AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಭಾರತ ತಂಡದ ಗೆಲುವಿಗೆ 359 ರನ್​ಗಳ ಗುರಿ

India vs New Zealand, 2nd Test: ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಭಾರತ ತಂಡವು ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್​ಗಳಿಂದ ಪರಾಜಯಗೊಂಡಿತ್ತು.

IND vs NZ: ಭಾರತ ತಂಡದ ಗೆಲುವಿಗೆ 359 ರನ್​ಗಳ ಗುರಿ
IND vs NZ
ಝಾಹಿರ್ ಯೂಸುಫ್
|

Updated on:Oct 26, 2024 | 10:37 AM

Share

ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ನ್ಯೂಝಿಲೆಂಡ್ ತಂಡವು 255 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 259 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಕೇವಲ 156 ರನ್​ಗಳಿಗೆ ಆಲೌಟ್ ಆಗಿದ್ದರು.

ಮೊದಲ ಇನಿಂಗ್ಸ್​ನಲ್ಲಿ 103 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಕಿವೀಸ್ ಪರ ನಾಯಕ ಟಾಮ್ ಲ್ಯಾಥಮ್ 133 ಎಸೆತಗಳಲ್ಲಿ 10 ಫೋರ್​ಗಳೊಂದಿಗೆ 86 ರನ್ ಬಾರಿಸಿದರು.

ಇನ್ನು ಟಾಮ್ ಬ್ಲಂಡೆಲ್ 41 ರನ್​ಗಳ ಕೊಡುಗೆ ನೀಡಿದರೆ, ಗ್ಲೆನ್ ಫಿಲಿಪ್ಸ್ ಅಜೇಯ 47  ರನ್​ ಬಾರಿಸಿದರು. ಈ ಮೂಲಕ ನ್ಯೂಝಿಲೆಂಡ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 255 ರನ್​ಗಳಿಸಿ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ ಮೊದಲ ಇನಿಂಗ್ಸ್​ನಲ್ಲಿ  7 ವಿಕೆಟ್ ಪಡೆದಿದ್ದ ವಾಷಿಂಗ್ಟನ್ ಸುಂದರ್ ದ್ವಿತೀಯ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದರು. ಹಾಗೆಯೇ ರವೀಂದ್ರ ಜಡೇಜಾ 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಟೀಮ್ ಇಂಡಿಯಾಗೆ 359 ರನ್​ಗಳ ಗುರಿ:

ಮೊದಲ ಇನಿಂಗ್ಸ್​ನಲ್ಲಿನ 103 ರನ್​ಗಳ ಹಿನ್ನಡೆಯೊಂದಿಗೆ ಭಾರತ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 359 ರನ್​ಗಳ ಗುರಿ ಪಡೆದುಕೊಂಡಿದೆ. ಇನ್ನೂ ಎರಡುವರೆ ದಿನದಾಟಗಳು ಬಾಕಿಯಿದ್ದು, ಇದರೊಳಗೆ ಭಾರತ ತಂಡವು ಈ ಗುರಿ ಮುಟ್ಟಿದರೆ ಗೆಲುವು ತನ್ನದಾಗಿಸಿಕೊಳ್ಳಬಹುದು.​

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷರ್ಭ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ, ಆಕಾಶ್ ದೀಪ್.

ನ್ಯೂಝಿಲೆಂಡ್ ಪ್ಲೇಯಿಂಗ್ 11: ಟಾಮ್ ಲ್ಯಾಥಮ್ (ನಾಯಕ), ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಟಿಮ್ ಸೌಥಿ, ಮಿಚೆಲ್ ಸ್ಯಾಂಟ್ನರ್, ಅಜಾಝ್ ಪಟೇಲ್, ವಿಲಿಯಂ ಒರೋಕ್.

ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ ಪಂದ್ಯ:

ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಭಾರತ ತಂಡವು ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್​ಗಳಿಂದ ಪರಾಜಯಗೊಂಡಿತ್ತು.

ಇದೀಗ ಎರಡನೇ ಪಂದ್ಯದಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು. ಹಾಗಾಗಿ ಟೀಮ್ ಇಂಡಿಯಾ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಇದೀಗ ಈ ನಿರ್ಣಾಯಕ ಪಂದ್ಯವು ಕೊನೆಯ ಇನಿಂಗ್ಸ್​ನತ್ತ ಸಾಗಿದ್ದು, ಅದರಂತೆ ಭಾರತ ತಂಡವು 359 ರನ್​ಗಳಿಸಿದರೆ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಬಹುದು.

Published On - 10:35 am, Sat, 26 October 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ