AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs New zealand: ರಾಹುಲ್ ದ್ರಾವಿಡ್-ರೋಹಿತ್ ಶರ್ಮಾ ಶುಭಾರಂಭ

ಟೀಮ್ ಇಂಡಿಯಾ ವಿರುದ್ದ ಟಿ20 ಕ್ರಿಕೆಟ್​ನಲ್ಲಿ ಪಾರುಪತ್ಯ ಮೆರೆಯುತ್ತಾ ಬಂದಿರುವ ನ್ಯೂಜಿಲೆಂಡ್ ತಂಡವನ್ನು ಈ ಬಾರಿ ಸೋಲಿಸಿ ಭಾರತ ಗೆಲುವಿನ ಸಂಖ್ಯೆಯನ್ನು 9ಕ್ಕೇರಿಸಿದೆ. ಉಭಯ ತಂಡಗಳು ಇದುವರೆಗೆ 18 ಬಾರಿ ಮುಖಾಮುಖಿಯಾಗಿದ್ದು, ಅದರಲ್ಲಿ ಉಭಯ ತಂಡಗಳು ಈಗ 9 ಗೆಲುವುಗಳನ್ನು ದಾಖಲಿಸಿ ಸಮಬಲ ಹೊಂದಿದೆ.

India vs New zealand: ರಾಹುಲ್ ದ್ರಾವಿಡ್-ರೋಹಿತ್ ಶರ್ಮಾ ಶುಭಾರಂಭ
India vs New zealand
TV9 Web
| Edited By: |

Updated on:Nov 17, 2021 | 10:45 PM

Share

ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ದ ಮೊದಲ ಟಿ20 ಪಂದ್ಯದಲ್ಲಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ನಾಯಕನಾಗಿ ರೋಹಿತ್ ಶರ್ಮಾ ಹಾಗೂ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರು ಶುಭಾರಂಭ ಮಾಡಿದ್ದಾರೆ. ಟಿ20 ವಿಶ್ವಕಪ್​ ಸೋಲಿನ ಬಳಿಕ ಆಡುತ್ತಿರುವ ಮೊದಲ ಪಂದ್ಯದಲ್ಲೇ ಯಾರು ಗೆಲ್ಲಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿತ್ತು. ಏಕೆಂದರೆ ಟೀಮ್ ಇಂಡಿಯಾ ಈ ಹಿಂದೆ ನ್ಯೂಜಿಲೆಂಡ್ ವಿರುದ್ದ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಸೋಲನುಭವಿಸಿತ್ತು. ಆ ಬಳಿಕ ಉಭಯ ತಂಡಗಳು ಟಿ20 ವಿಶ್ವಕಪ್​ನಲ್ಲಿ ಮುಖಾಮುಖಿಯಾಗಿತ್ತು. ಭಾರತದ ಪಾಲಿಗೆ ನಿರ್ಣಾಯಕವಾಗಿದ್ದ ಆ ಪಂದ್ಯದಲ್ಲೂ ನ್ಯೂಜಿಲೆಂಡ್ ಭಾರತ ತಂಡವನ್ನು ಹೀನಾಯವಾಗಿ ಸೋಲಿಸಿತ್ತು.

ಅಷ್ಟೇ ಅಲ್ಲದೆ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿ ರನ್ನರ್ ಅಪ್ ತಂಡವಾಗಿ ಹೊರಹೊಮ್ಮಿತು. ಈ ಎಲ್ಲಾ ಕಾರಣಗಳಿಂದಾಗಿ ಭಾರತ-ನ್ಯೂಜಿಲೆಂಡ್ ನಡುವಣ ಮೊದಲ ಮುಖಾಮುಖಿ ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಮೊದಲ ಪಂದ್ಯದಲ್ಲೇ ಸೋಲುಣಿಸುವ ಮೂಲಕ ರೋಹಿತ್ ಶರ್ಮಾ ಶುಭಾರಂಭ ಮಾಡಿದೆ.

ಇನ್ನು ಟೀಮ್ ಇಂಡಿಯಾ ವಿರುದ್ದ ಟಿ20 ಕ್ರಿಕೆಟ್​ನಲ್ಲಿ ಪಾರುಪತ್ಯ ಮೆರೆಯುತ್ತಾ ಬಂದಿರುವ ನ್ಯೂಜಿಲೆಂಡ್ ತಂಡವನ್ನು ಈ ಬಾರಿ ಸೋಲಿಸಿ ಭಾರತ ಗೆಲುವಿನ ಸಂಖ್ಯೆಯನ್ನು 9ಕ್ಕೇರಿಸಿದೆ. ಉಭಯ ತಂಡಗಳು ಇದುವರೆಗೆ 18 ಬಾರಿ ಮುಖಾಮುಖಿಯಾಗಿದ್ದು, ಅದರಲ್ಲಿ ಉಭಯ ತಂಡಗಳು ಈಗ 9 ಗೆಲುವುಗಳನ್ನು ದಾಖಲಿಸಿ ಸಮಬಲ ಹೊಂದಿದೆ. ಹೀಗಾಗಿ ಈ ಸರಣಿಯ ಮೂಲಕ ಯಾರು ಬಲಿಷ್ಠ ಎಂಬುದು ಕೂಡ ನಿರ್ಧಾರವಾಗಲಿದೆ. ಅಷ್ಟೇ ರಾಹುಲ್ ದ್ರಾವಿಡ್ ಕೂಡ ಟೀಮ್ ಇಂಡಿಯಾದ ಪೂರ್ಣ ಪ್ರಮಾಣದ ಕೋಚ್ ಆಗಿ ಮೊದಲ ಪಂದ್ಯದಲ್ಲೇ ಗೆಲುವು ನೋಡಿದ್ದಾರೆ. ಹೀಗಾಗಿ ರಾಹುಲ್ ದ್ರಾವಿಡ್- ರೋಹಿತ್ ಶರ್ಮಾ ಜೋಡಿ ಮುಂದಿನ ದಿನಗಳಲ್ಲೂ ಕಮಾಲ್ ಮಾಡುವ ನಿರೀಕ್ಷೆ ಹೆಚ್ಚಾಗಿದೆ.

ಏಕೆಂದರೆ ಮುಂದಿನ ವರ್ಷವೇ ಟಿ20 ವಿಶ್ವಕಪ್​ ನಡೆಯಲಿದ್ದು, ಇದಕ್ಕಾಗಿ ಈಗಲೇ ಬಲಿಷ್ಠ ಟೀಮ್ ಇಂಡಿಯಾವನ್ನು ಕಟ್ಟುವ ಜವಾಬ್ದಾರಿ ರಾಹುಲ್ ದ್ರಾವಿಡ್ ಹಾಗೂ ರೋಹಿತ್ ಶರ್ಮಾ ಮೇಲಿದೆ. ಹೀಗಾಗಿ ಮೊದಲ ಸರಣಿಯಲ್ಲೇ ಬಲಿಷ್ಠ ನ್ಯೂಜಿಲೆಂಡ್​ಗೆ ಸೋಲುಣಿಸಿ ಶುಭಾರಂಭ ಮಾಡುವ ಇರಾದೆಯಲ್ಲಿದ್ದಾರೆ ಕೋಚ್ ದ್ರಾವಿಡ್ ಹಾಗೂ ನಾಯಕ ರೋಹಿತ್ ಶರ್ಮಾ.

ಇದನ್ನೂ ಓದಿ: Mahindra Roxor: ಮಹೀಂದ್ರಾ ರೋಕ್ಸರ್: ಜಬರ್ದಸ್ತ್ ಎಸ್​ಯುವಿ ಬಿಡುಗಡೆ

ಇದನ್ನೂ ಓದಿ: 18 GB RAM, 1000 GB ಸ್ಟೋರೇಜ್‌: ದಾಖಲೆ ನಿರ್ಮಿಸಲಿದೆ ಹೊಸ ಸ್ಮಾರ್ಟ್​ಫೋನ್

ಇದನ್ನೂ ಓದಿ: IPL 2022: ರಾಜಸ್ಥಾನ್ ರಾಯಲ್ಸ್​ ತಂಡದಿಂದ ಪ್ರಮುಖ ಆಟಗಾರ ಔಟ್: ಬೇರೆ ತಂಡಕ್ಕೆ ನಾಯಕ?

Published On - 10:44 pm, Wed, 17 November 21

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ