IND vs NZ: ಟಾಸ್ ಗೆದ್ದ ನ್ಯೂಝಿಲೆಂಡ್: ಭಾರತ ತಂಡದಲ್ಲಿ 3 ಬದಲಾವಣೆ

India vs New Zealand, 2nd Test: ಬೆಂಗಳೂರಿನಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವು 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಕಿವೀಸ್ ಪಡೆಯು 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ಸರಣಿಯಲ್ಲಿ ಸಮಬಲ ಸಾಧಿಸಬೇಕಿದ್ದರೆ ದ್ವಿತೀಯ ಟೆಸ್ಟ್ ಪಂದ್ಯವನ್ನು ಟೀಮ್ ಇಂಡಿಯಾ ಗೆಲ್ಲಲೇಬೇಕು.

IND vs NZ: ಟಾಸ್ ಗೆದ್ದ ನ್ಯೂಝಿಲೆಂಡ್: ಭಾರತ ತಂಡದಲ್ಲಿ 3 ಬದಲಾವಣೆ
IND vs NZ
Follow us
|

Updated on:Oct 24, 2024 | 9:13 AM

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಶುರುವಾಗಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಝಿಲೆಂಡ್ ನಾಯಕ ಟಾಮ್ ಲ್ಯಾಥಮ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.

ಇನ್ನು ಈ ಪಂದ್ಯಕ್ಕಾಗಿ ಭಾರತ ತಂಡದ ಆಡುವ ಬಳಗದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ಮೊದಲ ಪಂದ್ಯದಿಂದ ಹೊರಗುಳಿದಿದ್ದ ಶುಭ್​ಮನ್ ಗಿಲ್ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದು, ಕೆಎಲ್ ರಾಹುಲ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡಲಾಗಿದೆ. ಇನ್ನು ಮೊಹಮ್ಮದ್ ಸಿರಾಜ್ ಬದಲಿಗೆ ಈ ಬಾರಿ ಆಕಾಶ್ ದೀಪ್ ಹಾಗೂ ಕುಲ್ದೀಪ್ ಯಾದವ್ ಬದಲಿಗೆ ವಾಷಿಂಗ್ಟನ್ ಸುಂದರ್​ಗೆ ಚಾನ್ಸ್ ನೀಡಲಾಗಿದೆ. ಅದರಂತೆ ಉಭಯ ತಂಡಗಳ ಆಡುವ ಬಳಗ ಈ ಕೆಳಗಿನಂತಿದೆ…

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷರ್ಭ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ, ಆಕಾಶ್ ದೀಪ್.

ನ್ಯೂಝಿಲೆಂಡ್ ಪ್ಲೇಯಿಂಗ್ 11: ಟಾಮ್ ಲ್ಯಾಥಮ್ (ನಾಯಕ), ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಟಿಮ್ ಸೌಥಿ, ಮಿಚೆಲ್ ಸ್ಯಾಂಟ್ನರ್, ಅಜಾಝ್ ಪಟೇಲ್, ವಿಲಿಯಂ ಒರೋಕ್.

ಭಾರತದ ಪಾಲಿಗೆ ಮಹತ್ವದ ಪಂದ್ಯ:

ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಭಾರತ ತಂಡವು ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್​ಗಳಿಂದ ಪರಾಜಯಗೊಂಡಿತ್ತು.

ಇದೀಗ ಎರಡನೇ ಪಂದ್ಯದಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು. ಹೀಗಾಗಿ ಟೀಮ್ ಇಂಡಿಯಾ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ ಎಂದರೆ ತಪ್ಪಾಗಲಾರದು.

ಅತ್ತ ನ್ಯೂಝಿಲೆಂಡ್ ತಂಡವು ಈ ಮ್ಯಾಚ್​ನಲ್ಲಿ ಗೆದ್ದರೆ ಸರಣಿಯನ್ನು ವಶಪಡಿಸಿಕೊಳ್ಳಬಹುದು. ಅಥವಾ ಈ ಪಂದ್ಯದಲ್ಲಿ ಡ್ರಾ ಸಾಧಿಸಿದರೂ ಸರಣಿ ಸೋಲನ್ನು ತಪ್ಪಿಸಿಕೊಳ್ಳಬಹುದು. ಹೀಗಾಗಿ ಈ ಮ್ಯಾಚ್​ನಲ್ಲೂ ಕಿವೀಸ್ ಪಡೆಯಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದಾಗಿದೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.

ಇದನ್ನೂ ಓದಿ: 4 ಓವರ್​ಗಳಲ್ಲಿ 93 ರನ್​ಗಳು… 7 ರನ್​ಗಳಿಂದ ಬೌಲರ್​ಗೆ ಶತಕ ಮಿಸ್..!

ನ್ಯೂಝಿಲೆಂಡ್ ಟೆಸ್ಟ್ ತಂಡ: ಟಾಮ್ ಲ್ಯಾಥಮ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ವಿಲ್ ಓ’ರೂರ್ಕ್, ಅಜಾಝ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಜೇಕೊಬ್ ಡಫಿ, ವಿಲ್ ಯಂಗ್, ಮೈಕೆಲ್ ಬ್ರೇಸ್‌ವೆಲ್, ಇಶ್ ಸೋಧಿ, ಕೇನ್ ವಿಲಿಯಮ್ಸನ್ (ದ್ವಿತೀಯ ಪಂದ್ಯಕ್ಕೆ ಅಲಭ್ಯ).

Published On - 9:05 am, Thu, 24 October 24

ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ