AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs New Zealand: ಭಾರತ- ನ್ಯೂಜಿಲೆಂಡ್ ಎರಡನೇ ಟಿ20 ಪಂದ್ಯ ಕೂಡ ನಡೆಯುವುದು ಅನುಮಾನ

Bay Oval Mount Maunganui Weather: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಎರಡನೇ ಟಿ20 ಪಂದ್ಯ ನವೆಂಬರ್ 20 ಭಾನುವಾರದಂದು ಮೌಂಟ್ ಮೌಂಗನು ಬೇ ಓವಲ್ ಮೈದಾನದಲ್ಲಿ ನಡೆಯಲಿದೆ. ಆದರೆ, ಈ ಪಂದ್ಯಕ್ಕೆ ಕೂಡ ಮಳೆ ಅಡ್ಡಿಪಡಿಸಲಿದೆ.

India vs New Zealand: ಭಾರತ- ನ್ಯೂಜಿಲೆಂಡ್ ಎರಡನೇ ಟಿ20 ಪಂದ್ಯ ಕೂಡ ನಡೆಯುವುದು ಅನುಮಾನ
IND vs NZ 2nd T20I
TV9 Web
| Updated By: Vinay Bhat|

Updated on:Nov 19, 2022 | 10:41 AM

Share

ಭಾರತ ತಂಡದ ನ್ಯೂಜಿಲೆಂಡ್ (India vs New Zealand) ಪ್ರವಾಸಕ್ಕೆ ಅಂದುಕೊಂಡ ರೀತಿಯಲ್ಲಿ ಚಾಲನೆ ಸಿಗಲಿಲ್ಲ. ಮೂರು ಪಂದ್ಯಗಳ ಟಿ20 ಸರಣಿ ಪೈಕಿ ಮೊದಲ ಕದನ ಸಂಪೂರ್ಣವಾಗಿ ಮಳೆಗೆ ಆಹುತಿಯಾಗಿದೆ. ಭಾರೀ ಮಳೆಯ ನಡುವೆ ಸರಿಯಾಗಿ ಅಭ್ಯಾಸ ಕೂಡ ನಡೆಸದೆ ವೆಲ್ಲಿಂಗ್ಟನ್​ಗೆ (Wellington) ಬಂದ ಟೀಮ್ ಇಂಡಿಯಾಕ್ಕೆ (Team India) ವರುಣನೇ ಸ್ವಾಗತ ಕೋರಿದ. ಎಡೆಬಿಡದೆ ಮಳೆ ಸುರಿದು ಮೈದಾನದಲ್ಲಿ ಹೆಜ್ಜೆ ಇಡಲೂ ಸಾಧ್ಯವಾಗಲಿಲ್ಲ. ಬಳಿಕ ಒಂದೂ ಎಸೆತವಿಲ್ಲದೆ ಪಂದ್ಯವನ್ನು ರದ್ದುಗೊಳಿಸಲಾಯಿತು. ಉಭಯ ತಂಡಗಳ ನಾಯಕರು ಪರಸ್ಪರ ಹಸ್ತಲಾಘವ ಮಾಡಿ ತಮ್ಮ ತಮ್ಮ ಹೊಟೇಲ್‌ನತ್ತ ತೆರಳಿದರು. ಆದರೀಗ ದ್ವಿತೀಯ ಟಿ20 ಪಂದ್ಯ ಕೂಡ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಎರಡನೇ ಟಿ20 ಪಂದ್ಯ ನವೆಂಬರ್ 20 ಭಾನುವಾರದಂದು ಮೌಂಟ್ ಮೌಂಗನು ಬೇ ಓವಲ್ ಮೈದಾನದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 12 ಗಂಟೆಗೆ ಶುರುವಾಗಲಿದೆ. ಅದೇ ನ್ಯೂಜಿಲೆಂಡ್ ಕಾಲಮಾನದ ಪ್ರಕಾರ ಪಂದ್ಯ 7:30 PM ಗೆ ಆರಂಭವಾಗುತ್ತದೆ. ಆದರೆ, ಈ ಪಂದ್ಯಕ್ಕೆ ಕೂಡ ಮಳೆ ಅಡ್ಡಿಪಡಿಸಲಿದೆ.

ಪಂದ್ಯ ನಡೆಯುವ ದಿನ ಭಾನುವಾರ ಮೌಂಟ್ ಮೌಂಗನು ಸಿಟಿಯಲ್ಲಿ ಭಾರೀ ಮಳೆ ಆಗಲಿದೆ. ಹವಾಮಾನ ಇಲಾಖೆ ಸೂಚಿಸಿರುವ ಪ್ರಕಾರ ಪಂದ್ಯ ಆರಂಭವಾಗುವ 7 ಗಂಟೆಗೆ ಶೇ. 36 ರಷ್ಟು ಮಳೆಯ ಪ್ರಮಾಣ ಇರಲಿದೆ. ಪಂದ್ಯದ ಮಧ್ಯೆ ಶೇ. 64 ರಷ್ಟು ಮತ್ತು ಪಂದ್ಯ ಮುಗಿಯುವ ಸಮಯದಲ್ಲಿ ಶೇ. 34 ರಷ್ಟು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ
Image
Andre Russel: ವೆಸ್ಟ್ ಇಂಡೀಸ್ ಸ್ಟಾರ್ ಕ್ರಿಕೆಟಿಗ ಆಂಡ್ರೆ ರಸೆಲ್ ಬೆತ್ತಲೆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್
Image
FIFA World Cup 2022: ಫಿಫಾ ವಿಶ್ವಕಪ್ 2022 ಆರಂಭಕ್ಕೆ ಒಂದೇ ದಿನ ಬಾಕಿ: ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಾ
Image
ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನ: ಆಯ್ಕೆ ಸಮಿತಿಯನ್ನೇ ವಜಾಗೊಳಿಸಿದ ಬಿಸಿಸಿಐ
Image
FIFA World Cup: ಡೆಲ್ಲಿ ಟು ಕತಾರ್ ಫ್ಲೈಟ್ ಟಿಕೆಟ್​ ಬೆಲೆಗಿಂತಲೂ ದುಬಾರಿ ಫಿಫಾ ವಿಶ್ವಕಪ್‌ ಟಿಕೆಟ್ ಬೆಲೆ..!

ಮಳೆಯ ಪ್ರಮಾಣ ಹೇಗಿರಲಿದೆ?:

07:00 PM – 19 ಡಿಗ್ರಿ (ಶೇ. 36 ರಷ್ಟು ಮಳೆ ಆಗುವ ಸಾಧ್ಯತೆ).

08:00 PM – 18 ಡಿಗ್ರಿ (ಶೇ. 49 ರಷ್ಟು ಮಳೆ ಆಗುವ ಸಾಧ್ಯತೆ).

09:00 PM – 17 ಡಿಗ್ರಿ (ಶೇ. 64 ರಷ್ಟು ಮಳೆ ಆಗುವ ಸಾಧ್ಯತೆ.

10:00 PM – 17 ಡಿಗ್ರಿ (ಶೇ. 64 ರಷ್ಟು ಮಳೆ ಆಗುವ ಸಾಧ್ಯತೆ).

11:00 PM – 15 ಡಿಗ್ರಿ (ಶೇ. 40 ರಷ್ಟು ಮಳೆ ಆಗುವ ಸಾಧ್ಯತೆ).

00:00 AM – 15 ಡಿಗ್ರಿ (ಶೇ. 34 ರಷ್ಟು ಮಳೆ ಆಗುವ ಸಾಧ್ಯತೆ).

ಭಾರತ- ನ್ಯೂಜಿಲೆಂಡ್ ನಡುವೆ ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿ ಆಯೋಜಿಸಲಾಗಿದೆ. ಈ ಪೈಕಿ ಮೊದಲ ಟಿ20 ಪಂದ್ಯ ಮಳೆಗೆ ಆಹುತಿಯಾಯಿತು. ಭಾರತ ಪರ ಕೆಲ ಹಿರಿಯ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಟಿ20 ಸರಣಿಯನ್ನು ಹಾರ್ದಿಕ್ ಪಾಂಡ್ಯ ನಾಯಕನಾಗಿ ಮುನ್ನಡೆಸಲಿದ್ದಾರೆ. ಶಿಖರ್ ಧವನ್ ಏಕದಿನ ಸರಣಿಗೆ ಕ್ಯಾಪ್ಟನ್ ಆಗಿದ್ದಾರೆ. ರೋಹಿತ್ ಶರ್ಮಾ, ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಅವರಿಗೆ ನ್ಯೂಜಿಲೆಂಡ್ ಪ್ರವಾಸದಿಂದ ವಿಶ್ರಾಂತಿ ನೀಡಲಾಗಿದೆ.

ಮುಂದಿನ ಪಂದ್ಯ ಯಾವಾಗ?:

2ನೇ T20I – ನವೆಂಬರ್ 20, ಮೌಂಟ್ ಮೌಂಗನು

3ನೇ T20I – ನವೆಂಬರ್ 22, ನೇಪಿಯರ್‌

ಏಕದಿನ ಸರಣಿ: ಬೆಳಗ್ಗೆ 7 ಗಂಟೆಗೆ ಆರಂಭ

ಮೊದಲ ODI – ನವೆಂಬರ್ 25, ಆಕ್ಲೆಂಡ್‌

ಎರಡನೇ ODI – ನವೆಂಬರ್ 27, ಹ್ಯಾಮಿಲ್ಟನ್‌

ಮೂರನೇ ODI – ನವೆಂಬರ್ 30, ಕ್ರೈಸ್ಟ್‌ಚರ್ಚ್‌

ಟಿ20 ಸರಣಿಗೆ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ಉಪನಾಯಕ/ ವಿಕೆಟ್‌ಕೀಪರ್‌), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್‌), ವಾಷಿಂಗ್ಟನ್‌ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್.

Published On - 10:41 am, Sat, 19 November 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ