AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಪಂದ್ಯದ ಮಧ್ಯೆ ಅಂಪೈರ್ ಜೊತೆ ಮತ್ತೆ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿ: ಇಲ್ಲಿದೆ ಕಾರಣ

ಹಸೀಬ್ ಕ್ರೀಸ್​ನಿಂದ ತುಂಬಾ ಹೊರಗೆ ಬಂದು ಶೂನಲ್ಲಿ ಸೈನ್ ಮಾಡಿದರು. ಆದರೆ, ಇದಕ್ಕೆ ಅಂಪೈರ್ ಯಾವುದೇ ವಿರೋಧ ವ್ಯಕ್ತಪಡಿಸಲಿಲ್ಲ. ಇದು ಬೌಲರ್​ಗಳಿಗೆ ತೊಂದರೆ ಆಗುತ್ತದೆ ಎಂದು ಗಮನಿಸಿದ ಕೊಹ್ಲಿ ಅಂಪೈರ್ ಬಳಿ ವಾಗ್ವಾದಕ್ಕಿಳಿದರು.

India vs England: ಪಂದ್ಯದ ಮಧ್ಯೆ ಅಂಪೈರ್ ಜೊತೆ ಮತ್ತೆ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿ: ಇಲ್ಲಿದೆ ಕಾರಣ
Virat Kohli and umpire
TV9 Web
| Updated By: Vinay Bhat|

Updated on: Sep 03, 2021 | 12:02 PM

Share

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ (England) ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. ಮೊದಲ ದಿನವೇ 191 ರನ್​ಗೆ ಸರ್ವಪತನ ಕಂಡಿರುವ ಕೊಹ್ಲಿ (Virat Kohli) ಬಳಗ ಪಂದ್ಯವನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಬೇಕಿದೆ. ಇತ್ತ ಇಂಗ್ಲೆಂಡ್ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 53 ರನ್ ಗಳಿಸಿದೆ. ಇದರ ನಡುವೆ ಪಂದ್ಯದ ಮಧ್ಯೆ ನಾಯಕ ವಿರಾಟ್ ಕೊಹ್ಲಿ ಅಂಪೈರ್ ಬಳಿ ವಾಗ್ವಾದಕ್ಕಿಳಿದ ಘಟನೆ ನಡೆಯಿತು.

ಭಾರತ ಆಲೌಟ್ ಆಗಿ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಪರ ರಾರಿ ಬರ್ನ್ಸ್ ಹಾಗೂ ಹಸೀಬ್ ಹಮೀದ್ ಕಣಕ್ಕಿಳಿದರು. ಈ ಸಂದರ್ಭ ಹಸೀಬ್ ಕ್ರೀಸ್​ನಿಂದ ತುಂಬಾ ಹೊರಗೆ ಬಂದು ಶೂನಲ್ಲಿ ಸೈನ್ ಮಾಡಿದರು. ಆದರೆ, ಇದಕ್ಕೆ ಅಂಪೈರ್ ಯಾವುದೇ ವಿರೋಧ ವ್ಯಕ್ತಪಡಿಸಲಿಲ್ಲ. ಇದು ಬೌಲರ್​ಗಳಿಗೆ ತೊಂದರೆ ಆಗುತ್ತದೆ ಎಂದು ಗಮನಿಸಿದ ಕೊಹ್ಲಿ ಅಂಪೈರ್ ಬಳಿ ವಾಗ್ವಾದಕ್ಕಿಳಿದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಭಾರತ ಭೋಜನ ವಿರಾಮಕ್ಕೂ ಮುನ್ನವೇ ತನ್ನ ಪ್ರಮುಖ ಮೂರು ವಿಕೆಟ್ ಕಳೆದುಕೊಂಡಿತು. ರೋಹಿತ್ ಶರ್ಮಾ (11) ಮತ್ತು ಕೆ. ಎಲ್ ರಾಹುಲ್ (17) ಉತ್ತಮ ಆರಂಭಿಸುವಲ್ಲಿ ಎಡವಿದರು. ಚೇತೇಶ್ವರ್ ಪೂಜಾರ ಮತ್ತದೆ ತಪ್ಪೆಸಗಿ 4 ರನ್​ಗೆ ಬ್ಯಾಟ್ ಕೆಳಗಿಟ್ಟರು. ಈ ಸಂದರ್ಭ ನಾಯಕ ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ತಂಡಕ್ಕೆ ಕೊಂಚ ಆಸರೆಯಾದರು.

ಆದರೆ, 5ನೇ ಸ್ಥಾನದಲ್ಲಿ ಕಣಕ್ಕಿಳಿದ ಜಡೇಜಾ ಸಿಕ್ಕ ಅವಕಾಶವನ್ನು ಉತ್ತಮವಾಗಿ ಉಪಯೋಗಿಸಿಕೊಳ್ಳಲಿಲ್ಲ. 34 ಎಸೆತಗಳಲ್ಲಿ 10 ರನ್ ಬಾರಿಸಿ ನಿರ್ಗಮಿಸಿದರು. ಕೊಹ್ಲಿಯ ಹೋರಾಟ ಅರ್ಧಶತಕಕ್ಕೆ ಅಂತ್ಯವಾಯಿತು. 96 ಎಸೆತಗಳಲ್ಲಿ 8 ಬೌಂಡರಿ ಬಾರಿಸಿ 50 ರನ್​ಗೆ ಔಟ್ ಆದರು. ಉಪ ನಾಯಕ ಅಜಿಂಕ್ಯಾ ರಹಾನೆ (14) ಹಾಗೂ ರಿಷಭ್ ಪಂತ್ (9) ಈ ಬಾರಿಕೂಡ ತಂಡಕ್ಕೆ ಆಸೆಯಾಗಲಿಲ್ಲ.

ಆದರೆ, ಶಾರ್ದೂಲ್ ಠಾಕೂರ್ ಯಾರೂ ಗ್ರಹಿಸದ ರೀತಿಯಲ್ಲಿ ಬ್ಯಾಟ್ ಬೀಸಿದರು. 36 ಎಸೆತಗಳಲ್ಲಿ 7 ಬೌಂಡರಿ, 3 ಸಿಕ್ಸರ್ ಸಿಡಿಸಿ 57 ರನ್ ಬಾರಿಸಿ ಉಮೇಶ್ ಯಾದವ್ (10) ಜೊತೆ ಅರ್ಧಶತಕದ ಜೊತೆಯಾಟ ಆಡಿದರು. ಅಂತಿಮವಾಗಿ ಭಾರತ 61.3 ಓವರ್​ನಲ್ಲಿ 191 ರನ್​ಗೆ ಆಲೌಟ್ ಆಯಿತು. ಇಂಗ್ಲೆಂಡ್ ಪರ ಕ್ರಿಸ್ ವೋಕ್ಸ್ 4 ವಿಕೆಟ್ ಕಿತ್ತರೆ, ರಾಬಿನ್ಸನ್ 3, ಜೇಮ್ಸ್ ಆಂಡರ್ಸನ್ ಹಾಗೂ ಓವರ್ಟನ್ ತಲಾ 1 ವಿಕೆಟ್ ಪಡೆದರು.

ಬಳಿಕ ತನ್ನ ಮೊದಲ ಇನ್ನಿಂಗ್ಸ್ ಶುರುಮಾಡಿದ ಇಂಗ್ಲೆಂಡ್​ಗೆ ಆರಂಭದಲ್ಲೇ ಬುಮ್ರಾ ಶಾಕ್ ನೀಡಿದರು. ರಾರಿ ಬರ್ನ್ಸ್ 5 ರನ್ ಗಳಿಸಿ ಬೌಲ್ಡ್ ಆದರೆ, ಹಸೀಬ್ ಹಮೀದ್ ಸೊನ್ನೆ ಸುತ್ತಿದರು. ಉಮೇಶ್ ಯಾದವ್ ಇಂಗ್ಲೆಂಡ್​ನ ಅತಿದೊಡ್ಡ ವಿಕೆಟ್ ಜೋ ರೂಟ್ (21) ಅವರನ್ನು ಔಟ್ ಮಾಡಿ ಬ್ರೇಕ್ ತಂದುಕೊಟ್ಟರು.

ಪರಿಣಾಮ ಇಂಗ್ಲೆಂಡ್ ಮೊದಲ ದಿನದಾಟದ ಅಂತ್ಯಕ್ಕೆ 17 ಓವರ್​ನಲ್ಲಿ 3 ವಿಕೆಟ್ ಕಳೆದುಕೊಂಡು 53 ರನ್ ಗಳಿಸಿದೆ. 138 ರನ್​ಗಳ ಹಿನ್ನಡೆಯಲ್ಲಿದೆ. ಡೇವಿಡ್ ಮಲನ್ 26 ಹಾಗೂ ಕ್ರ್ಯಾಗ್ ಓವರ್ಟನ್ 1 ರನ್ ಗಳಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಭಾರತ ಪರ ಬುಮ್ರಾ 2 ಹಾಗೂ ಉಮೇಶ್ ಯಾದವ್1 ವಿಕೆಟ್ ಪಡೆದಿದ್ದಾರೆ.

Tokyo Paralympics: ಪ್ಯಾರಾಲಿಂಪಿಕ್ಸ್ 2020ರಲ್ಲಿ ಎರಡನೇ ಪದಕ ಗೆದ್ದ ಚಿನ್ನದ ಹುಡುಗಿ ಅವನಿ: ಶೂಟಿಂಗ್​ನಲ್ಲಿ ಕಂಚು

India vs England: ಹೊಸ ಪ್ರಯೋಗಕ್ಕಿಳಿದು ಕೈಸುಟ್ಟುಕೊಂಡ ಕೊಹ್ಲಿ: ಜಡೇಜಾಗೆ ಬಡ್ತಿ ನೀಡಲು ಕಾರಣವೇನು ಗೊತ್ತಾ?

(India vs England Virat Kohli argues with umpires again at The Oval Here is the reason)

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ