AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

U-19 Asia Cup 2024: ಅಮಾನ್ ಅಜೇಯ ಶತಕ; 339 ರನ್ ಚಚ್ಚಿದ ಟೀಂ ಇಂಡಿಯಾ

U-19 Asia Cup 2024: ಭಾರತದ ಅಂಡರ್-19 ತಂಡವು ಶಾರ್ಜಾದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಪಂದ್ಯದಲ್ಲಿ ಜಪಾನ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಪರ ಮೊಹಮ್ಮದ್ ಅಮಾನ್ ಅಜೇಯ 122 ರನ್‌, ಆಯುಷ್ ಮ್ಹಾತ್ರೆ (54) ಮತ್ತು ಕೆ.ಪಿ. ಕಾರ್ತಿಕೇಯ (57) ಅವರ ಅರ್ಧಶತಕದ ನೆರವಿನಿಂದ 339 ರನ್‌ಗಳ ಸವಾಲಿನ ಮೊತ್ತವನ್ನು ಕಲೆಹಾಕಿದೆ.

U-19 Asia Cup 2024: ಅಮಾನ್ ಅಜೇಯ ಶತಕ; 339 ರನ್ ಚಚ್ಚಿದ ಟೀಂ ಇಂಡಿಯಾ
ಮೊಹಮ್ಮದ್ ಅಮಾನ್
ಪೃಥ್ವಿಶಂಕರ
|

Updated on:Dec 02, 2024 | 2:56 PM

Share

ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಅಂಡರ್-19 ಏಷ್ಯಾಕಪ್ 2024 ರ ಎಂಟನೇ ಪಂದ್ಯದಲ್ಲಿ ಟೀಂ ಇಂಡಿಯಾ, ಜಪಾನ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಮೊಹಮ್ಮದ್ ಅಮಾನ್ ಅವರ ಅಜೇಯ ಶತಕದ ಬಲದಿಂದ ನಿಗದಿತ 50 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 339 ರನ್ ಕಲೆಹಾಕಿದೆ. ಈ ಪಂದ್ಯದಲ್ಲಿ ಅಮಾನ್ ಅಲ್ಲದೆ ವಸೈಕರ್ ಆಯುಷ್ ಮ್ಮಾತ್ರೆ ಮತ್ತು ಕೆಪಿ ಕಾರ್ತಿಕೇಯ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇವರ ಜೊತೆಗೆ ತಂಡದ ಇತರ ಬ್ಯಾಟ್ಸ್‌ಮನ್‌ಗಳು ನೀಡಿದ ಅಲ್ಪ ಕಾಣಿಕೆಯ ನೆರವಿನಿಂದ ತಂಡ 300 ರ ಗಡಿ ದಾಟಿತು.

ಭಾರತಕ್ಕೆ ಉತ್ತಮ ಆರಂಭ

ಈ ಪಂದ್ಯದಲ್ಲಿ ಜಪಾನ್ ಟಾಸ್ ಗೆದ್ದು ಭಾರತವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಟೀಂ ಇಂಡಿಯಾ ಪರ ಮತ್ತೊಮ್ಮೆ ಆಯುಷ್ ಮ್ಹಾತ್ರೆ ಮತ್ತು ವೈಭವ್ ಸೂರ್ಯವಂಶಿ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಪಾಕಿಸ್ತಾನ ವಿರುದ್ಧದ ಮೊದಲ ಪಂದ್ಯದಲ್ಲಿ ಉತ್ತಮ ಆರಂಭ ಒದಗಿಸಿಕೊಡುವಲ್ಲಿ ವಿಫಲರಾಗಿದ್ದ ಈ ಜೋಡಿ ಜಪಾನ್ ವಿರುದ್ಧ ಮೊದಲ ವಿಕೆಟ್​ಗೆ 65 ರನ್​ಗಳ ಜೊತೆಯಾಟ ನೀಡಿತು. ಆದರೆ ವೈಭವ್ ಸೂರ್ಯವಂಶಿಗೆ ಉತ್ತಮ ಆರಂಭದ ಲಾಭ ಪಡೆಯಲು ಸಾಧ್ಯವಾಗಲಿಲ್ಲ. ಪಾಕ್ ವಿರುದ್ಧ ಒಂದಂಕಿಗೆ ಸುಸ್ತಾಗಿದ್ದ ವೈಭವ್ ಸೂರ್ಯವಂಶಿ, ಜಪಾನ್ ವಿರುದ್ಧ 23 ರನ್ ಗಳಿಸಿ ಔಟಾದರು.

ಆಯುಷ್- ಕಾರ್ತಿಕೇಯ ಅರ್ಧಶತಕ

ಆಯುಷ್ ಮ್ಹಾತ್ರೆ ಕೂಡ ಕೆಲವೇ ಓವರ್‌ಗಳ ನಂತರ ವಿಕೆಟ್ ಒಪ್ಪಿಸಿದರಾದರೂ, 54 ರನ್​ಗಳ ಅಮೋಘ ಇನ್ನಿಂಗ್ಸ್ ಆಡಿದರು. ಮೂರನೇ ಕ್ರಮಾಂಕದಲ್ಲಿ ಬಂದ ಆಂಡ್ರೆ ಸಿದ್ಧಾರ್ಥ್ 35 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರೆ, ಕೆಪಿ ಕಾರ್ತಿಕೇಯ 49 ಎಸೆತಗಳಲ್ಲಿ 57 ರನ್​ಗಳ ಕಾಣಿಕೆ ನೀಡಿದರು. ಕೆಳಕ್ರಮಾಂಕದಲ್ಲಿ ಬಂದ ನಿಖಿಲ್ ಕುಮಾರ್ 17 ಎಸೆತಗಳಲ್ಲಿ 12 ರನ್ ಕಲೆಹಾಕಿದರು. ಒಂದು ಹಂತದಲ್ಲಿ ಭಾರತ 46 ಓವರ್​ಗಳ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 289 ರನ್ ಗಳಿಸಿತ್ತು.

ಅಮಾನ್ ಅಜೇಯ ಶತಕ

ನಂತರ ಹಾರ್ದಿಕ್ ರಾಜ್ ಮತ್ತು ಮೊಹಮ್ಮದ್ ಅಮಾನ್ ಕೊನೆಯ 4 ಓವರ್​ಗಳಲ್ಲಿ 50 ರನ್​ಗಳ ಅಜೇಯ ಜೊತೆಯಾಟ ನೀಡಿದರು. ಅಂತಿಮವಾಗಿ ಮೊಹಮ್ಮದ್ ಅಮಾನ್ 118 ಎಸೆತಗಳಲ್ಲಿ 7 ಬೌಂಡರಿಗಳ ನೆರವಿನಿಂದ ಅಜೇಯ 122 ರನ್ ಬಾರಿಸಿದರೆ, ಹಾರ್ದಿಕ್ ರಾಜ್ 12 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 25 ರನ್ ಗಳಿಸಿದರು. ಜಪಾನ್ ಪರ ಕೀಫರ್ ಯಮಮೊಟೊ-ಲೇಕ್ ಮತ್ತು ಹ್ಯೂಗೋ ಕೆಲ್ಲಿ ತಲಾ 2 ವಿಕೆಟ್ ಪಡೆದರೆ, ಆರವ್ ತಿವಾರಿ ಮತ್ತು ಚಾರ್ಲ್ಸ್ ಹಿಂಜ್ ತಲಾ 1 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Mon, 2 December 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ