AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಪಂದ್ಯಗಳು ಎಕ್ಸ್​ಟ್ರಾ… ನ್ಯೂಝಿಲೆಂಡ್ vs ಭಾರತ ವೇಳಾಪಟ್ಟಿ ಪ್ರಕಟ

India vs New Zealand: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯು ಅಕ್ಟೋಬರ್ 22 ರಿಂದ ಶುರುವಾಗಲಿದೆ. ಈ ಸಿರೀಸ್​ನಲ್ಲಿ ಮೊದಲಿಗೆ ಐದು ಪಂದ್ಯಗಳ ಟಿ20 ಸರಣಿ ಆಡಲಿದ್ದಾರೆ. ಇದಾದ ಬಳಿಕ ಐದು ಮ್ಯಾಚ್​ಗಳ ಏಕದಿನ ಸರಣಿ ನಡೆಯಲಿದೆ. ಇನ್ನು ಎರಡು ಸರಣಿಗಳ ಬಳಿಕ ಭಾರತ ಮತ್ತು ನ್ಯೂಝಿಲೆಂಡ್ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.

2 ಪಂದ್ಯಗಳು ಎಕ್ಸ್​ಟ್ರಾ... ನ್ಯೂಝಿಲೆಂಡ್ vs ಭಾರತ ವೇಳಾಪಟ್ಟಿ ಪ್ರಕಟ
Team India Image Credit source: BCCI
ಝಾಹಿರ್ ಯೂಸುಫ್
|

Updated on:Jun 03, 2026 | 9:36 AM

Share

ನ್ಯೂಝಿಲೆಂಡ್ vs ಭಾರತ ಸರಣಿಯ ವೇಳಾಪಟ್ಟಿ ಪ್ರಕಟವಾಗಿದೆ. ಈ ವೇಳಾಪಟ್ಟಿಯಂತೆ ಟೀಮ್ ಇಂಡಿಯಾ ಅಕ್ಟೋಬರ್​ನಲ್ಲಿ ನ್ಯೂಝಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಅಲ್ಲದೆ ಅಲ್ಲಿ ಒಟ್ಟು 12 ಪಂದ್ಯಗಳನ್ನಾಡಲಿದೆ. ಇದಕ್ಕೂ ಮುನ್ನ ಈ ಸರಣಿಯಲ್ಲಿ 10 ಪಂದ್ಯಗಳನ್ನು ನಿಗದಿ ಮಾಡಲಾಗಿತ್ತು. ಇದೀಗ ಹೆಚ್ಚುವರಿ 2 ಏಕದಿನ ಪಂದ್ಯಗಳನ್ನು ಸೇರಿಸಲಾಗಿದೆ. ಅದರಂತೆ 5 ಏಕದಿನ ಮತ್ತು 5 ಟಿ20 ಪಂದ್ಯಗಳು ನಡೆಯಲಿದೆ. ಇದಾದ ಬಳಿಕ 2 ಮ್ಯಾಚ್​ಗಳ ಟೆಸ್ಟ್ ಸರಣಿಯನ್ನು ಆಡಲಾಗುತ್ತದೆ.

ಸಾಮಾನ್ಯವಾಗಿ ದ್ವಿಪಕ್ಷೀಯ ಸರಣಿಗಳಲ್ಲಿ 3 ಏಕದಿನ ಪಂದ್ಯಗಳನ್ನು ಆಡಲಾಗುತ್ತದೆ. ಆದರೆ, ಈ ಬಾರಿ ಕ್ರಿಕೆಟ್ ಅಭಿಮಾನಿಗಳ ಜಾಗತಿಕ ಬೇಡಿಕೆಯನ್ನು ಪರಿಗಣಿಸಿ ಬಿಸಿಸಿಐ  ಮತ್ತು ನ್ಯೂಝಿಲೆಂಡ್ ಕ್ರಿಕೆಟ್ ಮಂಡಳಿಗಳು ಸರಣಿಯನ್ನು 5 ಪಂದ್ಯಗಳಿಗೆ ವಿಸ್ತರಿಸಿದ್ದಾರೆ.

ವಿಶೇಷ ಎಂದರೆ ಈ ದಶಕದಲ್ಲಿ ಟೀಮ್ ಇಂಡಿಯಾ 5 ಪಂದ್ಯಗಳ ದ್ವಿಪಕ್ಷೀಯ ಏಕದಿನ ಸರಣಿಯನ್ನು ಆಡುತ್ತಿರುವುದು ಇದೇ ಮೊದಲು. ಇದಕ್ಕೂ ಮುನ್ನ 5 ಪಂದ್ಯಗಳ ಏಕದಿನ ಸರಣಿ ಆಡಿದ್ದು 7 ವರ್ಷಗಳ ಹಿಂದೆ. ಅಂದರೆ ಮಾರ್ಚ್ 2019 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಏಕದಿನ ಸರಣಿ ಆಡಿತ್ತು.

ಇದಾದ ಬಳಿಕ 5 ಪಂದ್ಯಗಳ ದ್ವಿಪಕ್ಷೀಯ ಸರಣಿಯಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿದಿರಲಿಲ್ಲ. ಇದೀಗ ಜಾಗತಿಕ ಬೇಡಿಕೆಯನ್ನು ಪರಿಗಣಿಸಿ 2 ಪಂದ್ಯಗಳನ್ನು ಹೆಚ್ಚಿಸಿರುವುದಾಗಿ ಬಿಸಿಸಿಐ ಹೇಳಿಕೊಂಡಿದೆ.

ಪಂದ್ಯಗಳ ಹೆಚ್ಚಳಕ್ಕೆ ಅಸಲಿ ಕಾರಣವೇನು?

ಈ ಸರಣಿಯು ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಕೊನೆಯ ನ್ಯೂಝಿಲೆಂಡ್ ಪ್ರವಾಸವಾಗಿದೆ. ಹೀಗಾಗಿ ಅದರ ಸಂಪೂರ್ಣ ಲಾಭ ಪಡೆಯಲು ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಅಂದರೆ ಅಲ್ಲಿನ ಕ್ರಿಕೆಟ್ ಮಂಡಳಿ, ಪ್ರಾಯೋಜಕರು ಮತ್ತು ಪ್ರಸಾರಕರು  ಹೆಚ್ಚಿನ ಲಾಭ ಗಳಿಸಲು ಈ ಹೆಚ್ಚುವರಿ ಪಂದ್ಯಗಳನ್ನು ಕೇಳಿ ಪಡೆದಿದ್ದಾರೆ.

ಇದರಿಂದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನ್ಯೂಝಿಲೆಂಡ್​ನಲ್ಲಿ 5 ಏಕದಿನ ಪಂದ್ಯಗಳನ್ನಾಡಲಿದ್ದಾರೆ. ಈ ಇಬ್ಬರು ದಿಗ್ಗಜರು ಕಣಕ್ಕಿಳಿಯುತ್ತಿರುವುದರಿಂದ ಪ್ರಾಯೋಜಕತ್ವ ಮತ್ತು ಪ್ರೇಕ್ಷಕರಿಂದ ಉತ್ತಮ ಆದಾಯ ಗಳಿಸಬಹುದು. ಇದನ್ನೇ ಮನಗಂಡಿರುವ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್​ ಬಿಸಿಸಿಐ ಜೊತೆ ಮಾತುಕತೆ ನಡೆಸಿ ಪಂದ್ಯಗಳ ಸಂಖ್ಯೆಯನ್ನು ಹೆಚ್ಚಿಸಿದ್ದಾರೆ.

ನ್ಯೂಝಿಲೆಂಡ್ vs ಭಾರತ ವೇಳಾಪಟ್ಟಿ

  • ಟಿ20 ಸರಣಿ ವೇಳಾಪಟ್ಟಿ
  • ಮೊದಲ ಟಿ20 ಪಂದ್ಯ – ಅಕ್ಟೋಬರ್ 22, ಕ್ರೈಸ್ಟ್‌ಚರ್ಚ್
  • 2ನೇ ಟಿ20 ಪಂದ್ಯ – ಅಕ್ಟೋಬರ್ 24, ಕ್ರೈಸ್ಟ್‌ಚರ್ಚ್
  • 3ನೇ ಟಿ20 ಪಂದ್ಯ – 27 ಅಕ್ಟೋಬರ್, ವೆಲ್ಲಿಂಗ್ಟನ್
  • 4ನೇ ಟಿ20 ಪಂದ್ಯ – 30 ಅಕ್ಟೋಬರ್, ಆಕ್ಲೆಂಡ್
  • 5ನೇ ಟಿ20 ಪಂದ್ಯ – ನವೆಂಬರ್ 1, ಹ್ಯಾಮಿಲ್ಟನ್
  • ಏಕದಿನ ಸರಣಿ ವೇಳಾಪಟ್ಟಿ
  • ಮೊದಲ ಏಕದಿನ ಪಂದ್ಯ – 4 ನವೆಂಬರ್, ಆಕ್ಲೆಂಡ್
  • 2ನೇ ಏಕದಿನ ಪಂದ್ಯ – ನವೆಂಬರ್ 7, ವೆಲ್ಲಿಂಗ್ಟನ್
  • 3ನೇ ಏಕದಿನ ಪಂದ್ಯ – ನವೆಂಬರ್ 10, ಹ್ಯಾಮಿಲ್ಟನ್
  • 4ನೇ ಏಕದಿನ ಪಂದ್ಯ – 13 ನವೆಂಬರ್, ಮೌಂಟ್ ಮೌಂಗನುಯಿ
  • 5ನೇ ಏಕದಿನ ಪಂದ್ಯ – 15 ನವೆಂಬರ್, ಮೌಂಟ್ ಮೌಂಗನುಯಿ
  • ಟೆಸ್ಟ್ ಸರಣಿ ವೇಳಾಪಟ್ಟಿ
  • ಮೊದಲ ಟೆಸ್ಟ್ – ನವೆಂಬರ್ 19-23, ವೆಲ್ಲಿಂಗ್ಟನ್
  • ಎರಡನೇ ಟೆಸ್ಟ್ – 27 ನವೆಂಬರ್-1 ಡಿಸೆಂಬರ್ 2026, ಕ್ರೈಸ್ಟ್‌ಚರ್ಚ್

ಇದನ್ನೂ ಓದಿ: ವೈಭವ್ ಸೂರ್ಯವಂಶಿಯಿಂದ ರಾಜಸ್ಥಾನ್ ರಾಯಲ್ಸ್​ಗೆ 33.87 ಕೋಟಿ ರೂ. ಲಾಭ!

ನ್ಯೂಝಿಲೆಂಡ್ ವಿರುದ್ಧದ ಸರಣಿ ಡಿಸೆಂಬರ್ 1, 2026 ರಂದು ಮುಕ್ತಾಯಗೊಳ್ಳಲಿದ್ದು, ಇದರ ಬೆನ್ನಲ್ಲೇ ಭಾರತ ತಂಡವು ಸ್ವದೇಶಕ್ಕೆ ಮರಳಿ ಶ್ರೀಲಂಕಾ ವಿರುದ್ಧ ತವರಿನಲ್ಲಿ ಸರಣಿಯನ್ನು ಆಡಲಿದೆ.

Published On - 9:36 am, Wed, 3 June 26

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ