AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಭಾರತೀಯ ಬ್ಯಾಟರ್​ಗಳ ಆರ್ಭಟಕ್ಕೆ ಮಳೆ ಅಡ್ಡಿ

India vs New Zealand, 1st Test: ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ಎರಡನೇ ಪಂದ್ಯವು ಪುಣೆಯಲ್ಲಿ ಜರುಗಲಿದೆ. ಹಾಗೆಯೇ ಮೂರನೇ ಪಂದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆತಿಥ್ಯವಹಿಸಲಿದೆ.

IND vs NZ: ಭಾರತೀಯ ಬ್ಯಾಟರ್​ಗಳ ಆರ್ಭಟಕ್ಕೆ ಮಳೆ ಅಡ್ಡಿ
India vs New Zealand
ಝಾಹಿರ್ ಯೂಸುಫ್
|

Updated on: Oct 19, 2024 | 12:50 PM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಈ ಪಂದ್ಯದ ಮೊದಲ ದಿನದಾಟವು ಮಳೆಯ ಕಾರಣ ರದ್ದಾಗಿತ್ತು. ಇನ್ನು 2ನೇ ದಿನದಾಟದಲ್ಲಿ ಶುರುವಾದ ಪಂದ್ಯದಲ್ಲಿ ಟೀಮ್ ಇಂಡಿಯಾ ಕೇವಲ 46 ರನ್​ಗಳಿಗೆ ಆಲೌಟ್ ಆಗಿತ್ತು.

ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ತಂಡವು ರಚಿನ್ ರವೀಂದ್ರ (113) ಅವರ ಶತಕದ ನೆರವಿನಿಂದ 402 ರನ್​ಗಳಿಸಿ ಆಲೌಟ್ ಆಯಿತು. 356 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 71 ರನ್​ ಪೇರಿಸಿದ ಬಳಿಕ ಜೈಸ್ವಾಲ್ (35) ಔಟಾದರು.

ಇನ್ನು 63 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 52 ರನ್​ ಬಾರಿಸಿ ರೋಹಿತ್ ಶರ್ಮಾ ಕೂಡ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಸರ್ಫರಾಝ್ ಖಾನ್ ಶತಕದ ಜೊತೆಯಾಟದ ಮೂಲಕ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು.

ಆದರೆ ಮೂರನೇ ದಿನದಾಟದ ಅಂತಿಮ ಓವರ್​ನ ಕೊನೆಯ ಎಸೆತದಲ್ಲಿ ವಿರಾಟ್ ಕೊಹ್ಲಿ (70) ವಿಕೆಟ್​ ಕೀಪರ್​ಗೆ ಕ್ಯಾಚಿತ್ತು ನಿರಾಸೆ ಮೂಡಿಸಿದರು. ಇನ್ನು ನಾಲ್ಕನೇ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಸರ್ಫರಾಝ್ ಖಾನ್ 110 ಎಸೆತಗಳಲ್ಲಿ 13 ಫೋರ್ ಹಾಗೂ 3 ಸಿಕ್ಸ್​ಗಳೊಂದಿಗೆ ಶತಕ ಪೂರೈಸಿದರು.

ಮತ್ತೊಂದೆಡೆ ಸರ್ಫರಾಝ್ ಖಾನ್​ಗೆ ಉತ್ತಮ ಸಾಥ್ ನೀಡಿದ ರಿಷಭ್ ಪಂತ್ 56 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 53 ರನ್ ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 71 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 344 ರನ್ ಕಲೆಹಾಕಿದೆ. ಸದ್ಯ ಮಳೆಯ ಕಾರಣ ಪಂದ್ಯ ಸ್ಥಗಿತಗೊಂಡಿದ್ದು, ಟೀಮ್ ಇಂಡಿಯಾ ಪರ ಸರ್ಫರಾಝ್ ಖಾನ್ (125) ಹಾಗೂ ರಿಷಭ್ ಪಂತ್ (53) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ರಿಷಭ್ ಪಂತ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025: RCB ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿ ರೆಡಿ

ನ್ಯೂಝಿಲೆಂಡ್ ಪ್ಲೇಯಿಂಗ್ 11: ಟಾಮ್ ಲ್ಯಾಥಮ್ (ನಾಯಕ), ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ವಿಲ್ ಯಂಗ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ವಿಲಿಯಂ ಒರೋಕ್, ಅಜಾಝ್ ಪಟೇಲ್.

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು