AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: 5+1+1=7 ವಿಕೆಟ್; ವಾರೆ ವ್ಹಾ ವಾಷಿಂಗ್ಟನ್ ಸುಂದರ್

Washington Sundar: ಪುಣೆಯಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್ ಅವರ ಅದ್ಭುತ ಬೌಲಿಂಗ್ ಪ್ರದರ್ಶನ ಎಲ್ಲರ ಗಮನ ಸೆಳೆದಿದೆ. ಮೂರು ವರ್ಷಗಳ ನಂತರ ಟೆಸ್ಟ್ ಕ್ರಿಕೆಟ್‌ಗೆ ಮರಳಿದ ಸುಂದರ್ 7 ವಿಕೆಟ್‌ಗಳನ್ನು ಪಡೆದು ನ್ಯೂಜಿಲೆಂಡ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿದರು. ಇದು ಒಂದು ಇನ್ನಿಂಗ್ಸ್‌ನಲ್ಲಿ ಅವರ ಅತ್ಯುತ್ತಮ ಪ್ರದರ್ಶನವಾಗಿದೆ.

IND vs NZ: 5+1+1=7 ವಿಕೆಟ್; ವಾರೆ ವ್ಹಾ ವಾಷಿಂಗ್ಟನ್ ಸುಂದರ್
ವಾಷಿಂಗ್ಟನ್ ಸುಂದರ್
ಪೃಥ್ವಿಶಂಕರ
|

Updated on:Oct 24, 2024 | 4:46 PM

Share

ಪುಣೆಯಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ತಮ್ಮ ಸ್ಪಿನ್‌ ಮ್ಯಾಜಿಕ್ ಮೂಲಕ ಕಿವೀಸ್ ತಂಡವನ್ನು ಬೃಹತ್ ಮೊತ್ತ ಕಲೆಹಾಕದಂತೆ ತಡೆದಿದ್ದಾರೆ. ಬರೋಬ್ಬರಿ 3 ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್​ಗೆ ಪುನರಾಗಮನ ಮಾಡಿದ ಸುಂದರ್ ಕಿವೀಸ್ ತಂಡದ ಏಳು ಬ್ಯಾಟ್ಸ್‌ಮನ್‌ಗಳಿಗೆ ಪೆವಿಲಿಯನ್ ಹಾದಿ ತೋರಿಸಿದರು. ಇದರಲ್ಲಿ ಸುಂದರ್, ಐವರು ನ್ಯೂಜಿಲೆಂಡ್ ಬ್ಯಾಟ್ಸ್‌ಮನ್‌ಗಳನ್ನು ಕ್ಲೀನ್ ಬೌಲ್ಡ್ ಮಾಡಿದರೆ, ಒಂದು ಎಲ್ಬಿಡಬ್ಲ್ಯೂ ಮತ್ತು ಒಂದು ಕ್ಯಾಚ್ ಔಟ್ ಮಾಡಿದರು. ಮೊದಲ ಇನ್ನಿಂಗ್ಸ್​ನಲ್ಲಿ 23.1 ಓವರ್‌ ಬೌಲ್ ಮಾಡಿದ ಸುಂದರ್ 59 ರನ್ ನೀಡಿ 7 ವಿಕೆಟ್ ಪಡೆದರು. ಈ ಮೂಲಕ ಸುಂದರ್ ಟೆಸ್ಟ್ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅತ್ಯುತ್ತಮ ಸ್ಪೆಲ್ ಮಾಡಿದ ಭಾರತದ ಜಂಟಿ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

7 ವಿಕೆಟ್ ಉರುಳಿಸಿದ ಸುಂದರ್

ಈ ಪಂದ್ಯದಲ್ಲಿ ರಚಿನ್ ರವೀಂದ್ರ ರೂಪದಲ್ಲಿ ಮೊದಲ ವಿಕೆಟ್ ಪಡೆಯುವ ಮೂಲಕ ವಿಕೆಟ್​ಗಳ ಭೇಟೆ ಆರಂಭಿಸಿದ ಸುಂದರ್, ಇದರ ನಂತರ ಟಾಮ್ ಬ್ಲಂಡೆಲ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಟಿಮ್ ಸೌಥಿ, ಅಜಾಜ್ ಪಟೇಲ್ ಮತ್ತು ಮಿಚೆಲ್ ಸ್ಯಾಂಟ್ನರ್ ಅವರನ್ನು ಪೆವಿಲಿಯನ್​ಗಟ್ಟುವಲ್ಲಿ ಯಶಸ್ವಿಯಾದರು. ವಾಷಿಂಗ್ಟನ್ ಸುಂದರ್ ಟೆಸ್ಟ್ ಪಂದ್ಯವೊಂದರ ಇನ್ನಿಂಗ್ಸ್‌ನಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದಿರುವುದು ಇದೇ ಮೊದಲು. ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಪರ 4 ಪಂದ್ಯಗಳಲ್ಲಿ 6 ವಿಕೆಟ್ ಪಡೆದಿದ್ದ ವಾಷಿಂಗ್ಟನ್ ಸುಂದರ್ ಈ ಬಾರಿ ಒಂದೇ ಇನ್ನಿಂಗ್ಸ್​ನಲ್ಲಿ 7 ವಿಕೆಟ್ ಪಡೆದಿದ್ದಾರೆ.

ಟೀಕಾಕಾರರ ಬಾಯಿಗೆ ಭೀಗ

ನಾಯಕ ರೋಹಿತ್ ಶರ್ಮಾ ಎರಡನೇ ಟೆಸ್ಟ್ ಪಂದ್ಯಕ್ಕೆ ಪ್ಲೇಯಿಂಗ್ 11 ಘೋಷಿಸಿದಾಗ, ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಕಾರಣ ತಂಡದಲ್ಲಿ ಕುಲ್ದೀಪ್ ಯಾದವ್ ಬದಲಿಗೆ ವಾಷಿಂಗ್ಟನ್ ಸುಂದರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಹೀಗಿರುವಾಗ ಸುನಿಲ್ ಗವಾಸ್ಕರ್ ಕೂಡ ಈ ನಿರ್ಧಾರವನ್ನು ತಪ್ಪು ಎಂದಿದ್ದರು. ಈ ಪಂದ್ಯದಲ್ಲಿ ಕುಲ್ದೀಪ್‌ಗೆ ಅವಕಾಶ ಸಿಗಬೇಕಿತ್ತು ಎಂದು ಗವಾಸ್ಕರ್ ವೀಕ್ಷಕ ವಿವರಣೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು. ಆದರೆ ವಾಷಿಂಗ್ಟನ್ ಸುಂದರ್ ತಮ್ಮ ಪ್ರದರ್ಶನದ ಮೂಲಕ ಟೀಕಾಕಾರರ ಬಾಯಿ ಮುಚಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:45 pm, Thu, 24 October 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು