AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs New Zealand 2nd T20: ನ್ಯೂಜಿಲೆಂಡ್ ತಂಡಕ್ಕೆ ಸೋಲುಣಿಸಿದ ಭಾರತ

India vs New Zealand 2nd T20: ಮೊದಲ 10 ಓವರ್​ಗಳಲ್ಲಿ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದ ಟೀಮ್ ಇಂಡಿಯಾ ಬೌಲರ್​ಗಳು ದ್ವಿತಿಯಾರ್ಧದಲ್ಲೂ ಪರಾಕ್ರಮ ಮರೆದರು.

India vs New Zealand 2nd T20: ನ್ಯೂಜಿಲೆಂಡ್ ತಂಡಕ್ಕೆ ಸೋಲುಣಿಸಿದ ಭಾರತ
Team India
TV9 Web
| Edited By: |

Updated on: Jan 29, 2023 | 10:29 PM

Share

India vs New Zealand 2nd T20: ಲಕ್ನೋನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡಕ್ಕೆ ಸೋಲುಣಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಇದಕ್ಕೂ ಮುನ್ನ ಮುನ್ನ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿತ್ತು. ಆದರೆ ನಾಯಕನ ನಿರ್ಧಾರ ತಪ್ಪು ಎಂಬುದನ್ನು ಟೀಮ್ ಇಂಡಿಯಾ ಬೌಲರ್​ಗಳು ಪವರ್​ಪ್ಲೇನಲ್ಲೇ ನಿರೂಪಿಸಿದ್ದರು. 4ನೇ ಓವರ್​ನಲ್ಲಿ ಫಿನ್ ಅಲೆನ್​ (11) ರನ್ನು ಕ್ಲೀನ್ ಬೌಲ್ಡ್ ಮಾಡಿ ಚಹಾಲ್ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಡೆವೊನ್ ಕಾನ್ವೆ (11) ಸುಂದರ್​ಗೆ ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ಗ್ಲೆನ್ ಫಿಲಿಪ್ಸ್ (5) ದೀಪಕ್ ಹೂಡಾ ಎಸೆತದಲ್ಲಿ ಬೌಲ್ಡ್ ಆಗಿ ನಿರ್ಗಮಿಸಿದರು. ಇನ್ನು ಡೇರಿಲ್ ಮಿಚೆಲ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಕುಲ್ದೀಪ್ ಯಾದವ್ ಟೀಮ್ ಇಂಡಿಯಾಗೆ 5ನೇ ಯಶಸ್ಸು ತಂದುಕೊಟ್ಟರು. ಈ ವೇಳೆ 10 ಓವರ್​ಗಳಲ್ಲಿ ನ್ಯೂಜಿಲೆಂಡ್ ಕಲೆಹಾಕಿದ್ದು ಕೇವಲ 60 ರನ್​ ಮಾತ್ರ.

ಮೊದಲ 10 ಓವರ್​ಗಳಲ್ಲಿ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದ ಟೀಮ್ ಇಂಡಿಯಾ ಬೌಲರ್​ಗಳು ದ್ವಿತಿಯಾರ್ಧದಲ್ಲೂ ಪರಾಕ್ರಮ ಮರೆದರು. ಪರಿಣಾಮ ನ್ಯೂಜಿಲೆಂಡ್ ಬ್ಯಾಟರ್​ಗಳು ರನ್​ಗಳಿಸಲು ಪರದಾಡಿದರು. ಇದಾಗ್ಯೂ ಮೈಕೆಲ್ ಬ್ರೇಸ್​ವೆಲ್ 14 ರನ್​ಗಳಿಸಿದರೆ, ನಾಯಕ ಮಿಚೆಲ್ ಸ್ಯಾಂಟ್ನರ್ ಅಜೇಯ 19 ರನ್​ ಕಲೆಹಾಕಿದರು. ಅದರಂತೆ ನಿಗದಿತ 20 ಓವರ್​ಗಳಲ್ಲಿ ನ್ಯೂಜಿಲೆಂಡ್ ತಂಡವು 8 ವಿಕೆಟ್​ ನಷ್ಟಕ್ಕೆ 99 ರನ್​ಗಳಿಸಲಷ್ಟೇ ಶಕ್ತರಾದರು.

ಇದನ್ನೂ ಓದಿ
Image
IPLನ ಒಂದು ಪಂದ್ಯಕ್ಕೆ 107 ಕೋಟಿ ರೂ: PSL ನ 1 ಪಂದ್ಯಕ್ಕೆ ಎಷ್ಟು ಗೊತ್ತಾ?
Image
ಟೀಮ್ ಇಂಡಿಯಾ ಪರ ಅತೀ ಹೆಚ್ಚು ಬಾರಿ 150 ಕ್ಕೂ ಅಧಿಕ ರನ್ ಬಾರಿಸಿದ್ದು ಯಾರು ಗೊತ್ತಾ?
Image
Team India: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
Virat Kohli: ಕಿಂಗ್ ಕೊಹ್ಲಿಯ ಅಬ್ಬರಕ್ಕೆ ಸಚಿನ್ ದಾಖಲೆ ಉಡೀಸ್

ಟೀಮ್ ಇಂಡಿಯಾ ಪರ 2 ಓವರ್​ಗಳಲ್ಲಿ ಕೇವಲ 7 ರನ್​ ನೀಡಿ ಅರ್ಷದೀಪ್ ಸಿಂಗ್ 2 ವಿಕೆಟ್ ಪಡೆದರೆ, ಚಹಾಲ್, ಕುಲ್ದೀಪ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್ ಹಾಗೂ ದೀಪಕ್ ಹೂಡಾ ತಲಾ 1 ವಿಕೆಟ್ ಕಬಳಿಸಿದರು.

ಇನ್ನು 100 ರನ್​ಗಳ ಸುಲಭ ಗುರಿ ಪಡೆದ ಟೀಮ್ ಇಂಡಿಯಾ ಕೂಡ ಉತ್ತಮ ಆರಂಭವೇನು ಪಡೆದಿರಲಿಲ್ಲ. ಕಳೆದ ಪಂದ್ಯದಲ್ಲಿ ವಿಫಲರಾಗಿದ್ದ ಶುಭ್​ಮನ್ ಗಿಲ್ ಈ ಬಾರಿ ಕೂಡ ಕೇವಲ 11 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಯಾದ ಇಶಾನ್ ಕಿಶನ್ ಹಾಗೂ ರಾಹುಲ್ ತ್ರಿಪಾಠಿ 28 ರನ್​ಗಳ ಜೊತೆಯಾಟವಾಡಿದರು. ಇದೇ ವೇಳೆ ರನ್​ ಕದಿಯುವ ಯತ್ನ ಮಾಡಿದ ಇಶಾನ್ ಕಿಶನ್ (19) ರನೌಟ್ ಆಗಿ ನಿರ್ಗಮಿಸಿದರು. ಪರಿಣಾಮ ಟೀಮ್ ಇಂಡಿಯಾ ಮೊದಲ 10 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 49 ರನ್​ಗಳು ಮಾತ್ರ.

11ನೇ ಓವರ್​ನಲ್ಲಿ ರಾಹುಲ್ ತ್ರಿಪಾಠಿ (13) ಕ್ಯಾಚ್ ನೀಡಿ ಹೊರನಡೆದರು. ಇನ್ನು ಸೂರ್ಯಕುಮಾರ್ ಯಾದವ್ ಮಾಡಿದ ತಪ್ಪಿನಿಂದಾಗಿ ವಾಷಿಂಗ್ಟನ್ ಸುಂದರ್ (10) ರನೌಟ್ ಆಗುವ ಮೂಲಕ ವಿಕೆಟ್ ತ್ಯಾಗ ಮಾಡಿದರು. ಪರಿಣಾಮ ಕೊನೆಯ 3 ಓವರ್​ಗಳಲ್ಲಿ ಟೀಮ್ ಇಂಡಿಯಾ 18 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಜವಾಬ್ದಾರಿಯುತ ಆಟವಾಡಿದರು. ಅದರಂತೆ ಕೊನೆಯ ಓವರ್​ನಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು 6 ರನ್​ಗಳು ಬೇಕಿತ್ತು.

ಕೊನೆಯ ಓವರ್​ನ ಮೊದಲೆರಡು ಎಸೆತಗಳಲ್ಲಿ ಟಿಕ್ನರ್ ಕೇವಲ 1 ರನ್​ ಮಾತ್ರ ನೀಡಿದರು. 3ನೇ ಎಸೆತದಲ್ಲಿ 1 ರನ್​. ನಾಲ್ಕನೇ ಎಸೆತದಲ್ಲಿ 1 ರನ್​. 5ನೇ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ ಫೋರ್ ಬಾರಿಸಿ ಭಾರತ ತಂಡಕ್ಕೆ 6 ವಿಕೆಟ್​ಗಳ ಜಯ ತಂದುಕೊಟ್ಟರು.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಶುಭ್​ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ) ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಶಿವಂ ಮಾವಿ, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್.

ನ್ಯೂಜಿಲೆಂಡ್ ಪ್ಲೇಯಿಂಗ್ ಇಲೆವೆನ್: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್​ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್​ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.

ಕಾಡಿನ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ಎತ್ತಲು ಯತ್ನಿಸಿದ ಆನೆ
ಕಾಡಿನ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ಎತ್ತಲು ಯತ್ನಿಸಿದ ಆನೆ
ಐತಿಹಾಸಿಕ ಲಕ್ಕುಂಡಿ ಚೌಕಿಮಠ ಕುಟುಂಬಸ್ಥರ ಇಂಟ್ರೆಸ್ಟಿಂಗ್ ಮಾಹಿತಿ
ಐತಿಹಾಸಿಕ ಲಕ್ಕುಂಡಿ ಚೌಕಿಮಠ ಕುಟುಂಬಸ್ಥರ ಇಂಟ್ರೆಸ್ಟಿಂಗ್ ಮಾಹಿತಿ
ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ
ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ಬಿರಿಯಾನಿ ಕೊಟ್ಟು ಸಿನಿಮಾ ತೋರಿಸ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು
ಬಿರಿಯಾನಿ ಕೊಟ್ಟು ಸಿನಿಮಾ ತೋರಿಸ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ
ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ