AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಗೆಲುವಿಗಾಗಿ ರಣತಂತ್ರ; ಟೀಂ ಇಂಡಿಯಾದೆದುರು ದಾಳಿಗಿಳಿದ 35 ಬೌಲರ್ಸ್

India vs New Zealand: ಪುಣೆಯಲ್ಲಿ ನ್ಯೂಜಿಲೆಂಡ್ ಸ್ಪಿನ್ನರ್‌ಗಳಿಂದ ಭಾರತ ತಂಡ ಅನುಭವಿಸಿದ ಸೋಲಿನ ನಂತರ, ಮುಂಬೈ ಪಂದ್ಯಕ್ಕಾಗಿ ತೀವ್ರ ತರಬೇತಿ ನಡೆಸಲಾಗುತ್ತಿದೆ. ರೋಹಿತ್ ಶರ್ಮಾ ಮತ್ತು ಗೌತಮ್ ಗಂಭೀರ್ ನೇತೃತ್ವದಲ್ಲಿ, 35 ಬೌಲರ್‌ಗಳನ್ನು ನೆಟ್ಸ್‌ಗೆ ಕರೆಸಲಾಗಿದೆ, ಅದರಲ್ಲಿ ಹೆಚ್ಚಿನವರು ಸ್ಪಿನ್ನರ್‌ಗಳು. ದೀಪಾವಳಿ ರಜೆಯನ್ನು ರದ್ದುಗೊಳಿಸಿ ಆಟಗಾರರಿಗೆ ಹೆಚ್ಚುವರಿ ಅಭ್ಯಾಸ ನೀಡಲಾಗುತ್ತಿದೆ. ಈ ತರಬೇತಿಯ ಫಲಿತಾಂಶ ಮುಂಬೈ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದೆ.

IND vs NZ: ಗೆಲುವಿಗಾಗಿ ರಣತಂತ್ರ; ಟೀಂ ಇಂಡಿಯಾದೆದುರು ದಾಳಿಗಿಳಿದ 35 ಬೌಲರ್ಸ್
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Oct 30, 2024 | 7:37 PM

Share

ಪುಣೆಯ ಟರ್ನಿಂಗ್ ಟ್ರ್ಯಾಕ್‌ನಲ್ಲಿ ಭಾರತದ ತಂತ್ರವನ್ನು ಬುಡಮೇಲು ಮಾಡಿದ್ದ ನ್ಯೂಜಿಲೆಂಡ್‌ನ ಸ್ಪಿನ್ನರ್‌ಗಳು ರೋಹಿತ್ ಪಡೆಯನ್ನು ಸೈಲೆಂಟ್ ಮಾಡಿದ್ದರು. ಎರಡೂ ಇನ್ನಿಂಗ್ಸ್​ಗಳಲ್ಲಿ ಟೀಂ ಇಂಡಿಯಾ ಕಳೆದುಕೊಂಡ 20 ವಿಕೆಟ್​ಗಳಲ್ಲಿ 18 ವಿಕೆಟ್​ಗಳನ್ನು ಸ್ಪಿನ್ನರ್​ಗಳೇ ಉರುಳಿಸಿದ್ದರು. ಈ ಪಂದ್ಯದ ಸೋಲಿನ ಜತೆಗೆ ಸರಣಿಯನ್ನೂ ಕಳೆದುಕೊಂಡಿರುವ ಭಾರತ ತಂಡ ಇದೀಗ ವೈಟ್ ವಾಶ್ ಭೀತಿ ಎದುರಿಸುತ್ತಿದೆ. ಏತನ್ಮಧ್ಯೆ, ಸರಣಿಯ ಕೊನೆಯ ಪಂದ್ಯಕ್ಕೂ ಮುನ್ನ, ತಂಡದ ಈ ದೌರ್ಬಲ್ಯವನ್ನು ಹೋಗಲಾಡಿಸಲು ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ರೋಹಿತ್ ಶರ್ಮಾ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಅದರಂತೆ, ಮುಂಬೈ ಟೆಸ್ಟ್‌ಗೂ ಮೊದಲು ಟೀಂ ಇಂಡಿಯಾ ಆಟಗಾರರ ಅಭ್ಯಾಸಕ್ಕೆ ನೆರವಾಗಲು 35 ಬೌಲರ್‌ಗಳನ್ನು ನೆಟ್ಸ್​ಗೆ ಇಳಿಸಲಾಗಿದೆ ಎಂದು ವರದಿಯಾಗಿದೆ.

35 ಬೌಲರ್​ಗಳನ್ನು ಕಣಕ್ಕಿಳಿಸಲು ಪ್ಲಾನ್

ಪುಣೆ ಟೆಸ್ಟ್‌ನಲ್ಲಿ ಹೀನಾಯ ಸೋಲಿನ ನಂತರ ಕಠಿಣ ನಿರ್ಧಾರ ಕೈಗೊಂಡಿರುವ ಮುಖ್ಯ ಕೋಚ್ ಗೌತಮ್ ಗಂಭೀರ್, ಆಟಗಾರರ ದೀಪಾವಳಿ ರಜೆಯನ್ನು ರದ್ದುಗೊಳಿಸಿದ್ದಾರೆ. ಆ ಪ್ರಕಾರ ತಂಡದ ಆಡಳಿತ ಮಂಡಳಿಯು ಎಲ್ಲಾ ಆಟಗಾರರಿಗೆ ಎರಡು ದಿನಗಳ ಅಭ್ಯಾಸವನ್ನು ಕಡ್ಡಾಯಗೊಳಿಸಿತ್ತು. ಹೀಗಾಗಿ ದೀಪಾವಳಿಯ ದಿನವೂ ಭಾರತದ ಬ್ಯಾಟ್ಸ್‌ಮನ್‌ಗಳು ನೆಟ್ಸ್‌ನಲ್ಲಿ ಬೆವರು ಸುರಿಸಲಿದ್ದಾರೆ. ಈ ನಡುವೆ ಆಟಗಾರರ ಸ್ಪಿನ್ ದೌರ್ಬಲ್ಯವನ್ನು ಕಡಿಮೆ ಮಾಡಲು ಟೀಂ ಮ್ಯಾನೇಜ್‌ಮೆಂಟ್ 35 ಬೌಲರ್‌ಗಳನ್ನು ಅಭ್ಯಾಸಕ್ಕೆ ಕರೆಸಲು ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯಿಂದ ಅನುಮತಿ ಕೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವರದಿ ಪ್ರಕಾರ, ಈ 35 ಬೌಲರ್​ಗಳಲ್ಲಿ ಸ್ಪಿನ್ನರ್​ಗಳೇ ಅಧಿಕವಾಗಿದ್ದಾರೆ. ಈ ಮೂಲಕ ಸ್ಪಿನ್ನರ್‌ಗಳನ್ನು ಎದುರಿಸುವುದರೊಂದಿಗೆ ಟೀಂ ಇಂಡಿಯಾ ಆಟಗಾರರು ಕಿವೀಸ್ ಸ್ಪಿನ್ನರ್‌ಗಳ ಮುಂದೆ ಮುಕ್ತವಾಗಿ ಆಡುವಂತೆ ಮಾಡುವುದು ರೋಹಿತ್ ಮತ್ತು ಗಂಭೀರ್ ಅವರ ಯೋಜನೆಯಾಗಿದೆ. ಆದರೆ ಇನ್ನೆರಡು ದಿನಗಳಲ್ಲಿ ಈ ದೌರ್ಬಲ್ಯ ಎಷ್ಟರ ಮಟ್ಟಿಗೆ ನಿವಾರಣೆಯಾಗಲಿದೆ ಎಂಬುದು ಟೆಸ್ಟ್ ಪಂದ್ಯ ಆರಂಭವಾದ ಬಳಿಕವೇ ತಿಳಿಯಲಿದೆ.

ಮತ್ತೆ ಸ್ಪಿನ್ ಸ್ನೇಹಿ ಪಿಚ್​ಗೆ ಮನವಿ

ಉಭಯ ತಂಡಗಳ ನಡುವೆ ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್‌ನ ವೇಗದ ಬೌಲರ್‌ಗಳು ಟೀಂ ಇಂಡಿಯಾವನ್ನು ಕಾಡಿ ಕೇವಲ 46 ರನ್‌ಗಳಿಗೆ ಆಲೌಟ್ ಮಾಡಿದ್ದರು. ಇದರ ನಂತರ, ರೋಹಿತ್ ಮತ್ತು ಗಂಭೀರ್ ಅವರು ‘ರ್ಯಾಂಕ್ ಟರ್ನರ್’ ಅಂದರೆ ಮೊದಲ ಗಂಟೆಯಿಂದಲೇ ಸ್ಪಿನ್‌ಗೆ ಸಹಾಯ ಮಾಡುವ ಪಿಚ್‌ನ ಸವಾಲನ್ನು ಮುಂದಿಟ್ಟರು. ಇದರಲ್ಲಿ ಭಾರತ ತಂಡವೇ ತನ್ನದೇ ಬಲೆಯಲ್ಲಿ ಸಿಲುಕಿ ಪಂದ್ಯ ಸೋಲಬೇಕಾಯಿತು. ವರದಿಯ ಪ್ರಕಾರ, ಪಂದ್ಯದಲ್ಲಿ ಸೋತರೂ, ಭಾರತ ತಂಡ ಮತ್ತೊಮ್ಮೆ ಅಂತಹುದೇ ವಿಕೆಟ್‌ಗೆ ಬೇಡಿಕೆ ಇಟ್ಟಿದೆ. ಬಹುಶಃ ಈ ಕಾರಣಕ್ಕಾಗಿಯೇ ಕೋಚ್ ಗಂಭೀರ್ ಈ ಬಾರಿ ಸ್ಪಿನ್ ಆಡಲು ಬ್ಯಾಟ್ಸ್‌ಮನ್‌ಗಳನ್ನು ಈಗಾಗಲೇ ಸಿದ್ಧಪಡಿಸಿದ್ದಾರೆ.

ವಾಂಖೆಡೆ ಪಿಚ್​ನಲ್ಲಿ ಸ್ಪಿನ್ನರ್​ಗಳದ್ದೇ ಆರ್ಭಟ

ಮುಂಬೈನ ವಾಂಖೆಡೆ ಪಿಚ್ ಸ್ಪಿನ್ನರ್​ಗಳಿಗೆ ಹೆಚ್ಚು ನೆರವು ನೀಡುತ್ತದೆ. ಇದಕ್ಕೆ ಪೂರಕವಾಗಿ ಭಾರತದ ಪರ ರವಿಚಂದ್ರನ್ ಅಶ್ವಿನ್ ಈ ಮೈದಾನದಲ್ಲಿ ಆಡಿರುವ 5 ಪಂದ್ಯಗಳಲ್ಲಿ 38 ವಿಕೆಟ್ ಪಡೆದಿದ್ದಾರೆ. ಆದರೆ ಜಡೇಜಾ ಇಲ್ಲಿ ಕೇವಲ ಒಂದು ಪಂದ್ಯವನ್ನು ಆಡಿದ್ದು ಅವರೂ ಕೂಡ 6 ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಟೀಂ ಇಂಡಿಯಾಗೆ ಎಚ್ಚರಿಕೆಯ ಅಂಶವೆಂದರೆ ಇಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಕೊನೆಯ ಬಾರಿ ಮುಖಾಮುಖಿಯಾದಾಗ, ಅಜಾಜ್ ಪಟೇಲ್ ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್‌ಗಳನ್ನು ಪಡೆದಿದ್ದರು. ಅವರು ಪ್ರಸ್ತುತ ತಂಡದ ಭಾಗವಾಗಿರುವುದು ರೋಹಿತ್ ಪಡೆಯ ಟೆನ್ಷನ್ ಹೆಚ್ಚಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ