Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಭಾರತ- ನ್ಯೂಜಿಲೆಂಡ್ ಫೈನಲ್ ಪಂದ್ಯಕ್ಕೆ ಅಂಪೈರ್​ಗಳ ನೇಮಕ

Champions Trophy 2025: 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. 2017ರಲ್ಲಿಯೂ ಫೈನಲ್ ತಲುಪಿದ್ದ ಟೀಂ ಇಂಡಿಯಾ ಪಾಕಿಸ್ತಾನದ ವಿರುದ್ಧ ಸೋತುಹೋಗಿತ್ತು. ಈ ಬಾರಿ ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡ ಚಾಂಪಿಯನ್ ಪಟ್ಟಕ್ಕಾಗಿ ಸ್ಪರ್ಧಿಸಲಿವೆ. ಮಾರ್ಚ್ 9 ರಂದು ದುಬೈನಲ್ಲಿ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಐಸಿಸಿ, ಅಂಪೈರ್‌ಗಳು ಮತ್ತು ಇತರ ಅಧಿಕಾರಿಗಳ ಪಟ್ಟಿಯನ್ನು ಘೋಷಿಸಿದೆ.

Champions Trophy 2025: ಭಾರತ- ನ್ಯೂಜಿಲೆಂಡ್ ಫೈನಲ್ ಪಂದ್ಯಕ್ಕೆ ಅಂಪೈರ್​ಗಳ ನೇಮಕ
Ind Vs Nz
Follow us
ಪೃಥ್ವಿಶಂಕರ
|

Updated on:Mar 07, 2025 | 6:58 PM

2025 ರ ಚಾಂಪಿಯನ್ಸ್ ಟ್ರೋಫಿಯ (Champions Trophy 2025) ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವೆ ನಡೆಯಲಿದೆ. 2017 ರಲ್ಲಿ ನಡೆದಿದ್ದ ಚಾಂಪಿಯನ್ಸ್ ಟ್ರೋಫಿಯಲ್ಲೂ ಫೈನಲ್​ಗೇರಿದ್ದ ಭಾರತ, ಪಾಕಿಸ್ತಾನದ ವಿರುದ್ಧ ಸೋತು ಚಾಂಪಿಯನ್ ಪಟ್ಟದಿಂದ ವಂಚಿತವಾಗಿತ್ತು. ಇದೀಗ 2013 ರ ನಂತರ ಟೀಂ ಇಂಡಿಯಾ ಮತ್ತೆ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿದೆ. ಇತ್ತ ನ್ಯೂಜಿಲೆಂಡ್ ಕೂಡ ಎರಡನೇ ಬಾರಿಗೆ ಈ ಪ್ರಶಸ್ತಿಯನ್ನು ಗೆಲ್ಲಲು ಪ್ರಯತ್ನಿಸುತ್ತಿದೆ. ಹೀಗಾಗಿ ಉಭಯ ತಂಡಗಳ ಈ ಕದನ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಉಭಯ ತಂಡಗಳ ನಡುವಿನ ಫೈನಲ್ ಹಣಾಹಣಿ ಮಾರ್ಚ್​ 9 ರ ಭಾನುವಾರದಂದು ನಡೆಯಲಿದ್ದು, ಇದೀಗ ಈ ಪ್ರಶಸ್ತಿ ಪಂದ್ಯಕ್ಕೆ ಐಸಿಸಿ ಪಂದ್ಯದ ಅಧಿಕಾರಿಗಳನ್ನು ಘೋಷಿಸಿದೆ.

ಪಂದ್ಯದ ಅಧಿಕಾರಿಗಳ ಪಟ್ಟಿ

  • ಮೈದಾನದ ಅಂಪೈರ್‌ಗಳು: ಪಾಲ್ ರೈಫಲ್ ಮತ್ತು ರಿಚರ್ಡ್ ಇಲ್ಲಿಂಗ್‌ವರ್ತ್
  • ಮೂರನೇ ಅಂಪೈರ್: ಜೋಯಲ್ ವಿಲ್ಸನ್
  • ನಾಲ್ಕನೇ ಅಂಪೈರ್: ಕುಮಾರ್ ಧರ್ಮಸೇನ
  • ಪಂದ್ಯ ರೆಫರಿ: ರಂಜನ್ ಮದುಗಲೆ

ಸೆಮೀಸ್ ಮುಖಾಮುಖಿ ಹೇಗಿತ್ತು?

ಫೈನಲ್ ಪಂದ್ಯಕ್ಕೂ ಮುನ್ನ ನಡೆದಿದ್ದ ಸೆಮಿಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ಗೆ ಪ್ರವೇಶಿಸಿದರೆ, ಇತ್ತ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾವನ್ನು 50 ರನ್‌ಗಳಿಂದ ಸೋಲಿಸಿತ್ತು. ಇದೀಗ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯವು ಮಾರ್ಚ್ 9 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2:30 ಕ್ಕೆ ಪ್ರಾರಂಭವಾಗಲಿದೆ.

ಇದನ್ನೂ ಓದಿ: Champions Trophy 2025: ಸೋತ ಆಫ್ರಿಕಾ; ಭಾರತ- ನ್ಯೂಜಿಲೆಂಡ್ ನಡುವೆ ಚಾಂಪಿಯನ್ಸ್ ಟ್ರೋಫಿ ಫೈನಲ್‌

ಇದನ್ನೂ ಓದಿ
Image
ಚೋಕರ್ಸ್​ ಪಟ್ಟವನ್ನು ತನ್ನಲ್ಲೇ ಉಳಿಸಿಕೊಂಡ ದಕ್ಷಿಣ ಆಫ್ರಿಕಾ
Image
ಸೋಲಿಗೆ ನೀನೇ ಕಾರಣ ಎಂದವರಿಗೆ ಗೆಲುವಿನ ಉತ್ತರ ನೀಡಿದ ರಾಹುಲ್
Image
ರಣರೋಚಕ ಪಂದ್ಯದಲ್ಲಿ ಕಾಂಗರೂಗಳನ್ನು ಮಣಿಸಿ ಫೈನಲ್​ಗೇರಿದ ಭಾರತ
Image
ಚಾಂಪಿಯನ್ಸ್ ಟ್ರೋಫಿ ನಡುವೆಯೇ ನಾಯಕತ್ವ ತ್ಯಜಿಸಿದ ಜೋಸ್ ಬಟ್ಲರ್

ಉಭಯ ತಂಡಗಳು

ನ್ಯೂಜಿಲೆಂಡ್ ತಂಡ: ವಿಲ್ ಯಂಗ್, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲೇಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ಒ’ರೂರ್ಕೆ, ಜಾಕೋಬ್ ಡಫಿ, ಡೆವೊನ್ ಕಾನ್ವೇ, ಮಾರ್ಕ್ ಚಾಪ್‌ಮನ್, ನಾಥನ್ ಸ್ಮಿತ್.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರವೀಂದ್ರ ಜಡೇಜ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 pm, Fri, 7 March 25

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ