AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adelaide Weather: ಭಾರತ ಇಂಗ್ಲೆಂಡ್ ಸೆಮಿ ಫೈನಲ್ ಪಂದ್ಯಕ್ಕೆ ಮಳೆಯ ಕಾಟ?: ಇಲ್ಲಿದೆ ನೋಡಿ ಹವಾಮಾನ ವರದಿ

India vs England Weather Forecast: ಟಿ20 ವಿಶ್ವಕಪ್​ ಸೆಮಿ ಫೈನಲ್​ನ ಭಾರತ- ಇಂಗ್ಲೆಂಡ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುತ್ತಾ?, ಅಡಿಲೇಡ್ ಹವಾಮಾನ (Adelaide Weather) ಹೇಗಿದೆ? ಎಂಬುದನ್ನು ನೋಡೋಣ.

Adelaide Weather: ಭಾರತ ಇಂಗ್ಲೆಂಡ್ ಸೆಮಿ ಫೈನಲ್ ಪಂದ್ಯಕ್ಕೆ ಮಳೆಯ ಕಾಟ?: ಇಲ್ಲಿದೆ ನೋಡಿ ಹವಾಮಾನ ವರದಿ
India vs England Weather
TV9 Web
| Updated By: Vinay Bhat|

Updated on: Nov 10, 2022 | 9:05 AM

Share

ಐಸಿಸಿ ಟಿ20 ವಿಶ್ವಕಪ್​ನಲ್ಲಿ (T20 World Cup) ಭರ್ಜರಿ ಪ್ರದರ್ಶನ ತೋರಿ ಸೆಮಿ ಫೈನಲ್​ಗೆ ಲಗ್ಗೆಯಿಟ್ಟಿರುವ ಭಾರತಕ್ಕೆ ಇಂದು ಕಠಿಣ ಸವಾಲು ಎದುರಾಗಲಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ಆಯೋಜಿಸಲಾಗಿರುವ ದ್ವಿತೀಯ ಸೆಮೀಸ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ (India vs England) ಸೆಣೆಸಾಟ ನಡೆಸಬೇಕಿದೆ. ಇಲ್ಲಿ ಗೆದ್ದ ತಂಡ ಫೈನಲ್​ಗೇರಲಿದ್ದು ಪಾಕಿಸ್ತಾನ ಜೊತೆ ಪ್ರಶಸ್ತಿಗಾಗಿ ಕಾದಾಡಲಿದೆ. 2014ರ ವಿಶ್ವಕಪ್ ಟೂರ್ನಿಯ ನಂತರ ಭಾರತ ತಂಡವು ಫೈನಲ್‌ ಪ್ರವೇಶಿಸಿಲ್ಲ. ಅಲ್ಲದೇ 2013ರ ನಂತರ ಯಾವುದೇ ಐಸಿಸಿ ಟ್ರೋಫಿಯನ್ನೂ ಜಯಿಸಿಲ್ಲ. ಹೀಗಾಗಿ ರೋಹಿತ್ ಪಡೆಗೆ ಇದೊಂದು ಅತ್ಯುತ್ತಮ ಅವಕಾಶ. ಆದರೆ, ಈ ಹೈವೋಲ್ಟೇಜ್ ಸೆಮಿ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುತ್ತಾ?, ಅಡಿಲೇಡ್ ಹವಾಮಾನ (Adelaide Weather) ಹೇಗಿದೆ? ಎಂಬುದನ್ನು ನೋಡೋಣ.

ಅಡಿಲೇಡ್‌ ಹವಾಮಾನ:

ಅಡಿಲೇಡ್‌ನ ಹವಾಮಾನ ವರದಿ ಪ್ರಕಾರ, ಭಾರತ- ಇಂಗ್ಲೆಂಡ್ ಪಂದ್ಯ ನಡೆಯುವ ದಿನ ಗುರುವಾರ ಮೋಡ ಮುಚ್ಚಿದ ವಾತಾವರಣ ಇರಲಿದೆ. ವೆದರ್‌ ಡಾಟ್‌ ಕಾಮ್‌ ವರದಿ ಹೇಳುವುದೇನೆಂದರೆ, ಮೋಡಗಳ ಪ್ರಮಾಣ ಹೆಚ್ಚಿದ್ದರು ಕೂಡ ಯಾವುದೇ ಮಳೆಯಾಗುವ ಸಾಧ್ಯತೆ ಇಲ್ಲ. ಸಂಪೂರ್ಣ 40 ಓವರ್​ಗಳ ಪಂದ್ಯ ನಡೆಯಲಿದೆ. ಟೂರ್ನಿಯಲ್ಲಿ ಈಗಾಗಲೇ ಹಲವು ಪಂದ್ಯಗಳು ಮಳೆಗೆ ಆಹುತಿಯಾಗಿವೆ. ಹೀಗಾಗಿ ಕ್ರಿಕೆಟ್‌ ಪ್ರಿಯರಲ್ಲಿ ಭಾರತ-ಇಂಗ್ಲೆಂಡ್‌ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದರೆ ಎಂಬ ಆತಂಕ ಕಾಡಿತ್ತು. ಆದರೆ, ಅಡಿಲೇಡ್​ನಲ್ಲಿ ಗುರುವಾರ ತಣ್ಣನೆಯ ಗಾಳಿ ಬೀಸಲಿದ್ದು, ಇದು ಸ್ವಿಂಗ್‌ ಬೌಲರ್‌ಗಳಿಗೆ ನೆರವಾಗಲಿದೆ. ಮಳೆ ಸಾಧ್ಯತೆ ಇಲ್ಲವಾದ ಕಾರಣ ಸಂಪೂರ್ಣ ಪಂದ್ಯ ನಡೆಯಲಿದೆಯಂತೆ.

ಇದನ್ನೂ ಓದಿ
Image
India vs England: ಇಂದು ಭಾರತ- ಇಂಗ್ಲೆಂಡ್ ನಡುವೆ ಸೆಮಿ ಫೈನಲ್ ಪಂದ್ಯ: ಗೆದ್ದ ತಂಡ ಫೈನಲ್​ಗೆ ಎಂಟ್ರಿ
Image
IND vs ENG: ಅಡಿಲೇಡ್‌ನಲ್ಲಿ ಟಾಸ್ ಸೋತವನೇ ಬಾಸ್; 11 ಪಂದ್ಯಗಳಲ್ಲಿ ಟಾಸ್ ಗೆದ್ದವರು ಪಂದ್ಯ ಗೆದ್ದಿಲ್ಲ..!
Image
PAK vs NZ: ಪವರ್‌ಪ್ಲೇ ಮುಗಿದ ತಕ್ಷಣವೇ ಗೆಲುವು ನಿರ್ಧಾರವಾಯಿತು! ಪಾಕ್ ಓಪನರ್ ರಿಜ್ವಾನ್
Image
ಮೊದಲೆರಡು ಪಂದ್ಯ ಸೋತರೂ ಫೈನಲ್​ಗೆ ಎಂಟ್ರಿ! ಟಿ20 ವಿಶ್ವಕಪ್‌ನಲ್ಲಿ ಪಾಕ್ ಪ್ರಯಾಣವೇ ರೋಚಕ

ಮಳೆ ಬಂದರೆ ನಿಯಮವೇನು?:

ಟಿ20 ವಿಶ್ವಕಪ್​ನ ಸೆಮಿ ಫೈನಲ್ ಮತ್ತು ಫೈನಲ್ ಪಂದ್ಯದಲ್ಲಿ ಫಲಿತಾಂಶ ನೀಡಲು ಎರಡೂ ಇನ್ನಿಂಗ್ಸ್​ಗಳಲ್ಲಿ ಕನಿಷ್ಠ ಹತ್ತು ಓವರ್ ಆಟ ನಡೆಯಬೇಕು ಎಂಬ ನಿಯಮವಿದೆ. ಎಲ್ಲಾದರು ಸೆಮಿ ಫೈನಲ್​ನಲ್ಲಿ ಮಳೆಯ ಕಾರಣಕ್ಕೆ ತಲಾ ಹತ್ತು ಓವರ್​ನ ಪಂದ್ಯ ನಡೆಯಲು ಅವಕಾಶ ಸಿಗಿದ್ದರೆ ಅದೇ ಪಂದ್ಯ ಮೀಸಲು ದಿನದಂದು ನಡೆಯಲಿದೆ. ಆದರೆ, ಮೀಸಲು ದಿನದಲ್ಲೂ ಮಳೆ ಕಾಟ ಎದುರಾಗಿ ಕನಿಷ್ಠ ತಲಾ ಹತ್ತು ಓವರ್ ಪಂದ್ಯ ನಡೆಯದಿದ್ದರೆ, ಪಾಯಿಂಟ್ ಪಟ್ಟಿಯಲ್ಲಿ ಯಾವ ತಂಡ ಮುಂದಿರುತ್ತದೋ ಆ ತಂಡವು ಫೈನಲ್ ಪ್ರವೇಶ ಮಾಡಲಿದೆ. ಹಾಗೆಯೆ ಇದೇ ಪರಿಸ್ಥಿತಿ ಫೈನಲ್ ಪಂದ್ಯಕ್ಕೂ ಎದುರಾದರೆ ಆಗ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಘೋಷಣೆ ಮಾಡಲಾಗುತ್ತದೆ ಎಂದು ಐಸಿಸಿ ನಿಯಮ ಹೇಳುತ್ತದೆ.

ಅಡಿಲೇಡ್ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಅಚ್ಚುಮೆಚ್ಚು. ಬ್ಯಾಟ್​ಗೆ ಚೆಂಡು ನೇರವಾಗಿ ಸುಲಭವಾಗಿ ಬರುವ ಕಾರಣ ದೊಡ್ಡ ಮೊತ್ತದ ಪಂದ್ಯವನ್ನು ನಿರೀಕ್ಷಿಸಬಹುದಾಗಿದೆ. ಬೌಲರ್‌ಗಳು ಇಲ್ಲಿ ಕಠಿಣ ಸವಾಲನ್ನು ಎದುರಿಸಲಿದ್ದಾರೆ. ಭಾರತ- ಇಂಗ್ಲೆಂಡ್ ತಂಡಗಳು ಟಿ20 ವಿಶ್ವಕಪ್‌ನಲ್ಲಿ ಮೂರು ಬಾರಿ ಮುಖಾಮುಖಿಯಾಗಿವೆ. 2007, 2009 ಮತ್ತು 2012ರಲ್ಲಿ ಪರಸ್ಪರ ವಿರುದ್ಧ ಆಡಿವೆ. ಗುರುವಾರ ಆಡಿದರೆ ನಾಲ್ಕು ಬಾರಿ ಮುಖಾಮುಖಿಯಾದಂತಾಗುತ್ತದೆ. ಈವರೆಗಿನ ವಿಶ್ವಕಪ್‌ನ ಮೂರು ಪಂದ್ಯಗಳಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಎರಡು ಬಾರಿ ಜಯ ಸಾಧಿಸಿದೆ ಮತ್ತು ಇಂಗ್ಲೆಂಡ್ ತಂಡ ಭಾರತದ ವಿರುದ್ಧ ಒಂದು ಬಾರಿ ಗೆಲುವು ಕಂಡಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ