AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs New Zealand: ಟೀಮ್ ಇಂಡಿಯಾ ಬೌಲಿಂಗ್ ಬಿರುಗಾಳಿಗೆ ತತ್ತರಿಸಿದ ನ್ಯೂಜಿಲೆಂಡ್: ಟೆಸ್ಟ್ ಸರಣಿ ವಶಪಡಿಸಿಕೊಂಡ ಕೊಹ್ಲಿ ಪಡೆ

ಭಾರತ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸುವ ಮೂಲಕ ಟೆಸ್ಟ್ ಸರಣಿ ವಶಪಡಿಸಿಕೊಂಡಿದೆ. ಭಾರತದಲ್ಲಿ ಒಂದೂ ಟೆಸ್ಟ್ ಸರಣಿ ಗೆಲ್ಲದ ನ್ಯೂಜಿಲೆಂಡ್ ತನ್ನ ಹಳೇ ಕೆಟ್ಟ ದಾಖಲೆಯನ್ನು ಈ ಬಾರಿಯೂ ಮುಂದುವರೆಸಿದೆ. ಕಾನ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾ ಆಗಿತ್ತು.

India vs New Zealand: ಟೀಮ್ ಇಂಡಿಯಾ ಬೌಲಿಂಗ್ ಬಿರುಗಾಳಿಗೆ ತತ್ತರಿಸಿದ ನ್ಯೂಜಿಲೆಂಡ್: ಟೆಸ್ಟ್ ಸರಣಿ ವಶಪಡಿಸಿಕೊಂಡ ಕೊಹ್ಲಿ ಪಡೆ
IND vs NZ
TV9 Web
| Edited By: |

Updated on:Dec 06, 2021 | 10:45 AM

Share

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಣ ಅಂತಿಮ ಎರಡನೇ ಟೆಸ್ಟ್​ ಪಂದ್ಯದಲ್ಲಿ ಭಾರತ (India) ಬರೋಬ್ಬರಿ 372 ರನ್​ಗಳ ಅಮೋಘ ಗೆಲುವು ಕಾಣುವ ಮೂಲಕ ಟೆಸ್ಟ್ ಸರಣಿ ವಶಪಡಿಸಿಕೊಂಡಿದೆ. ಇದು ಭಾರತ ದಾಖಲಿಸಿದ ದೊಡ್ಡ ಮೊತ್ತದ ಗೆಲುವಾಗಿದೆ. ಟೀಮ್ ಇಂಡಿಯಾ (Team India) ಬೌಲಿಂಗ್ ಬಿರುಗಾಳಿಗೆ ತತ್ತರಿಸಿದ ಕಿವೀಸ್ ಬ್ಯಾಟರ್​ಗಳು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಹಾದಿ ಹಿಡಿದು ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 167 ರನ್​ಗೆ ಆಲೌಟ್ ಆದರು. ಇದಕ್ಕೂ ಮೊದಲು ನ್ಯೂಜಿಲೆಂಡ್ (New Zealand) ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 62 ರನ್​ಗೆ ಸರ್ವಪತನ ಕಂಡು ಕೆಟ್ಟ ದಾಖಲೆ ಬರೆದಿತ್ತು. ಈ ಗೆಲುವಿನೊಂದಿಗೆ ಭಾರತ 1-0 ಅಂತರದಿಂದ ಮುನ್ನಡೆ ಪಡೆದುಕೊಂಡು ಟೆಸ್ಟ್ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಿದೆ.

ಇಂದು ನಾಲ್ಕನೇ ದಿನ ಜಯಂತ್ ಯಾದವ್ ನ್ಯೂಜಿಲೆಂಡ್​ಗೆ ಮಾರಕವಾಗಿ ಪರಿಣಮಿಸಿದರು. ಮೂರನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್​ ಕಳೆದುಕೊಂಡು 140 ರನ್ ಗಳಿಸಿದ್ದ ನ್ಯೂಜಿಲೆಂಡ್ ಇಂದು ಆರಂಭದಲ್ಲೇ ವಿಕೆಟ್ ಕಳೆದುಕೊಂಡಿತು. ಹೆನ್ರಿ ನಿಕೋಲ್ಸ್ ಮತ್ತು ರಚಿನ್ ರವೀಂದ್ರ ಇನ್ನಿಂಗ್ಸ್ ಆರಂಭಿಸಿದ ಕೆಲವೇ ಓವರ್​ಗಳಲ್ಲಿ ಬೌಲಿಂಗ್ ಮಾಡಲು ಬಂದ ಜಯಂತ್ ನಾಲ್ಕನೇ ದಿನದ ಹೀರೋ ಆದರು.

8 ರನ್ ಗಳಿಸಿದ್ದ ರಚಿನ್ ರವೀಂದ್ರ ಮೊದಲಿಗೆ ಪೂಜಾರಗೆ ಕ್ಯಾಚ್ ನೀಡಿ ನಿರ್ಗಮಿಸಿದರೆ ಬಂದ ಬೆನ್ನಲ್ಲೇ ಕೈಲ್ ಜೆಮಿಸನ್ ಹಾಗೂ ಟಿಮ್ ಸೌಥೀ ಖಾತೆ ತೆರೆಯದೆ ಜಯಂತ್ ಬೌಲಿಂಗ್​ನಲ್ಲಿ ಪೆವಿಲಯನ್ ಸೇರಿಕೊಂಡರು. ನಂತರ ವಿಲಿಯಂ ಸೋಮರ್ವಿಲ್ಲೆ 1 ರನ್​ಗೆ ಸುಸ್ತಾದರೆ, ಹೆನ್ರಿ ನಿಕೋಲ್ಸ್ 44 ರನ್​ಗೆ ವಿಕೆಟ್ ಒಪ್ಪಿಸುವ ಮೂಲಕ ನ್ಯೂಜಿಲೆಂಡ್ 56.3 ಓವರ್​ನಲ್ಲಿ 167 ರನ್​ಗೆ ಆಲೌಟ್ ಆಯಿತು. ಭಾರತ ಪರ ಎರಡನೇ ಇನ್ನಿಂಗ್ಸ್​ನಲ್ಲಿ ಜಯಂತ್ ಯಾದವ್ 4 ವಿಕೆಟ್ ಕಿತ್ತರೆ, ಆರ್. ಅಶ್ವಿನ್ 4 ಮತ್ತು ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.

ಈ ಮೂಲಕ ಭಾರತ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿ ಟೆಸ್ಟ್ ಸರಣಿ ವಶಪಡಿಸಿಕೊಂಡಿದೆ. ಭಾರತದಲ್ಲಿ ಒಂದೂ ಟೆಸ್ಟ್ ಸರಣಿ ಗೆಲ್ಲದ ನ್ಯೂಜಿಲೆಂಡ್ ತನ್ನ ಹಳೇ ಕೆಟ್ಟ ದಾಖಲೆಯನ್ನು ಈ ಬಾರಿಯೂ ಮುಂದುವರೆಸಿದೆ. ಕಾನ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾ ಆಗಿತ್ತು.

ಈ ಪಂದ್ಯದಲ್ಲಿ ಮೊದಲು ಮಳೆ ಕಾಟದ ನಡುವೆಗೂ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ್ದ ಭಾರತ ತಂಡ ಮೊದಲ ಇನಿಂಗ್ಸ್​ನಲ್ಲಿ 325 ರನ್ ಗಳಿಸಿ, ಬಳಿಕ ಕಿವೀಸ್ ಪಡೆಯನ್ನು ಪ್ರಥಮ ಇನಿಂಗ್ಸ್​ನಲ್ಲಿ 62 ರನ್​ಗಳ ಅಲ್ಪ ಮೊತ್ತಕ್ಕೆ ಆಲ್ಔಟ್ ಮಾಡಿತು. ಫಾಲೋ ಆನ್ ಹೇರದೆ ಎರಡನೇ ಇನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ 2ನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 69 ರನ್​ಗಳಿಸಿತ್ತು.

ಮೂರನೇ ದಿನದಾಟ ಆರಂಭಿಸಿದ ಭಾರತ ಪರ ಮಯಾಂಕ್ ಅಗರ್ವಾಲ್ (62ರನ್, 108 ಎಸೆತ, 9ಬೌಂಡರಿ, 1 ಸಿಕ್ಸರ್) ಹಾಗೂ ಚೇತೇಶ್ವರ ಪೂಜಾರ (47 ರನ್, 97 ಎಸೆತ, 6 ಬೌಂಡರಿ, 1 ಸಿಕ್ಸರ್) ಜೋಡಿ ಉತ್ತಮ ಲಯ ಕಂಡುಕೊಂಡಿತು. ಇದರ ನಡುವೆಯೂ ಅಜಾಜ್ ಪಟೇಲ್ (106ಕ್ಕೆ 4) ಹಾಗೂ ರಚಿನ್ ರವೀಂದ್ರ (56ಕ್ಕೆ 3) ಮಾರಕ ದಾಳಿಯಿಂದ ಗಮನಸೆಳೆದರು. ಬಳಿಕ ಉತ್ತಮ ಟಾರ್ಗೆಟ್ ಪೇರಿಸಿದ ಹಿನ್ನೆಲೆಯಲ್ಲಿ ಭಾರತ ತಂಡ 7 ವಿಕೆಟ್​ಗೆ 276 ರನ್​ಗಳಿಸಿ ಎರಡನೇ ಇನಿಂಗ್ಸ್​ಗೆ ಡಿಕ್ಲೇರ್ ಘೋಷಿಸಿತ್ತು.

Published On - 10:17 am, Mon, 6 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ