುಣಮುಖರಾಗಿದ್ದಾರೆ ಎನ್ನಲಾಗಿದೆ. ಸೋಂಕಿರುವ ಮತ್ತೊಬ್ಬ ಆಟಗಾರ ಡರ್‌ಹ್ಯಾಮ್‌ಗೆ ಪ್ರಯಾಣಿಸುತ್ತಿಲ್ಲ.

ಇಂಗ್ಲೆಂಡ್​ನಲ್ಲಿ ಕೊರೋನಾ ವೈರಸ್ ಡೆಲ್ಟಾ ರೂಪಾಂತರದಿಂದಾಗಿ ಬಯೋ ಬಬಲ್​ನಲ್ಲಿ ಅಪಾಯ ಹೆಚ್ಚಾಗಿದೆ. ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗಳ ಸುಧಾರಣೆಗಾಗಿ ನಾವು ಪ್ರೋಟೋಕಾಲ್ ನಿಯಮವನ್ನು ಮಾಡಿದ್ದೇವೆ ಎಂದು ಇತ್ತೀಚೆಗಷ್ಟೆ ಇಸಿಬಿಯ ಮುಖ್ಯ ಕಾರ್ಯನಿರ್ವಾಹಕ ಟಾಮ್ ಹ್ಯಾರಿಸನ್ ಹೇಳಿದ್ದರು.

ಭಾರತೀಯ ತಂಡದಲ್ಲಿ ಈಗಾಗಲೇ ಯುವ ಆರಂಭಿಕ ಬ್ಯಾಟ್ಸ್‌ಮನ್‌ ಶುಬ್ಮನ್ ಗಿಲ್ ಗಾಯಕ್ಕೀಡಾಗಿದ್ದಾರೆ. ಭಾರತದ ಆರಂಭಿಕ ಸ್ಥಾನಕ್ಕೆ ಯಾರು ಬರಲಿದ್ದಾರೆ ಅನ್ನೋದು ತಲೆನೋವಾಗಿದೆ. ಇದರ ಬೆನ್ನಲ್ಲೇ ತಂಡದ ಒರ್ವ ಆಟಗಾರನಿಗೆ ಕೊರೋನಾ ದೃಢ ಪಟ್ಟಿರುವುದು ಆಘಾತಕ್ಕೆ ಕಾರಣವಾಗಿದೆ. ಆಗಸ್ಟ್ 4ರಿಂದ ಸೆಪ್ಟೆಂಬರ್ 14ರ ವರೆಗೆ ಭಾರತ-ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟೆಸ್ಟ್‌ ಸರಣಿ ನಡೆಯಲಿದೆ.

INDW vs ENGW: ಮಂದಾನ ಸ್ಪೋಟಕ ಬ್ಯಾಟಿಂಗ್ ವ್ಯರ್ಥ: 8 ವಿಕೆಟ್​ಗಳಿಂದ ಗೆದ್ದ ಇಂಗ್ಲೆಂಡ್​ಗೆ ಟಿ-20 ಸರಣಿ

Tokyo Olympics: ಒಲಂಪಿಕ್ಸ್​ ಪದಕ ವಿತರಣೆ ಸಮಾರಂಭದಲ್ಲಿ ಮಹತ್ವದ ಬದಲಾವಣೆ.. ಏನದು?

(India vs England Two Indian cricketer in England tests positive one still in isolation)

Published On - 9:51 am, Thu, 15 July 21

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ