AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ಹಾರ್ದಿಕ್​ಗೆ ನಾಯಕತ್ವ! ಹೊಸಬರಿಗೆ ಅವಕಾಶ

IND vs IRE: ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಬಿಸಿಸಿಐ ತಂಡವನ್ನು ಬುಧವಾರ ಪ್ರಕಟಿಸಿದೆ. ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನಾಯಕರನ್ನಾಗಿ ಮಾಡಲಾಗಿದೆ.

IND vs IRE: ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ಹಾರ್ದಿಕ್​ಗೆ ನಾಯಕತ್ವ! ಹೊಸಬರಿಗೆ ಅವಕಾಶ
ರಾಹುಲ್, ಹಾರ್ದಿಕ್
Follow us
TV9 Web
| Updated By: ಪೃಥ್ವಿಶಂಕರ

Updated on:Jun 15, 2022 | 9:07 PM

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ (T20 series against Ireland) ಬಿಸಿಸಿಐ (BCCI) ಭಾರತ ತಂಡವನ್ನು ಬುಧವಾರ ಪ್ರಕಟಿಸಿದೆ. ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ತಂಡದ ನಾಯಕರನ್ನಾಗಿ ಮಾಡಲಾಗಿದ್ದು, ವೇಗದ ಬೌಲರ್ ಭುವನೇಶ್ವರ್ ಕುಮಾರ್ (Bhuvneshwar Kumar) ಅವರನ್ನು ಉಪನಾಯಕರನ್ನಾಗಿ ಮಾಡಲಾಗಿದೆ. ಈ ತಿಂಗಳ ಅಂತ್ಯದಲ್ಲಿ ಐರ್ಲೆಂಡ್ ವಿರುದ್ಧ ಭಾರತ ಎರಡು ಟಿ20 ಪಂದ್ಯಗಳನ್ನು ಆಡಲಿದೆ. ಐಪಿಎಲ್‌ (IPL)ನಲ್ಲಿ ಉತ್ತಮ ಪ್ರದರ್ಶನ ನೀಡಿದ ರಾಹುಲ್ ತ್ರಿಪಾಠಿ (Rahul Tripathi) ಅವರನ್ನು ಆಯ್ಕೆಗಾರರು ಈ ಸರಣಿಗೆ ತಂಡದಲ್ಲಿ ಮೊದಲ ಬಾರಿಗೆ ಅವಕಾಶ ನೀಡಿದ್ದಾರೆ. ಅದೇ ಸಮಯದಲ್ಲಿ, ಐಪಿಎಲ್‌ ಫೈನಲ್‌ನಲ್ಲಿ ಆಡಿದ್ದ ನಾಯಕ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ (Sanju Samson) ಕೂಡ ತಂಡಕ್ಕೆ ಮರಳಿದ್ದಾರೆ.

ಹಾರ್ದಿಕ್​ಗೆ ನಾಯಕತ್ವ

ಇದನ್ನೂ ಓದಿ
Image
Ranji Trophy: ಸಂಕಷ್ಟದಲ್ಲಿದ್ದ ತಂಡಕ್ಕೆ ಕ್ರೀಡಾ ಸಚಿವರ ನೆರವು; ರಣಜಿ ಸೆಮಿಫೈನಲ್​ನಲ್ಲಿ ಮನೋಜ್ ಅಬ್ಬರ
Image
ENG vs NZ: ಕಿವೀಸ್ ಮಣಿಸಿದ ಆಂಗ್ಲರಿಗೆ ದಂಡದ ಬರೆ ಎಳೆದ ಐಸಿಸಿ! ಬೆನ್ ಸ್ಟೋಕ್ಸ್ ಬಳಗಕ್ಕೆ ಗೆಲುವಿನಲ್ಲೂ ನಿರಾಸೆ
Image
IND vs SA: 3ನೇ ಟಿ20 ಪಂದ್ಯದ ಗೆಲುವಿನೊಂದಿಗೆ ವೃತ್ತಿಜೀವನದ ವಿಶೇಷ ಶತಕ ಸಿಡಿಸಿದ ರಿಷಭ್ ಪಂತ್..!

ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಉಪನಾಯಕನ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಕೆಎಲ್ ರಾಹುಲ್ ಗಾಯಗೊಂಡ ನಂತರ ರಿಷಭ್ ಪಂತ್ ಅವರನ್ನು ನಾಯಕರನ್ನಾಗಿ ಮತ್ತು ಹಾರ್ದಿಕ್ ಅವರನ್ನು ಉಪನಾಯಕರನ್ನಾಗಿ ಮಾಡಲಾಯಿತು. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್‌ನಲ್ಲಿ ಹಾರ್ದಿಕ್ ತನ್ನ ತಂಡ ಗುಜರಾತ್ ಟೈಟಾನ್ಸ್ ಅನ್ನು ಚೊಚ್ಚಲ ಋತುವಿನಲ್ಲಿಯೇ ಚಾಂಪಿಯನ್ ಮಾಡಿದ್ದರು. ಭುವನೇಶ್ವರ್ ಕುಮಾರ್ ಮತ್ತು ದಿನೇಶ್ ಕಾರ್ತಿಕ್ ಅವರು ತಂಡದ ಅತ್ಯಂತ ಹಿರಿಯ ಆಟಗಾರರಾಗಿದ್ದು, ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನಾಯಕರನ್ನಾಗಿ ಮಾಡಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಉಪನಾಯಕನಾಗಿದ್ದು, ನಾಯಕತ್ವಕ್ಕೆ ಅವರೇ ಮೊದಲ ಆಯ್ಕೆ ಎಂದು ಬಿಸಿಸಿಐ ಈಗಾಗಲೇ ಹೇಳಿಕೆ ನೀಡಿತ್ತು. ಈ ತಂಡವು ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ನ ಭಾಗವಾಗಿರುವ ಆಟಗಾರರನ್ನು ಒಳಗೊಂಡಿಲ್ಲ ಏಕೆಂದರೆ ಆ ಆಟಗಾರರು ಈ ಸಮಯದಲ್ಲಿ ಎಡ್ಜ್‌ಬಾಸ್ಟನ್‌ನಲ್ಲಿ ಪಂದ್ಯಕ್ಕಾಗಿ ತಯಾರಿ ನಡೆಸಲಿದ್ದಾರೆ.

ಇದನ್ನೂ ಓದಿ: IND vs SA: ನಾಲ್ವರು ಶೂನ್ಯಕ್ಕೆ ಔಟ್, ಮಿಕ್ಕವರಿಗೆ 10 ರನ್ ಬಾರಿಸಲಾಗಲಿಲ್ಲ! ಕಟಕ್​ನಲ್ಲಿ ಟೀಂ ಇಂಡಿಯಾದ ಪ್ರದರ್ಶನವಿದು

ರಾಹುಲ್ ತ್ರಿಪಾಠಿಗೆ ಅವಕಾಶ

ಶ್ರೇಯಸ್ ಅಯ್ಯರ್ ಮತ್ತು ರಿಷಭ್ ಪಂತ್ ಮಾತ್ರ ದಕ್ಷಿಣ ಆಫ್ರಿಕಾ ವಿರುದ್ಧದ T20I ಸರಣಿಯ ಭಾಗವಾಗಿರುವ ಆಟಗಾರರು ಆದರೆ ಐರ್ಲೆಂಡ್ ವಿರುದ್ಧದ ಸರಣಿಯ ಭಾಗವಾಗುವುದಿಲ್ಲ. ಈ ಇಬ್ಬರೂ ಆಟಗಾರರು ಇಂಗ್ಲೆಂಡ್‌ನಲ್ಲಿ ತಂಡದ ಜೊತೆ ಇರಲಿದ್ದಾರೆ. ಇವರಿಬ್ಬರ ಸ್ಥಾನಕ್ಕೆ ರಾಹುಲ್ ತ್ರಿಪಾಠಿ ಮತ್ತು ಸಂಜು ಸ್ಯಾಮ್ಸನ್ ಸ್ಥಾನ ಪಡೆದಿದ್ದಾರೆ. ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಫೈನಲ್ ತಲುಪಿತ್ತು. ಈ ಐಪಿಎಲ್ ಸೀಸನ್​ನಲ್ಲಿ ಸಂಜು 17 ಪಂದ್ಯಗಳಲ್ಲಿ 374 ರನ್ ಗಳಿಸಿದ್ದರು. ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್‌ನ ರಾಹುಲ್ ತ್ರಿಪಾಠಿ 158.23 ಸ್ಟ್ರೈಕ್ ರೇಟ್‌ನಲ್ಲಿ 413 ರನ್ ಗಳಿಸಿದ್ದರು.

ಭಾರತ ತಂಡ – ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್

Published On - 8:49 pm, Wed, 15 June 22

ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ