AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಬರ್​ಗೆ ಭುವಿಯ ಬೌನ್ಸರ್ ಭಯ: ವಿಡಿಯೋ ವೈರಲ್..!

Asia Cup 2022: ಸೂಪರ್-4 ಹಂತದಲ್ಲಿ ಭಾರತ-ಪಾಕಿಸ್ತಾನ್ ಮತ್ತೆ ಮುಖಾಮುಖಿಯಾಗುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ಭುವನೇಶ್ವರ್ ಕುಮಾರ್ ಅವರ ಶಾರ್ಟ್ ಬಾಲ್ ಬೌನ್ಸರ್​ ಎಸೆತಗಳಿಗೆ ಹೇಗೆ ಉತ್ತರ ನೀಡಬೇಕೆಂದು ಬಾಬರ್ ಆಜಂ ಅಭ್ಯಾಸ ನಡೆಸುತ್ತಿದ್ದಾರೆ.

Viral Video: ಬಾಬರ್​ಗೆ ಭುವಿಯ ಬೌನ್ಸರ್ ಭಯ: ವಿಡಿಯೋ ವೈರಲ್..!
babar azam, Bhuvneshvar Kumar
TV9 Web
| Edited By: |

Updated on:Aug 31, 2022 | 2:12 PM

Share

ಏಷ್ಯಾಕಪ್‌ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ದ ಪಾಕಿಸ್ತಾನ ಹೀನಾಯ ಸೋಲನುಭವಿಸಿತು. ಪಾಕ್ ತಂಡದ ಈ ಸೋಲಿಗೆ ಪ್ರಮುಖ ಕಾರಣವೆಂದರೆ ಬ್ಯಾಟಿಂಗ್ ವೈಫಲ್ಯ. ಅದರಲ್ಲೂ ಆರಂಭಿಕ ಆಟಗಾರ ಬಾಬರ್ ಆಜಂ ಬೇಗನೆ ಔಟಾಗಿದ್ದು ತಂಡಕ್ಕೆ ದುಬಾರಿಯಾಯಿತು. ಉತ್ತಮ ಆರಂಭದ ನಿರೀಕ್ಷೆಯಲ್ಲಿದ್ದ ಬಾಬರ್ ಆಜಂರನ್ನು ಭುವನೇಶ್ವರ್ ಕುಮಾರ್ ಬೌನ್ಸರ್ ಬಲೆಗೆ ಬೀಳಿಸಿದ್ದರು.

ಭುವಿ ಎಸೆದ ಶಾರ್ಟ್​ ಬಾಲ್ ಬೌನ್ಸರ್​ಗೆ ಭರ್ಜರಿ ಉತ್ತರ ನೀಡಲು ಹೋದ ಬಾಬರ್ 30 ಯಾರ್ಡ್ ಸರ್ಕಲ್​ನಲ್ಲೇ ಕ್ಯಾಚ್ ನೀಡಿದ್ದರು. ಹೀಗೆ ಶಾರ್ಟ್ ಬಾಲ್​ಗೆ ಔಟಾಗಿದ್ದ ಬಾಬರ್ ಇದೀಗ ಬೌನ್ಸರ್​ ಎಸೆತಕ್ಕೆ ಬ್ಯಾಟಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಭಾರತ ವಿರುದ್ಧದ ಆ ಸೋಲು ಪಾಕ್ ನಾಯಕನ ಮನದಲ್ಲಿ ನೆಲೆಯೂರಿದ್ದು, ಈಗ ಅದನ್ನು ಮೆಟ್ಟಿ ನಿಲ್ಲಲು ವಿಶೇಷ ತಯಾರಿಯನ್ನು ಆರಂಭಿಸಿದ್ದಾರೆ.

ಏಕೆಂದರೆ ಸೂಪರ್-4 ಹಂತದಲ್ಲಿ ಭಾರತ-ಪಾಕಿಸ್ತಾನ್ ಮತ್ತೆ ಮುಖಾಮುಖಿಯಾಗುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ಭುವನೇಶ್ವರ್ ಕುಮಾರ್ ಅವರ ಶಾರ್ಟ್ ಬಾಲ್ ಬೌನ್ಸರ್​ ಎಸೆತಗಳಿಗೆ ಹೇಗೆ ಉತ್ತರ ನೀಡಬೇಕೆಂದು ಬಾಬರ್ ಆಜಂ ಅಭ್ಯಾಸ ನಡೆಸುತ್ತಿದ್ದಾರೆ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಹಾಂಗ್ ಕಾಂಗ್ ವಿರುದ್ದದ ಪಂದ್ಯಕ್ಕಾಗಿ ಬಾಬರ್ ಆಜಂ ಅಭ್ಯಾಸ ಶುರು ಮಾಡಿದ್ದಾರೆ. ಈ ವೇಳೆ ಹೆಚ್ಚಾಗಿ ಶಾರ್ಟ್ ಬಾಲ್ ಎಸೆತಗಳಲ್ಲಿ ಅಭ್ಯಾಸ ಮಾಡುತ್ತಿರುವುದು ಕಂಡು ಬಂದಿದೆ. ಅಂದರೆ ಭುವನೇಶ್ವರ್ ಕುಮಾರ್ ಶಾರ್ಟ್ ಬಾಲ್ ಎಸೆತಕ್ಕೆ ಔಟಾಗಿದ್ದ ಬಾಬರ್ ಇದೀಗ ಅದೇ ತಪ್ಪನ್ನು ಸರಿಪಡಿಸಿಕೊಳ್ಳಲು ಮುಂದಾಗಿದ್ದಾರೆ.

ಒಟ್ಟಿನಲ್ಲಿ ಸೂಪರ್-4 ಹಂತಕ್ಕೇರುವ ಮುನ್ನವೇ ಬಾಬರ್ ಆಜಂ ಭುವನೇಶ್ವರ್ ಕುಮಾರ್ ಅವರ ನಿಧಾನಗತಿ ಬೌನ್ಸರ್​ಗಳನ್ನು ಎದುರಿಸಲು ಸಜ್ಜಾಗುತ್ತಿರುವುದು ಸ್ಪಷ್ಟ. ಹೀಗಾಗಿ ಟೀಮ್ ಇಂಡಿಯಾ ವಿರುದ್ದದ ಮುಂದಿನ ಪಂದ್ಯದಲ್ಲಿ ಬಾಬರ್ ಕಡೆಯಿಂದ ಭರ್ಜರಿ ಇನಿಂಗ್ಸ್​ ಅನ್ನು ಪಾಕ್ ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.

Published On - 2:12 pm, Wed, 31 August 22

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?