AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India squad for New Zealand Tests: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಬಿಸಿಸಿಐಯಿಂದ ಅಚ್ಚರಿಯ ಆಯ್ಕೆ

India vs New Zealand: ಟಿ20 ವಿಶ್ವಕಪ್ ಮುಗಿದ ಬಳಿಕ ತವರಿನಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್​ ಸರಣಿಗೆ ಬಿಸಿಸಿಐ ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ವಿರಾಟ್ ಕೊಹ್ಲಿ ಅವರು ಎರಡನೇ ಟೆಸ್ಟ್​ಗೆ ತಂಡ ಸೇರಿಕೊಳ್ಳುತ್ತಿರುವ ಕಾರಣ ಮೊದಲ ಟೆಸ್ಟ್​ ಅನ್ನು ಅಜಿಂಕ್ಯಾ ರಹಾನೆ ಮುನ್ನಡೆಸುತ್ತಿದ್ದಾರೆ.

India squad for New Zealand Tests: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಬಿಸಿಸಿಐಯಿಂದ ಅಚ್ಚರಿಯ ಆಯ್ಕೆ
India squad for New Zealand Tests
TV9 Web
| Edited By: |

Updated on:Nov 12, 2021 | 12:44 PM

Share

ತವರಿನಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್​ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಟೀಮ್ ಇಂಡಿಯಾವನ್ನು (India Squad for New Zeland Test Series) ಪ್ರಕಟ ಮಾಡಿದೆ. ವಿರಾಟ್ ಕೊಹ್ಲಿ (Virat Kohli) ಅವರು ಎರಡನೇ ಟೆಸ್ಟ್​ಗೆ ತಂಡ ಸೇರಿಕೊಳ್ಳುತ್ತಿರುವ ಕಾರಣ ಮೊದಲ ಟೆಸ್ಟ್​ ಅನ್ನು ಅಜಿಂಕ್ಯಾ ರಹಾನೆ (Ajinkya Rahane) ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಚೇತೇಶ್ವರ್ ಪೂಜಾರ (Cheteshwar Pujara) ಅವರಿಗೆ ಉಪ ನಾಯಕನ ಪಟ್ಟ ನೀಡಲಾಗಿದೆ. ರೋಹಿತ್ ಶರ್ಮಾ (Rohit Sharma), ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ರಿಷಭ್ ಪಂತ್, ಶಾರ್ದೂಲ್ ಠಾಕೂರ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇದರ ಜೊತೆಗೆ ಅಚ್ಚರಿಯ ಆಯ್ಕೆ ಮಾಡಲಾಗಿದ್ದು, ಶ್ರೇಯಸ್ ಅಯ್ಯರ್ (Shreyas Iyer), ಕೆಎಸ್ ಭರತ್ ಮತ್ತು ಜಯಂತ್ ಯಾದವ್ ಅವರನ್ನು ಟೆಸ್ಟ್ ಸರಣಿಗೆ (India vs New Zealand) ಆಯ್ಕೆ ಮಾಡಲಾಗಿದೆ.

ನ್ಯೂಜಿಲೆಂಡ್‌ ವಿರುದ್ಧದ ಈ ಸರಣಿಯೊಂದಿಗೆ ಮಾಜಿ ನಾಯಕ ರಾಹುಲ್‌ ದ್ರಾವಿಡ್‌ ಭಾರತ ತಂಡದ ಮುಖ್ಯ ಕೋಚ್‌ ಆಗಿ ಕೆಲಸ ಆರಂಭಿಸಲಿದ್ದಾರೆ. ಟೆಸ್ಟ್ ಸರಣಿಗೂ ಮುನ್ನ ಭಾರತ ತಂಡ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ. ಇದು ನವೆಂಬರ್‌ 17, 19 ಮತ್ತು 21ರಂದು ಕ್ರಮವಾಗಿ ಜೈಪುರ, ರಾಂಚಿ ಮತ್ತು ಕೋಲ್ಕತಾದಲ್ಲಿ ನಡೆಯಲಿದೆ. ಇದಾದ ಬಳಿಕ 2 ಪಂದ್ಯಗಳ ಟೆಸ್ಟ್‌ ಕ್ರಿಕೆಟ್‌ ಸರಣಿ ನ. 25 ರಂದು ಕಾನ್ಪುರ ಮತ್ತು ಡಿ. 3 ರಂದು ಮುಂಬೈನಲ್ಲಿ ಜರುಗಲಿದೆ.

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ:

ಅಜಿಂಕ್ಯಾ ರಹಾನೆ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ (ಉಪ – ನಾಯಕ), ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ದಿಮಾನ್ ಸಾಹ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ.

ಕಿವೀಸ್‌ ವಿರುದ್ಧದ ಟಿ20 ಕ್ರಿಕೆಟ್‌ ಸರಣಿಗೆ ಭಾರತ ತಂಡ ಹೀಗಿದೆ:

ರೋಹಿತ್‌ ಶರ್ಮಾ (ನಾಯಕ), ಕೆಎಲ್‌ ರಾಹುಲ್ (ಉಪನಾಯಕ), ಋತುರಾಜ್‌ ಗಾಯಕ್ವಾಡ್‌, ಶ್ರೇಯಸ್‌ ಅಯ್ಯರ್‌, ಸೂರ್ಯಕುಮಾರ್‌ ಯಾದವ್‌, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ಇಶಾನ್‌ ಕಿಶನ್‌ (ವಿಕೆಟ್‌ಕೀಪರ್‌), ವೆಂಕಟೇಶ್‌ ಅಯ್ಯರ್‌, ಯುಜ್ವೇಂದ್ರ ಚಹಲ್‌, ಆರ್‌ ಅಶ್ವಿನ್‌, ಅಕ್ಷರ್‌ ಪಟೇಲ್‌, ಅವೇಶ್ ಖಾನ್‌, ಭುವನೇಶ್ವರ್‌ ಕುಮಾರ್‌, ದೀಪಕ್ ಚಹರ್‌, ಹರ್ಷಲ್‌ ಪಟೇಲ್‌, ಮೊಹಮ್ಮದ್‌ ಸಿರಾಜ್‌.

Published On - 12:35 pm, Fri, 12 November 21

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್