AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಸಹ ಆಟಗಾರನನ್ನು ನಿಂಧಿಸಿದ ಭಾರತದ ಅಭಿಮಾನಿಗಳ ಬೆವರಿಳಿಸಿದ ಕಿಂಗ್ ಕೊಹ್ಲಿ; ವಿಡಿಯೋ ನೋಡಿ

Virat Kohli: ವಾಸ್ತವವಾಗಿ ಅಭ್ಯಾಸ ಪಂದ್ಯದ ವೇಳೆ ಟೀಂ ಇಂಡಿಯಾದ ಯಂಗ್ ಬೌಲರ್ ಕಮಲೇಶ್ ನಾಗರಕೋಟಿ ಬಳಿ ಅಲ್ಲಿ ನೆರೆದಿದ್ದ ಅಭಿಮಾನಿಗಳು ಸೆಲ್ಫಿಗೆ ಪೋಸ್​ ಕೊಡುವಂತೆ ಕೇಳಿದ್ದಾರೆ, ಆದರೆ ಇದಕ್ಕೆ ಕಮಲೇಶ್ ಒಲ್ಲೆ ಎಂದಿದ್ದಾರೆ.

Virat Kohli: ಸಹ ಆಟಗಾರನನ್ನು ನಿಂಧಿಸಿದ ಭಾರತದ ಅಭಿಮಾನಿಗಳ ಬೆವರಿಳಿಸಿದ ಕಿಂಗ್ ಕೊಹ್ಲಿ; ವಿಡಿಯೋ ನೋಡಿ
ಫ್ಯಾನ್ಸ್ ಜೊತೆ ಜಗಳಕ್ಕಿಳಿದ ಕೊಹ್ಲಿ
TV9 Web
| Edited By: |

Updated on:Jun 27, 2022 | 4:04 PM

Share

ಟೀಂ ಇಂಡಿಯಾದ ಮಾಜಿ ನಾಯಕ ಮತ್ತು ಅನುಭವಿ ಆಟಗಾರ ವಿರಾಟ್ ಕೊಹ್ಲಿ (Virat Kohli) ಯಾವಾಗಲೂ ಕಷ್ಟದಲ್ಲಿರುವ ತಮ್ಮ ಸಹ ಆಟಗಾರರ ಬೆನ್ನಿಗೆ ನಿಲ್ಲುವುದಕ್ಕೆ ಹೆಸರುವಾಸಿಯಾಗಿದ್ದಾರೆ. ಸಹ ಆಟಗಾರ ನಾಯಕನಾಗಿರಲಿ, ಇಲ್ಲದಿರಲಿ, ಕೊಹ್ಲಿ ಮಾತ್ರ ಕಷ್ಟದ ಸಮಯದಲ್ಲಿ ನೆರವಾಗುವುದನ್ನು ಮರೆಯುವುದಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಈ ಹಿಂದೆ ಹಲವು ನಿದರ್ಶನಗಳನ್ನು ನಾವು ನೋಡಿದ್ದೇವೆ. ಈಗ ಅಂತಹದ್ದೆ ಘಟನೆಯೊಂದು ಇಂಗ್ಲೆಂಡ್​ನಲ್ಲಿ ನಡೆದುಹೋಗಿದೆ. ವಾಸ್ತವವಾಗಿ ಲೀಸೆಸ್ಟರ್‌ಶೈರ್‌ನಲ್ಲಿ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ತಂಡದ ಯುವ ಆಟಗಾರ ಕಮಲೇಶ್ ನಾಗರಕೋಟಿ (Kamlesh Nagarkoti)ಯನ್ನು ಭಾರತದ ಅಭಿಮಾನಿಗಳೇ ನಿಂಧಿಸುತ್ತಿದ್ದರು. ಇದನ್ನು ಗಮನಿಸಿದ ಕೊಹ್ಲಿ ಕೂಡಲೇ ಬಾಲ್ಕನಿಗೆ ಬಂದವರೆ ಅಲ್ಲಿ ನೆರೆದಿದ್ದ ಅಭಿಮಾನಿಗಳ ಬೆವರಿಳಿಸಿದ್ದಾರೆ. ಈಗ ಕೊಹ್ಲಿಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಕೊಹ್ಲಿ ವಿಡಿಯೋ ವೈರಲ್

ಇದನ್ನೂ ಓದಿ
Image
ENG vs IND: ಮಂಡಳಿಯ ಸಲಹೆ ತಿರಸ್ಕರಿಸಿದ ರೋಹಿತ್ ಶರ್ಮಾ ಮೇಲೆ ಕೆಂಡಕಾರಿದ ಬಿಸಿಸಿಐ..!
Image
IRE vs IND: ಪವರ್‌ಪ್ಲೇಯಲ್ಲಿ ಪವರ್​ಫುಲ್ ಬೌಲಿಂಗ್; ಟಿ20 ಕ್ರಿಕೆಟ್​ನಲ್ಲಿ ಭುವಿ ಈಗ ನಂ.1 ಬೌಲರ್..!

ಲೀಸೆಸ್ಟರ್‌ಶೈರ್‌ನಲ್ಲಿ ಅಭ್ಯಾಸ ಪಂದ್ಯದ ವೇಳೆ ನಡೆದ ಈ ಘಟನೆಯನ್ನು ವಿಡಿಯೋ ಮಾಡಿಕೊಂಡಿರುವ ಕೊಹ್ಲಿ ಅಭಿಮಾನಿಗಳು ಈಗ ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇತ್ತ ಕೊಹ್ಲಿ ಬಾಲ್ಕನಿಗೆ ಬಂದು ಸ್ಟೇಡಿಯಂನಲ್ಲಿ ಕುಳಿತಿದ್ದ ಅಭಿಮಾನಿಗಳ ಬೆವರಿಳಿಸುತ್ತಿರುವುದುನ್ನು ನಾವು ಈ ವಿಡಿಯೋದಲ್ಲಿ ಕಾಣಬಹುದಾಗಿದೆ. ವಾಸ್ತವವಾಗಿ ಅಭ್ಯಾಸ ಪಂದ್ಯದ ವೇಳೆ ಟೀಂ ಇಂಡಿಯಾದ ಯಂಗ್ ಬೌಲರ್ ಕಮಲೇಶ್ ನಾಗರಕೋಟಿ ಬಳಿ ಅಲ್ಲಿ ನೆರೆದಿದ್ದ ಅಭಿಮಾನಿಗಳು ಸೆಲ್ಫಿಗೆ ಪೋಸ್​ ಕೊಡುವಂತೆ ಕೇಳಿದ್ದಾರೆ, ಆದರೆ ಇದಕ್ಕೆ ಕಮಲೇಶ್ ಒಲ್ಲೆ ಎಂದಿದ್ದಾರೆ. ಇದನ್ನು ಕಂಡು ಗರಂ ಆದ ಅಭಿಮಾನಿಗಳು ಕಮಲೇಶ್​ರನ್ನು ಹೀಯಾಳಿಸಲು ಆರಂಭಿಸಿದ್ದಾರೆ. ಕೂಡಲೇ ಈ ವಿಷಯ ತಿಳಿದ ಕೊಹ್ಲಿ ಹೀಯಾಳಿಸುತ್ತಿದ್ದವರೊಂದಿಗೆ ವಾಗ್ವದಕ್ಕಿಳಿದು ಅವರ ಬಾಯಿ ಮುಚ್ಚಿಸಿದ್ದಾರೆ.

ಕೊಹ್ಲಿಗೆ ಈ ಪ್ರವಾಸ ಅತ್ಯಂತ ಮಹತ್ವದ್ದಾಗಿದೆ

ಕೊಹ್ಲಿಯನ್ನು ಅವರ ಹಳೆಯ ಅವತಾರದಲ್ಲಿ ನೋಡಿದ ಅಭಿಮಾನಿಗಳು ತುಂಬಾ ಖುಷಿಪಟ್ಟಿದ್ದಾರೆ. ಇದೇ ವೇಳೆ ಕೆಲವರು ಕೊಹ್ಲಿಯನ್ನು ಹೊಗಳಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿಯ ಬ್ಯಾಟ್ ಕೊಂಚ ಅಬ್ಬರಿಸಿತ್ತು. ಮೊದಲ ಇನಿಂಗ್ಸ್‌ನಲ್ಲಿ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿದ್ದರೂ ಕೇವಲ 33 ರನ್ ಗಳಿಸಲಷ್ಟೇ ಶಕ್ತರಾದರು. ಎದುರಾಳಿ ತಂಡದ ಬೌಲರ್ ರೋಮನ್ ವಾಕರ್ ಕೊಹ್ಲಿಯನ್ನು ಎಲ್ಬಿಡಬ್ಲ್ಯು ಮಾಡಿದರು. ಪಂದ್ಯದಲ್ಲಿ ಡಿಆರ್‌ಎಸ್ ಇರಲಿಲ್ಲ, ಈ ಕಾರಣದಿಂದಾಗಿ ಕೊಹ್ಲಿ ಔಟಾದರೋ ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ. ಈ ತೀರ್ಪಿನಿಂದ ಬೆಸರಗೊಂಡ ಕೊಹ್ಲಿ ಅಂಪೈರ್ ಜೊತೆ ಜಗಳವಾಡುತ್ತಿರುವುದು ಕೂಡ ಕಂಡು ಬಂತು. ಆದರೆ 2ನೇ ಇನ್ನಿಂಗ್ಸ್​ನಲ್ಲಿ ಕೊಹ್ಲಿ ಅರ್ಧಶತಕದ ಇನ್ನಿಂಗ್ಸ್​ ಆಡಿ ಫಾರ್ಮ್​ಗೆ ಮರಳುವ ಎಲ್ಲಾ ಸೂಚನೆಯನ್ನು ನೀಡಿದ್ದಾರೆ.

ಟೀಂ ಇಂಡಿಯಾ ಇಂಗ್ಲೆಂಡ್‌ಗೆ ಆಗಮಿಸಿದ್ದು, ಜುಲೈ 1 ರಿಂದ 6 ವೈಟ್ ಬಾಲ್ ಪಂದ್ಯಗಳನ್ನು ಆಡಲಿದೆ. ನಂತರ 3 ODI ಮತ್ತು 3 T20 ಪಂದ್ಯಗಳನ್ನು ಸಹ ಆಡಲಿದೆ. ಗಮನಾರ್ಹವಾಗಿ, ಇದು ಭಾರತದ ತಂಡದ ಅಧಿಕೃತ ನಾಯಕನಾಗಿ ರೋಹಿತ್ ಶರ್ಮಾ ಅವರ ಮೊದಲ ವಿದೇಶ ಪ್ರವಾಸವಾಗಿದೆ. ಈ ವರ್ಷದ ಕೊನೆಯಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ T20 ವಿಶ್ವಕಪ್‌ಗೆ ಭಾರತ ತಯಾರಿ ನಡೆಸುತ್ತಿರುವ ಈ ಸಂದರ್ಭದಲ್ಲಿ ರೋಹಿತ್ ಮತ್ತು ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಈ ಪ್ರವಾಸದಲ್ಲಿ ಪ್ರತಿ ಪಂದ್ಯವನ್ನು ಗೆಲ್ಲಲು ಹೋರಾಡಬೇಕಿದೆ.

Published On - 4:04 pm, Mon, 27 June 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ