IND vs NZ: ಭಾರತಕ್ಕೆ ಆರಂಭಿಕ ಆಘಾತ; ಮತ್ತೊಮ್ಮೆ ಸೊನ್ನೆಗೆ ಬಲಿಯಾದ ರೋಹಿತ್ ಶರ್ಮಾ

IND vs NZ: ಪುಣೆಯಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದ ಆಟದಲ್ಲಿ, ನ್ಯೂಜಿಲೆಂಡ್ ತಂಡ 259 ರನ್‌ಗಳಿಗೆ ಆಲೌಟ್ ಆಯಿತು. ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್ ಜೊತೆಗೂಡಿ ಕಿವೀಸ್ ಪಡೆಯ ಎಲ್ಲಾ 10 ವಿಕೆಟ್ ಪಡೆದರು. ಇತ್ತ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಭಾರತ ತಂಡ ಮೊದಲ ದಿನದಾಟದಂತ್ಯಕ್ಕೆ ಒಂದು ವಿಕೆಟ್ ನಷ್ಟಕ್ಕೆ 16 ರನ್ ಗಳಿಸಿದೆ. ರೋಹಿತ್ ಶರ್ಮಾ ಮತ್ತೊಮ್ಮೆ ಶೂನ್ಯಕ್ಕೆ ಔಟ್ ಆದರೆ, ಗಿಲ್ ಮತ್ತು ಜೈಸ್ವಾಲ್ ಎರಡನೇ ದಿನದ ಆಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

IND vs NZ: ಭಾರತಕ್ಕೆ ಆರಂಭಿಕ ಆಘಾತ; ಮತ್ತೊಮ್ಮೆ ಸೊನ್ನೆಗೆ ಬಲಿಯಾದ ರೋಹಿತ್ ಶರ್ಮಾ
ಭಾರತ- ನ್ಯೂಜಿಲೆಂಡ್
Follow us
|

Updated on:Oct 24, 2024 | 5:16 PM

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯವು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರದಿಂದ ಆರಂಭವಾಗಿದೆ. ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ 259 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಮೊದಲ ದಿನದಾಟದ ಮೂರನೇ ಸೆಷನ್​ನಲ್ಲಿ ಕಿವೀಸ್ ಪಡೆಯನ್ನು ಆಲೌಟ್ ಮಾಡಿದ ಟೀಂ ಇಂಡಿಯಾ ಕೂಡ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದೆ. ಆದರೆ ತಂಡಕ್ಕೆ ಮತ್ತೊಮ್ಮೆ ಆರಂಭಿಕ ಆಘಾತ ಎದುರಾಗಿದೆ. ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ನಿರಾಸೆ ಮೂಡಿಸಿದ್ದು, ಬೆಂಗಳೂರು ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 2 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದ್ದ ರೋಹಿತ್, ಈ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಖಾತೆ ತೆರೆಯದೆ ಔಟಾಗಿದ್ದಾರೆ. ಉಳಿದಂತೆ ತಂಡದ ಪರ ಅಜೇಯರಾಗಿ ಉಳಿದಿರುವ ಶುಭ್​ಮನ್ ಗಿಲ್ ಹಾಗೂ ಯಶಸ್ವಿ ಜೈಸ್ವಾಲ್ ಎರಡನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದು, ದಿನದಾಟದಂತ್ಯಕ್ಕೆ ಟೀಂ ಇಂಡಿಯಾ 1 ವಿಕೆಟ್ ಕಳೆದುಕೊಂಡು 16 ರನ್ ಕಲೆಹಾಕಿದೆ.

ತಂಡದಲ್ಲಿ 3 ಬದಲಾವಣೆ

ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಕಿವೀಸ್ ತಂಡದಲ್ಲಿ ಮ್ಯಾಟ್ ಹೆನ್ರಿ ರೂಪದಲ್ಲಿ ಒಂದು ಬದಲಾವಣೆ ಮಾಡಿದ್ದರೆ, ಭಾರತ ತಂಡದಲ್ಲಿ 3 ಬದಲಾವಣೆ ಮಾಡಲಾಗಿತ್ತು. ಅದರಂತೆ ಕೆಎಲ್ ರಾಹುಲ್, ಮೊಹಮ್ಮದ್ ಸಿರಾಜ್ ಮತ್ತು ಕುಲ್ದೀಪ್ ಯಾದವ್​ರನ್ನು ತಂಡದಿಂದ ಕೈಬಿಟ್ಟಿದ್ದರೆ, ಅವರ ಬದಲಿಗೆ ವಾಷಿಂಗ್ಟನ್ ಸುಂದರ್, ಶುಭ್​ಮನ್ ಗಿಲ್ ಮತ್ತು ಆಕಾಶ್ ದೀಪ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು.

10 ವಿಕೆಟ್ ಉರುಳಿಸಿದ ಇಬ್ಬರು

ಇನ್ನು ಮೊದಲ ಇನ್ನಿಂಗ್ಸ್ ಆರಂಭಿಸಿದ ಕಿವೀಸ್ ಪಡೆಗೆ ಆರಂಭಿಕ ಆಘಾತ ನೀಡುವಲ್ಲಿ ಅಶ್ವಿನ್ ಯಶಸ್ವಿಯಾದರು. ಅಶ್ವಿನ್, ನ್ಯೂಜಿಲೆಂಡ್‌ ತಂಡದ ಮೊದಲ ಮೂರು ವಿಕೆಟ್​ಗಳನ್ನು ಉರುಳಿಸಿದರೆ, ಇದಾದ ನಂತರ ವಾಷಿಂಗ್ಟನ್ ಸುಂದರ್ ಜವಾಬ್ದಾರಿ ವಹಿಸಿಕೊಂಡು ಕಿವೀಸ್ ಬ್ಯಾಟ್ಸ್‌ಮನ್‌ಗಳಿಗೆ ಪೆವಿಲಿಯನ್ ಹಾದಿ ತೋರಿಸಿದರು. ಆದಾಗ್ಯೂ ಅಶ್ವಿನ್ ಮತ್ತು ಸುಂದರ್ ಅವರ ಬಿರುಗಾಳಿಯ ನಡುವೆಯೂ ಕಿವೀಸ್ ಪರ ಡೆವೊನ್ ಕಾನ್ವೆ ಅತ್ಯಧಿಕ 76 ರನ್​ಗಳ ಇನ್ನಿಂಗ್ಸ್ ಆಡಿದರೆ, ರಚಿನ್ ರವೀಂದ್ರ 65 ರನ್​ಗಳ ಕಾಣಿಕೆ ನೀಡಿದರು. ಕೊನೆಯಲ್ಲಿ ಮಿಚೆಲ್ ಸ್ಯಾಂಟ್ನರ್ 33 ರನ್​ಗಳ ಕಾಣಿಕೆ ನೀಡಿದರು. ಉಳಿದಂತೆ ಕಿವೀಸ್ ಪಡೆಯ ಐವರು ಬ್ಯಾಟ್ಸ್‌ಮನ್‌ಗಳಿಗೆ ಎರಡಂಕಿ ದಾಟಲು ಸಾಧ್ಯವಾಗದಿದ್ದರೆ, ಇತ್ತ ಟೀಂ ಇಂಡಿಯಾ ಪರ ಜಸ್ಪ್ರೀತ್ ಬುಮ್ರಾ, ಆಕಾಶ್ ದೀಪ್ ಮತ್ತು ರವೀಂದ್ರ ಜಡೇಜಾಗೆ ಯಾವುದೇ ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:10 pm, Thu, 24 October 24

ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು