AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಬರ್​ಗೆ ಭುವಿಯ ಬೌನ್ಸರ್ ಭಯ: ವಿಡಿಯೋ ವೈರಲ್..!

Asia Cup 2022: ಸೂಪರ್-4 ಹಂತದಲ್ಲಿ ಭಾರತ-ಪಾಕಿಸ್ತಾನ್ ಮತ್ತೆ ಮುಖಾಮುಖಿಯಾಗುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ಭುವನೇಶ್ವರ್ ಕುಮಾರ್ ಅವರ ಶಾರ್ಟ್ ಬಾಲ್ ಬೌನ್ಸರ್​ ಎಸೆತಗಳಿಗೆ ಹೇಗೆ ಉತ್ತರ ನೀಡಬೇಕೆಂದು ಬಾಬರ್ ಆಜಂ ಅಭ್ಯಾಸ ನಡೆಸುತ್ತಿದ್ದಾರೆ.

Viral Video: ಬಾಬರ್​ಗೆ ಭುವಿಯ ಬೌನ್ಸರ್ ಭಯ: ವಿಡಿಯೋ ವೈರಲ್..!
babar azam, Bhuvneshvar Kumar
TV9 Web
| Edited By: |

Updated on:Aug 31, 2022 | 2:12 PM

Share

ಏಷ್ಯಾಕಪ್‌ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ದ ಪಾಕಿಸ್ತಾನ ಹೀನಾಯ ಸೋಲನುಭವಿಸಿತು. ಪಾಕ್ ತಂಡದ ಈ ಸೋಲಿಗೆ ಪ್ರಮುಖ ಕಾರಣವೆಂದರೆ ಬ್ಯಾಟಿಂಗ್ ವೈಫಲ್ಯ. ಅದರಲ್ಲೂ ಆರಂಭಿಕ ಆಟಗಾರ ಬಾಬರ್ ಆಜಂ ಬೇಗನೆ ಔಟಾಗಿದ್ದು ತಂಡಕ್ಕೆ ದುಬಾರಿಯಾಯಿತು. ಉತ್ತಮ ಆರಂಭದ ನಿರೀಕ್ಷೆಯಲ್ಲಿದ್ದ ಬಾಬರ್ ಆಜಂರನ್ನು ಭುವನೇಶ್ವರ್ ಕುಮಾರ್ ಬೌನ್ಸರ್ ಬಲೆಗೆ ಬೀಳಿಸಿದ್ದರು.

ಭುವಿ ಎಸೆದ ಶಾರ್ಟ್​ ಬಾಲ್ ಬೌನ್ಸರ್​ಗೆ ಭರ್ಜರಿ ಉತ್ತರ ನೀಡಲು ಹೋದ ಬಾಬರ್ 30 ಯಾರ್ಡ್ ಸರ್ಕಲ್​ನಲ್ಲೇ ಕ್ಯಾಚ್ ನೀಡಿದ್ದರು. ಹೀಗೆ ಶಾರ್ಟ್ ಬಾಲ್​ಗೆ ಔಟಾಗಿದ್ದ ಬಾಬರ್ ಇದೀಗ ಬೌನ್ಸರ್​ ಎಸೆತಕ್ಕೆ ಬ್ಯಾಟಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಭಾರತ ವಿರುದ್ಧದ ಆ ಸೋಲು ಪಾಕ್ ನಾಯಕನ ಮನದಲ್ಲಿ ನೆಲೆಯೂರಿದ್ದು, ಈಗ ಅದನ್ನು ಮೆಟ್ಟಿ ನಿಲ್ಲಲು ವಿಶೇಷ ತಯಾರಿಯನ್ನು ಆರಂಭಿಸಿದ್ದಾರೆ.

ಏಕೆಂದರೆ ಸೂಪರ್-4 ಹಂತದಲ್ಲಿ ಭಾರತ-ಪಾಕಿಸ್ತಾನ್ ಮತ್ತೆ ಮುಖಾಮುಖಿಯಾಗುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ಭುವನೇಶ್ವರ್ ಕುಮಾರ್ ಅವರ ಶಾರ್ಟ್ ಬಾಲ್ ಬೌನ್ಸರ್​ ಎಸೆತಗಳಿಗೆ ಹೇಗೆ ಉತ್ತರ ನೀಡಬೇಕೆಂದು ಬಾಬರ್ ಆಜಂ ಅಭ್ಯಾಸ ನಡೆಸುತ್ತಿದ್ದಾರೆ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಹಾಂಗ್ ಕಾಂಗ್ ವಿರುದ್ದದ ಪಂದ್ಯಕ್ಕಾಗಿ ಬಾಬರ್ ಆಜಂ ಅಭ್ಯಾಸ ಶುರು ಮಾಡಿದ್ದಾರೆ. ಈ ವೇಳೆ ಹೆಚ್ಚಾಗಿ ಶಾರ್ಟ್ ಬಾಲ್ ಎಸೆತಗಳಲ್ಲಿ ಅಭ್ಯಾಸ ಮಾಡುತ್ತಿರುವುದು ಕಂಡು ಬಂದಿದೆ. ಅಂದರೆ ಭುವನೇಶ್ವರ್ ಕುಮಾರ್ ಶಾರ್ಟ್ ಬಾಲ್ ಎಸೆತಕ್ಕೆ ಔಟಾಗಿದ್ದ ಬಾಬರ್ ಇದೀಗ ಅದೇ ತಪ್ಪನ್ನು ಸರಿಪಡಿಸಿಕೊಳ್ಳಲು ಮುಂದಾಗಿದ್ದಾರೆ.

ಒಟ್ಟಿನಲ್ಲಿ ಸೂಪರ್-4 ಹಂತಕ್ಕೇರುವ ಮುನ್ನವೇ ಬಾಬರ್ ಆಜಂ ಭುವನೇಶ್ವರ್ ಕುಮಾರ್ ಅವರ ನಿಧಾನಗತಿ ಬೌನ್ಸರ್​ಗಳನ್ನು ಎದುರಿಸಲು ಸಜ್ಜಾಗುತ್ತಿರುವುದು ಸ್ಪಷ್ಟ. ಹೀಗಾಗಿ ಟೀಮ್ ಇಂಡಿಯಾ ವಿರುದ್ದದ ಮುಂದಿನ ಪಂದ್ಯದಲ್ಲಿ ಬಾಬರ್ ಕಡೆಯಿಂದ ಭರ್ಜರಿ ಇನಿಂಗ್ಸ್​ ಅನ್ನು ಪಾಕ್ ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.

Published On - 2:12 pm, Wed, 31 August 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ