AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs New Zealand, 3rd T20I: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಸರಣಿ ಗೆದ್ದ ಟೀಮ್ ಇಂಡಿಯಾ

India vs New Zealand, 3rd T20I: 235 ರನ್​ಗಳ ಬೃಹತ್ ಟಾರ್ಗೆಟ್ ಪಡೆದ ನ್ಯೂಜಿಲೆಂಡ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಹಾರ್ದಿಕ್ ಪಾಂಡ್ಯ ಯಶಸ್ವಿಯಾದರು.

India vs New Zealand, 3rd T20I: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಸರಣಿ ಗೆದ್ದ ಟೀಮ್ ಇಂಡಿಯಾ
Team India
TV9 Web
| Edited By: |

Updated on:Feb 01, 2023 | 10:18 PM

Share

India vs New Zealand, 3rd T20I: ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಭಾರತ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ಕೆ ಮಾಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿರಲಿಲ್ಲ. ಆರಂಭಿಕ ಆಟಗಾರ ಇಶಾನ್ ಕಿಶನ್ ಕೇವಲ 1 ರನ್​ಗಳಿಸಿ ಔಟಾಗಿದ್ದರು. ಆದರೆ 2ನೇ ವಿಕೆಟ್​ಗೆ ಜೊತೆಯಾದ ಶುಭ್​ಮನ್ ಗಿಲ್ ಹಾಗೂ ರಾಹುಲ್ ತ್ರಿಪಾಠಿ ಭರ್ಜರಿ ಬ್ಯಾಟಿಂಗ್ ನಡೆಸಿದರು. ಅದರಲ್ಲೂ ಪವರ್​ಪ್ಲೇನಲ್ಲಿ ಅಬ್ಬರಿಸಿದ ತ್ರಿಪಾಠಿ ಕೇವಲ 22 ಎಸೆತಗಳಲ್ಲಿ 3 ಸಿಕ್ಸ್​ ಹಾಗೂ 4 ಫೋರ್​ನೊಂದಿಗೆ 44 ರನ್ ಬಾರಿಸಿ ಸೋಧಿ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.

ಇತ್ತ ರಾಹುಲ್ ತ್ರಿಪಾಠಿ ಔಟಾಗುತ್ತಿದ್ದಂತೆ ಅತ್ತ ಶುಭ್​ಮನ್ ಗಿಲ್ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದರು. ಪರಿಣಾಮ ಕೇವಲ 54 ಎಸೆತಗಳಲ್ಲಿ ಶುಭ್​ಮನ್ ಚೊಚ್ಚಲ ಟಿ20 ಶತಕ ಪೂರೈಸಿದರು. ಶತಕದ ಬಳಿಕ ಅಬ್ಬರ ಮುಂದುವರೆಸಿದ ಯುವ ದಾಂಡಿಗ 63 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 126 ರನ್​ ಬಾರಿಸಿದರು.  ಶುಭ್​ಮನ್ ಗಿಲ್ ಅವರ ಸ್ಪೋಟಕ ಶತಕದ ನೆರವಿನಿಂದ ಟೀಮ್ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 234 ರನ್​ ಕಲೆಹಾಕಿತು.

235 ರನ್​ಗಳ ಬೃಹತ್ ಟಾರ್ಗೆಟ್ ಪಡೆದ ನ್ಯೂಜಿಲೆಂಡ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಹಾರ್ದಿಕ್ ಪಾಂಡ್ಯ ಯಶಸ್ವಿಯಾದರು. ಮೊದಲ ಓವರ್​ನಲ್ಲೇ ಫಿನ್ ಅಲೆನ್ (1) ವಿಕೆಟ್ ಅನ್ನು ಹಾರ್ದಿಕ್ ಪಾಂಡ್ಯ ಪಡೆದರೆ, 2ನೇ ಓವರ್​ನಲ್ಲಿ ಅರ್ಷದೀಪ್ ಸಿಂಗ್ ಡೆವೊನ್ ಕಾನ್ವೆ (1) ಹಾಗೂ ಚಾಪ್​ಮ್ಯಾನ್ (0) ಗೆ ಪೆವಿಲಿಯನ್ ಹಾದಿ ತೋರಿಸಿದರು.

ಇದನ್ನೂ ಓದಿ
Image
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
Image
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Image
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
Image
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

ಇನ್ನು ಗ್ಲೆನ್ ಫಿಲಿಪ್ಸ್ (2) ಬಂದ ವೇಗದಲ್ಲೇ ಪಾಂಡ್ಯಗೆ ವಿಕೆಟ್ ಒಪ್ಪಿಸಿ ಹಿಂತಿರುಗಿದರು. ಮರು ಓವರ್​ನಲ್ಲೇ ಉಮ್ರಾನ್ ಮಲಿಕ್ ಬ್ರೇಸ್​ವೆಲ್ (8) ರನ್ನು ಕ್ಲೀನ್ ಬೌಲ್ಡ್ ಮಾಡಿದರು. ಪರಿಣಾಮ ನ್ಯೂಜಿಲೆಂಡ್ ತಂಡವು ಕೇವಲ 21 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಡೇರಿಲ್ ಮಿಚೆಲ್ ಹಾಗೂ ಸ್ಯಾಂಟ್ನರ್ ತಂಡದ ಮೊತ್ತವನ್ನು 50 ರ ಗಡಿದಾಟಿಸಿದರು.

ಆದರೆ ಈ ವೇಳೆ ದಾಳಿಗಿಳಿದ ಶಿವಂ ಮಾವಿ ಸ್ಯಾಂಟ್ನರ್ (13) ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇದರ ಬೆನ್ನಲ್ಲೇ ಇಶ್ ಸೋಧಿ (0) ವಿಕೆಟ್ ಕೂಡ ಪಡೆದರು. ಆ ಬಳಿಕ ಬಂದ ಲಾಕಿ ಫರ್ಗುಸನ್ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಒಂದೆಡೆ ಡೇರಿಲ್ ಮಿಚೆಲ್ ನಿಧಾನಗತಿಯಲ್ಲಿ ತಂಡದ ಮೊತ್ತವನ್ನು ಹೆಚ್ಚಿಸುವ ಕಾಯಕ ಮುಂದುವರೆಸಿದರು. ಈ ಹಂತದಲ್ಲಿ ಟಿಕ್ನರ್ ವಿಕೆಟ್ ಪಡೆದು ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾಗೆ 9ನೇ ಯಶಸ್ಸು ತಂದುಕೊಟ್ಟರು. ಇನ್ನು ಡೇರಿಲ್ ಮಿಚೆಲ್ ವಿಕೆಟ್ ಪಡೆಯುವ ಮೂಲಕ ಉಮ್ರಾನ್ ಮಲಿಕ್ ನ್ಯೂಜಿಲೆಂಡ್ ತಂಡವನ್ನು ಕೇವಲ 66 ರನ್​ಗಳಿಗೆ ಆಲೌಟ್ ಮಾಡಿದರು. ಇದರೊಂದಿಗೆ ಟೀಮ್ ಇಂಡಿಯಾ 168 ರನ್​ಗಳ ಭರ್ಜರಿ ಜಯ ಸಾಧಿಸಿತು.

ಟೀಮ್ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ 4 ಓವರ್​ನಲ್ಲಿ 16 ರನ್ ನೀಡಿ 4 ವಿಕೆಟ್ ಪಡೆದರೆ, ಉಮ್ರಾನ್ ಮಲಿಕ್, ಶಿವಂ ಮಾವಿ ಹಾಗೂ ಅರ್ಷದೀಪ್ ಸಿಂಗ್ ತಲಾ 2 ವಿಕೆಟ್ ಕಬಳಿಸಿದರು.

ಟೀಮ್ ಇಂಡಿಯಾ ಪ್ಲೇಯಿಂಗ್ 11: ಇಶಾನ್ ಕಿಶನ್, ಶುಭ್​ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಕುಮಾರ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಕುಲ್ದೀಪ್ ಯಾದವ್.

ನ್ಯೂಜಿಲೆಂಡ್ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಇಶ್ ಸೋಧಿ, ಲಾಕಿ ಫರ್ಗುಸನ್, ಬೆನ್ ಲಿಸ್ಟರ್, ಬ್ಲೇರ್ ಟಿಕ್ನರ್.

Published On - 10:11 pm, Wed, 1 February 23

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ