AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಬರ್​ಗೆ ಭುವಿಯ ಬೌನ್ಸರ್ ಭಯ: ವಿಡಿಯೋ ವೈರಲ್..!

Asia Cup 2022: ಸೂಪರ್-4 ಹಂತದಲ್ಲಿ ಭಾರತ-ಪಾಕಿಸ್ತಾನ್ ಮತ್ತೆ ಮುಖಾಮುಖಿಯಾಗುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ಭುವನೇಶ್ವರ್ ಕುಮಾರ್ ಅವರ ಶಾರ್ಟ್ ಬಾಲ್ ಬೌನ್ಸರ್​ ಎಸೆತಗಳಿಗೆ ಹೇಗೆ ಉತ್ತರ ನೀಡಬೇಕೆಂದು ಬಾಬರ್ ಆಜಂ ಅಭ್ಯಾಸ ನಡೆಸುತ್ತಿದ್ದಾರೆ.

Viral Video: ಬಾಬರ್​ಗೆ ಭುವಿಯ ಬೌನ್ಸರ್ ಭಯ: ವಿಡಿಯೋ ವೈರಲ್..!
babar azam, Bhuvneshvar Kumar
TV9 Web
| Edited By: |

Updated on:Aug 31, 2022 | 2:12 PM

Share

ಏಷ್ಯಾಕಪ್‌ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ದ ಪಾಕಿಸ್ತಾನ ಹೀನಾಯ ಸೋಲನುಭವಿಸಿತು. ಪಾಕ್ ತಂಡದ ಈ ಸೋಲಿಗೆ ಪ್ರಮುಖ ಕಾರಣವೆಂದರೆ ಬ್ಯಾಟಿಂಗ್ ವೈಫಲ್ಯ. ಅದರಲ್ಲೂ ಆರಂಭಿಕ ಆಟಗಾರ ಬಾಬರ್ ಆಜಂ ಬೇಗನೆ ಔಟಾಗಿದ್ದು ತಂಡಕ್ಕೆ ದುಬಾರಿಯಾಯಿತು. ಉತ್ತಮ ಆರಂಭದ ನಿರೀಕ್ಷೆಯಲ್ಲಿದ್ದ ಬಾಬರ್ ಆಜಂರನ್ನು ಭುವನೇಶ್ವರ್ ಕುಮಾರ್ ಬೌನ್ಸರ್ ಬಲೆಗೆ ಬೀಳಿಸಿದ್ದರು.

ಭುವಿ ಎಸೆದ ಶಾರ್ಟ್​ ಬಾಲ್ ಬೌನ್ಸರ್​ಗೆ ಭರ್ಜರಿ ಉತ್ತರ ನೀಡಲು ಹೋದ ಬಾಬರ್ 30 ಯಾರ್ಡ್ ಸರ್ಕಲ್​ನಲ್ಲೇ ಕ್ಯಾಚ್ ನೀಡಿದ್ದರು. ಹೀಗೆ ಶಾರ್ಟ್ ಬಾಲ್​ಗೆ ಔಟಾಗಿದ್ದ ಬಾಬರ್ ಇದೀಗ ಬೌನ್ಸರ್​ ಎಸೆತಕ್ಕೆ ಬ್ಯಾಟಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಭಾರತ ವಿರುದ್ಧದ ಆ ಸೋಲು ಪಾಕ್ ನಾಯಕನ ಮನದಲ್ಲಿ ನೆಲೆಯೂರಿದ್ದು, ಈಗ ಅದನ್ನು ಮೆಟ್ಟಿ ನಿಲ್ಲಲು ವಿಶೇಷ ತಯಾರಿಯನ್ನು ಆರಂಭಿಸಿದ್ದಾರೆ.

ಏಕೆಂದರೆ ಸೂಪರ್-4 ಹಂತದಲ್ಲಿ ಭಾರತ-ಪಾಕಿಸ್ತಾನ್ ಮತ್ತೆ ಮುಖಾಮುಖಿಯಾಗುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ಭುವನೇಶ್ವರ್ ಕುಮಾರ್ ಅವರ ಶಾರ್ಟ್ ಬಾಲ್ ಬೌನ್ಸರ್​ ಎಸೆತಗಳಿಗೆ ಹೇಗೆ ಉತ್ತರ ನೀಡಬೇಕೆಂದು ಬಾಬರ್ ಆಜಂ ಅಭ್ಯಾಸ ನಡೆಸುತ್ತಿದ್ದಾರೆ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಹಾಂಗ್ ಕಾಂಗ್ ವಿರುದ್ದದ ಪಂದ್ಯಕ್ಕಾಗಿ ಬಾಬರ್ ಆಜಂ ಅಭ್ಯಾಸ ಶುರು ಮಾಡಿದ್ದಾರೆ. ಈ ವೇಳೆ ಹೆಚ್ಚಾಗಿ ಶಾರ್ಟ್ ಬಾಲ್ ಎಸೆತಗಳಲ್ಲಿ ಅಭ್ಯಾಸ ಮಾಡುತ್ತಿರುವುದು ಕಂಡು ಬಂದಿದೆ. ಅಂದರೆ ಭುವನೇಶ್ವರ್ ಕುಮಾರ್ ಶಾರ್ಟ್ ಬಾಲ್ ಎಸೆತಕ್ಕೆ ಔಟಾಗಿದ್ದ ಬಾಬರ್ ಇದೀಗ ಅದೇ ತಪ್ಪನ್ನು ಸರಿಪಡಿಸಿಕೊಳ್ಳಲು ಮುಂದಾಗಿದ್ದಾರೆ.

ಒಟ್ಟಿನಲ್ಲಿ ಸೂಪರ್-4 ಹಂತಕ್ಕೇರುವ ಮುನ್ನವೇ ಬಾಬರ್ ಆಜಂ ಭುವನೇಶ್ವರ್ ಕುಮಾರ್ ಅವರ ನಿಧಾನಗತಿ ಬೌನ್ಸರ್​ಗಳನ್ನು ಎದುರಿಸಲು ಸಜ್ಜಾಗುತ್ತಿರುವುದು ಸ್ಪಷ್ಟ. ಹೀಗಾಗಿ ಟೀಮ್ ಇಂಡಿಯಾ ವಿರುದ್ದದ ಮುಂದಿನ ಪಂದ್ಯದಲ್ಲಿ ಬಾಬರ್ ಕಡೆಯಿಂದ ಭರ್ಜರಿ ಇನಿಂಗ್ಸ್​ ಅನ್ನು ಪಾಕ್ ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.

Published On - 2:12 pm, Wed, 31 August 22

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ