AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: 2ನೇ ಟೆಸ್ಟ್​ಗೂ ಮುನ್ನ ಭಾರತ-ಇಂಗ್ಲೆಂಡ್​ ತಂಡಗಳಿಗೆ ದಂಡ..!

India vs England 2nd Test: ಭಾರತ-ಇಂಗ್ಲೆಂಡ್​ ನಡುವಣ 2ನೇ ಪಂದ್ಯವು ಆಗಸ್ಟ್ 12 ರಂದು ಲಾರ್ಡ್ಸ್​ನಲ್ಲಿ ಶುರುವಾಗಲಿದ್ದು, ಈ ಪಂದ್ಯದಲ್ಲಿ ಜಯಿಸುವ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಜಯದ ಖಾತೆ ತೆರೆಯುವ ವಿಶ್ವಾಸದಲ್ಲಿದೆ ವಿರಾಟ್ ಕೊಹ್ಲಿ ಪಡೆ.

India vs England: 2ನೇ ಟೆಸ್ಟ್​ಗೂ ಮುನ್ನ ಭಾರತ-ಇಂಗ್ಲೆಂಡ್​ ತಂಡಗಳಿಗೆ ದಂಡ..!
India vs England
TV9 Web
| Edited By: |

Updated on: Aug 11, 2021 | 2:35 PM

Share

IND vs ENG: ನ್ಯಾಟಿಂಗ್​ಹ್ಯಾಮ್​ನಲ್ಲಿ ನಡೆದ ಭಾರತ-ಇಂಗ್ಲೆಂಡ್ (India vs England)​ ನಡುವಣ ಮೊದಲ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಈ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್​ಗಾಗಿ ನಡೆಸಿದಕ್ಕಾಗಿ ಇದೀಗ ಭಾರತ-ಇಂಗ್ಲೆಂಡ್ ತಂಡಗಳಿಗೆ ಪಂದ್ಯದ ಶುಲ್ಕದ ಶೇ.40 ರಷ್ಟು ದಂಡ ವಿಧಿಸಲಾಗಿದೆ. ಅಷ್ಟೇ ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಅಂಕದಿಂದ 2 ಪಾಯಿಂಟ್​ಗಳನ್ನು ಕಳೆಯಲಾಗಿದೆ. ​

ಐಸಿಸಿ (ICC) ನೀತಿ ಸಂಹಿತೆಯ ಕಾಯ್ದೆ 2.22 ರ ಪ್ರಕಾರ , ಕನಿಷ್ಠ ಓವರ್-ರೇಟ್ ಬೌಲಿಂಗ್ ಶಿಕ್ಷೆ ಅನುಸಾರ ಆಟಗಾರರು ತಮ್ಮ ಪಂದ್ಯದ ಶೇ. 20 ರಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ. ಹಾಗೆಯೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಿಯಮ 16.11.2 ರ ಪ್ರಕಾರ, ನಿಧಾನಗತಿಯ ಬೌಲಿಂಗ್​ ಶಿಕ್ಷೆಯನುಸಾರ ಒಂದು ತಂಡಕ್ಕೆ ಒಂದು ಪಾಯಿಂಟ್ ಕಡಿತಗೊಳಿಸಲಾಗುತ್ತದೆ. ಅದರಂತೆ ಉಭಯ ತಂಡಗಳು ತಲಾ ಶೇ.20 ರಷ್ಟು ದಂಡ ಪಾವತಿಸಬೇಕಾಗುತ್ತದೆ. ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಅಂಕದಿಂದ ತಲಾ ಒಂದೊಂದು ಪಾಯಿಂಟ್ ಕಳೆದುಕೊಳ್ಳಲಿದೆ.

ಇನ್ನು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಹೊಸ ನಿಯಮದ ಪ್ರಕಾರ ಪ್ರತಿ ಪಂದ್ಯಕ್ಕೆ 12 ಅಂಕ ನಿಗದಿಪಡಿಸಲಾಗಿದೆ. ಹಾಗೆಯೇ ಪಂದ್ಯ ಟೈ ಆದರೆ 6 ಅಂಕ ಹಾಗೂ ಪಂದ್ಯ ಡ್ರಾ ಆದರೆ 4 ಅಂಕ ನೀಡಲಾಗುತ್ತದೆ. ಇದೀಗ ಮೊದಲ ಪಂದ್ಯದಲ್ಲಿ 4 ಅಂಕ ಪಡೆದಿದ್ದ ಭಾರತ-ಇಂಗ್ಲೆಂಡ್ ತಂಡಗಳು ತಲಾ ಒಂದೊಂದು ಅಂಕಗಳನ್ನು ಕಳೆದುಕೊಂಡಿದೆ. ಇನ್ನು ನಿಧಾನಗತಿಯ ಬೌಲಿಂಗ್​ ಬಗ್ಗೆ ಇಂಗ್ಲೆಂಡ್ ನಾಯಕ ಜೋ ರೂಟ್ ಮತ್ತು ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ತಪ್ಪೊಪ್ಪಿಕೊಂಡಿದ್ದು, ಹೀಗಾಗಿ ಔಪಚಾರಿಕ ವಿಚಾರಣೆಗಳ ಅಗತ್ಯವಿಲ್ಲ ಎಂದು ಮ್ಯಾಚ್ ರೆಫರಿ ತಿಳಿಸಿದ್ದಾರೆ.

ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ (England) 183 ರನ್​ಗಳಿಸಿದರೆ, 2ನೇ ಇನಿಂಗ್ಸ್​ನಲ್ಲಿ 303 ರನ್​ಗಳಿಗೆ ಆಲೌಟ್​ ಆಗಿತ್ತು. ಇದಕ್ಕೆ ಉತ್ತರವಾಗಿ ಭಾರತ ಮೊದಲ ಇನಿಂಗ್ಸ್​ನ್ನು 278 ರನ್​ಗಳೊಂದಿಗೆ ಅಂತ್ಯಗೊಳಿಸಿತ್ತು. ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ್ದ ಟೀಮ್ ಇಂಡಿಯಾ (Team India) 2ನೇ ಇನಿಂಗ್ಸ್​ನಲ್ಲಿ 209 ರನ್​ಗಳಿಸಬೇಕಿತ್ತು. ಇದಾಗಿ ನಾಲ್ಕನೇ ದಿನದಾಟದ ಅಂತ್ಯಕ್ಕೆ ಭಾರತ ಒಂದು ವಿಕೆಟ್ ನಷ್ಟದೊಂದಿಗೆ 52 ರನ್​ಗಳಿಸಿತ್ತು. ಅದರಂತೆ ಗೆಲ್ಲಲು ಅಂತಿಮ ದಿನದಾಟದಲ್ಲಿ 157 ರನ್​ಗಳನ್ನು ಕಲೆಹಾಕಬೇಕಿತ್ತು. ಆದರೆ 5ನೇ ದಿನದಾಟ ಮಳೆಗೆ ಅಹುತಿಯಾದ ಕಾರಣ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು.

ಭಾರತ-ಇಂಗ್ಲೆಂಡ್​ ನಡುವಣ 2ನೇ ಪಂದ್ಯವು ಆಗಸ್ಟ್ 12 ರಂದು ಲಾರ್ಡ್ಸ್​ನಲ್ಲಿ ಶುರುವಾಗಲಿದ್ದು, ಈ ಪಂದ್ಯದಲ್ಲಿ ಜಯಿಸುವ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಜಯದ ಖಾತೆ ತೆರೆಯುವ ವಿಶ್ವಾಸದಲ್ಲಿದೆ ವಿರಾಟ್ ಕೊಹ್ಲಿ ಪಡೆ.

ಇದನ್ನೂ ಓದಿ: Jasprit Bumrah: ಜಹೀರ್ ಖಾನ್ ದಾಖಲೆ ಸರಿಗಟ್ಟಿದ ಜಸ್​ಪ್ರೀತ್ ಬುಮ್ರಾ

ಇದನ್ನೂ ಓದಿ: IPL 2021: ಐಪಿಎಲ್​ನ ಪ್ರಮುಖ ನಿಯಮ ಬದಲಿಸಿದ ಬಿಸಿಸಿಐ

ಇದನ್ನೂ ಓದಿ: IPL 2021: ಐಪಿಎಲ್ ಹೊಸ ಅಪ್ಡೇಡ್: ಆಟಗಾರರಿಗೆ ಬಿಗ್ ರಿಲೀಫ್

(India vs England: Virat Kohli, Joe Root both fined for slow over rates)

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ