IND vs NZ: ಟೆಸ್ಟ್ ಸರಣಿ ಸೋಲಿಗೆ ಯಾರು ಕಾರಣ? ಎಳೆಎಳೆಯಾಗಿ ಬಿಚ್ಚಿಟ್ಟ ರೋಹಿತ್ ಶರ್ಮಾ

Rohit Sharma: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ತಂಡ 113 ರನ್‌ಗಳಿಂದ ಸೋಲುಂಡಿದ್ದು, 12 ವರ್ಷಗಳ ಬಳಿಕ ತವರಿನಲ್ಲಿ ಸರಣಿ ಸೋಲನ್ನು ಅನುಭವಿಸಿದೆ. ರೋಹಿತ್ ಶರ್ಮಾ ತಂಡದ ಸೋಲಿಗೆ ಯಾವುದೇ ಒಬ್ಬ ಆಟಗಾರನನ್ನು ದೂಷಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಬದಲಿಗೆ, ತಂಡದ ಸಾಮೂಹಿಕ ವೈಫಲ್ಯವೇ ಸೋಲಿಗೆ ಕಾರಣ ಎಂದು ಅವರು ಒಪ್ಪಿಕೊಂಡಿದ್ದಾರೆ. ಜೊತೆಗೆ ನ್ಯೂಜಿಲೆಂಡ್ ತಂಡವು ಉತ್ತಮವಾಗಿ ಆಡಿದೆ ಎಂದು ಅವರು ಶ್ಲಾಘಿಸಿದ್ದಾರೆ.

IND vs NZ: ಟೆಸ್ಟ್ ಸರಣಿ ಸೋಲಿಗೆ ಯಾರು ಕಾರಣ? ಎಳೆಎಳೆಯಾಗಿ ಬಿಚ್ಚಿಟ್ಟ ರೋಹಿತ್ ಶರ್ಮಾ
ರೋಹಿತ್ ಶರ್ಮಾ
Follow us
|

Updated on:Oct 26, 2024 | 6:18 PM

ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 113 ರನ್‌ಗಳ ಸೋಲನ್ನು ಎದುರಿಸಬೇಕಾಯಿತು. ಇದರೊಂದಿಗೆ ಭಾರತ ತಂಡ 12 ವರ್ಷಗಳ ನಂತರ ತವರಿನಲ್ಲಿ ಟೆಸ್ಟ್ ಸರಣಿಯನ್ನು ಕಳೆದುಕೊಂಡಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾದ ಪ್ರದರ್ಶನ ತೀರ ಕಳಪೆಯಾಗಿತ್ತು. ಒಂದೆಡೆ ಬ್ಯಾಟ್ಸ್‌ಮನ್‌ಗಳು ರನ್ ಕಲೆಹಾಕುವಲ್ಲಿ ಎಡವಿದರೆ, ಇನ್ನೊಂದೆಡೆ ಬೌಲರ್‌ಗಳು ಅಗತ್ಯವಿದ್ದ ಸಮಯದಲ್ಲಿ ವಿಕೆಟ್ ಪಡೆಯುವಲ್ಲಿ ವಿಫಲರಾದರು. ಇದರೊಂದಿಗೆ ತವರಿನಲ್ಲಿ ಟೀಂ ಇಂಡಿಯಾದ ಸತತ ಟೆಸ್ಟ್ ಸರಣಿ ಗೆಲ್ಲುವಿನ ಓಟಕ್ಕೂ ಬ್ರೇಕ್ ಬಿದ್ದಿದ್ದು, 18 ಟೆಸ್ಟ್ ಸರಣಿಗಳ ಬಳಿಕ ಭಾರತ ತವರಿನಲ್ಲಿ ಟೆಸ್ಟ್ ಸರಣಿ ಸೋತಿದೆ. ಈ ಐತಿಹಾಸಿಕ ಸೋಲಿನ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ತಂಡ ಎಲ್ಲೆಲ್ಲಿ ಎಡವಿತು ಎಂಬುದನ್ನು ವಿವರಿಸಿದ್ದಾರೆ.

ಸರಣಿ ಸೋಲಿಗೆ ರೋಹಿತ್ ಹೇಳಿದ್ದೇನು?

ಪಂದ್ಯ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ, ‘ಈ ಸರಣಿ ಸೋಲು ನನಗೆ ತುಂಬಾ ನೋವುಂಟು ಮಾಡಿದೆ. ಏಕೆಂದರೆ ಟೆಸ್ಟ್ ಪಂದ್ಯದ ಸೋಲಿನ ಜೊತೆಗೆ ನಾವು ಸರಣಿಯನ್ನೂ ಕಳೆದುಕೊಂಡಿದ್ದೇವೆ. ಇದು ಇಡೀ ತಂಡದ ವೈಫಲ್ಯ. ಎರಡನೇ ಟೆಸ್ಟ್‌ ಸೋಲಿಗೆ ನಾನು ಯಾವುದೇ ಒಬ್ಬ ಆಟಗಾರನನ್ನು ದೂಷಿಸುವುದಿಲ್ಲ. ಬದಲಿಗೆ ನಾವು ತಂಡವಾಗಿ ವಿಫಲರಾಗಿದ್ದೇವೆ. ಯಾವುದೇ ಒಬ್ಬ ಬ್ಯಾಟ್ಸ್‌ಮನ್ ಅಥವಾ ಬೌಲರ್ ಅನ್ನು ದೂಷಿಸುವುದು ತಪ್ಪು. ಆದರೆ, ಮೊದಲ ಇನಿಂಗ್ಸ್‌ನಲ್ಲಿ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನವೇ ತಂಡದ ಸೋಲಿಗೆ ಬಹುದೊಡ್ಡ ಕಾರಣ ಎಂದು ರೋಹಿತ್ ಒಪ್ಪಿಕೊಂಡಿದ್ದಾರೆ.

ಒತ್ತಡವನ್ನು ಎದುರಿಸುವಲ್ಲಿ ಎಡವಿದೆವು

ಮುಂದುವರೆದು ಮಾತನಾಡಿದ ರೋಹಿತ್ ಶರ್ಮಾ, ‘ಈ ಪಂದ್ಯದಲ್ಲಿ ಪಿಚ್ ಅಷ್ಟು ಕೆಟ್ಟದಾಗಿರಲಿಲ್ಲ, ಬದಲಿಗೆ ನಾವು ಕಳಪೆ ಬ್ಯಾಟಿಂಗ್ ಮಾಡಿದ್ದೇವೆ. ಏಕೆಂದರೆ ನಾವು ಮೊದಲ ಇನ್ನಿಂಗ್ಸ್‌ನಲ್ಲಿ ಎದುರಾಳಿ ತಂಡ ಕಲೆಹಾಕಿದ್ದ ಸ್ಕೋರ್​ನ ಸಮೀಪಕ್ಕೂ ಹೋಗಲಿಲ್ಲ. ಸತತವಾಗಿ ವಿಕೆಟ್‌ಗಳು ಪತನವಾಗಿದ್ದು, ಪಂದ್ಯ ಕೈ ತಪ್ಪುತ್ತಿರುವುದು ಸ್ಪಷ್ಟವಾಯಿತು. ಒತ್ತಡವನ್ನು ಎದುರಿಸುವಲ್ಲಿ ನಾವು ವಿಫಲರಾಗಿದ್ದೇವೆ. ಪಿಚ್ ಬದಲಾಗಲು ಪ್ರಾರಂಭಿಸಿದ ಕಾರಣ ಗುರಿ ಏನೇ ಇರಲಿ, ಅದು ಸವಾಲಿನದು ಎಂದು ನಮಗೆ ಯಾವಾಗಲೋ ತಿಳಿದಿತ್ತು.

ಈ ರೀತಿ ಕುಸಿದಿರುವುದು ಇದೇ ಮೊದಲು

ಇದು ಇಡೀ ತಂಡವಾಗಿ ನಮ್ಮ ವೈಫಲ್ಯವಾಗಿದೆ. ನಾವು ಗೆದ್ದಾಗ ಹೇಗೆ ಎಲ್ಲರೂ ಗೆಲುವಿನ ಕ್ರೆಡಿಟ್ ತೆಗೆದುಕೊಳ್ಳುತ್ತೇವೋ, ಹಾಗೆಯೇ ಸೋತಾಗಲೂ ಎಲ್ಲರೂ ಸೋಲಿನ ಕ್ರೆಡಿಟ್ ತೆಗೆದುಕೊಳ್ಳಬೇಕು. ನಮ್ಮ ಬ್ಯಾಟಿಂಗ್ ಈ ರೀತಿ ಕುಸಿದಿರುವುದು ಇದೇ ಮೊದಲು. 12 ವರ್ಷಗಳ ನಂತರ ನಮ್ಮ ಬ್ಯಾಟಿಂಗ್ ವಿಭಾಗ ಈ ರೀತಿಯ ಪ್ರದರ್ಶನ ನೀಡಿದೆ. ಒಂದು ವೇಳೆ ನಮ್ಮ ಬ್ಯಾಟಿಂಗ್ ವಿಭಾಗ ನಿರಂತರವಾಗಿ ಈ ರೀತಿಯ ಪ್ರದರ್ಶನ ನೀಡಿದ್ದರೆ, ನಮಗೆ ಈ ಸತತ ಗೆಲುವಿನ ಸರಮಾಲೆ ಸಿಗುತ್ತಿರಲಿಲ್ಲ ಎಂದರು.

ಕಿವೀಸ್ ನಮಗಿಂತ ಬೆಸ್ಟ್

ಇನ್ನು ಎದುರಾಳಿ ತಂಡವನ್ನು ಶ್ಲಾಘಿಸಿದ ರೋಹಿತ್ ಶರ್ಮಾ, ನ್ಯೂಜಿಲೆಂಡ್ ತಂಡ ನಮಗಿಂತ ಉತ್ತಮವಾಗಿ ಕ್ರಿಕೆಟ್ ಆಡಿದೆ. ಕೆಲವು ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ನಾವು ವಿಫಲರಾಗಿದ್ದೇವೆ. ಹೀಗಾಗಿ ನಾವು ಟೆಸ್ಟ್ ಸರಣಿ ಸೋತಿದ್ದೇವೆ. ನಾವು ವಾಂಖೆಡೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಆ ಟೆಸ್ಟ್ ಗೆಲ್ಲಲು ಪ್ರಯತ್ನಿಸುತ್ತೇವೆ. ಇದೊಂದು ಸಾಮೂಹಿಕ ವೈಫಲ್ಯ. ನಾನು ಬ್ಯಾಟ್ಸ್‌ಮನ್ ಅಥವಾ ಬೌಲರ್‌ಗಳನ್ನು ಮಾತ್ರ ದೂಷಿಸುವವನಲ್ಲ ಎಂದಿರುವ ರೋಹಿತ್, ಉತ್ತಮ ಉದ್ದೇಶ, ಆಲೋಚನೆ ಮತ್ತು ವಿಧಾನಗಳೊಂದಿಗೆ ವಾಂಖೆಡೆ ಟೆಸ್ಟ್ ಆಡುತ್ತೇವೆ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:15 pm, Sat, 26 October 24

ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ
ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ಸೋಮಶೇಖರ್​ರನ್ನೇ ಕೇಳಬೇಕು: ಸಚಿವ
ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ಸೋಮಶೇಖರ್​ರನ್ನೇ ಕೇಳಬೇಕು: ಸಚಿವ
ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಖಾದ್ರಿಗೆ ಸಿಎಂ ತಾಕೀತು
ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಖಾದ್ರಿಗೆ ಸಿಎಂ ತಾಕೀತು
ಪಹಣಿಯಲ್ಲಿ ವಕ್ಫ್​​ ಹೆಸರು: ವಿಜಯಪುರ ರೈತರ ಪ್ರತಿಭಟನೆ
ಪಹಣಿಯಲ್ಲಿ ವಕ್ಫ್​​ ಹೆಸರು: ವಿಜಯಪುರ ರೈತರ ಪ್ರತಿಭಟನೆ
ಮುಚ್ಚಿದ ಹೋಟೆಲ್​​ಗೆ ರಾತ್ರಿ ನುಗ್ಗಿದ ಹೆಲ್ಮೆಟ್​ಧಾರಿ ಕಳ್ಳ ಚಿಲ್ರೆ ಕದ್ದ
ಮುಚ್ಚಿದ ಹೋಟೆಲ್​​ಗೆ ರಾತ್ರಿ ನುಗ್ಗಿದ ಹೆಲ್ಮೆಟ್​ಧಾರಿ ಕಳ್ಳ ಚಿಲ್ರೆ ಕದ್ದ
ನಸುಕಿನ ಜಾವ 4ಗಂಟೆಯಿಂದ ರಾತ್ರಿ 11 ಗಂಟೆಯರೆಗೆ ಭಕ್ತರ ದರ್ಶನಕ್ಕೆ ಅವಕಾಶ
ನಸುಕಿನ ಜಾವ 4ಗಂಟೆಯಿಂದ ರಾತ್ರಿ 11 ಗಂಟೆಯರೆಗೆ ಭಕ್ತರ ದರ್ಶನಕ್ಕೆ ಅವಕಾಶ
ಹೆಚ್​ಡಿ ದೇವೇಗೌಡ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
ಹೆಚ್​ಡಿ ದೇವೇಗೌಡ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ