AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan, Asia Cup 2022: ಟೀಮ್ ಇಂಡಿಯಾ ಭರ್ಜರಿ ಬೌಲಿಂಗ್: ಸುಲಭ ಗುರಿ ನೀಡಿದ ಪಾಕ್

India vs Pakistan, Asia Cup 2022: ಎಚ್ಚರಿಕೆಯ ಆಟವಾಡಿದ ಮೊಹಮ್ಮದ್ ರಿಜ್ವಾನ್ ಹಾಗೂ ಫಖರ್ ಝಮಾನ್ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದರು.

India vs Pakistan, Asia Cup 2022: ಟೀಮ್ ಇಂಡಿಯಾ ಭರ್ಜರಿ ಬೌಲಿಂಗ್: ಸುಲಭ ಗುರಿ ನೀಡಿದ ಪಾಕ್
Team India
TV9 Web
| Edited By: |

Updated on:Aug 28, 2022 | 9:32 PM

Share

India vs Pakistan, Asia Cup 2022: ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡ ಟೀಮ್ ಇಂಡಿಯಾ 148 ರನ್​ಗಳ ಟಾರ್ಗೆಟ್ ನೀಡಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ್ದ ಪಾಕ್ ಉತ್ತಮ ಆರಂಭ ಪಡೆದಿರಲಿಲ್ಲ. ಪಂದ್ಯದ ಮೂರನೇ ಓವರ್​ನಲ್ಲಿ ಭುವನೇಶ್ವರ್ ಕುಮಾರ್ ಪಾಕ್ ನಾಯಕ ಬಾಬರ್ ಆಜಂ (10) ಗೆ ಪೆವಿಲಿಯನ್ ಹಾದಿ ತೋರಿಸಿದ್ದರು.

ಇದಾದ ಬಳಿಕ ಎಚ್ಚರಿಕೆಯ ಆಟವಾಡಿದ ಮೊಹಮ್ಮದ್ ರಿಜ್ವಾನ್ ಹಾಗೂ ಫಖರ್ ಝಮಾನ್ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದರು. ಇನ್ನು ಪವರ್​ಪ್ಲೇನ ಅಂತಿಮ ಓವರ್​ನಲ್ಲಿ ಫಖರ್ ಝಮಾನ್ (10) ವಿಕೆಟ್ ಪಡೆಯುವ ಮೂಲಕ ಅವೇಶ್ ಖಾನ್ ಟೀಮ್ ಇಂಡಿಯಾಗೆ 2ನೇ ಯಶಸ್ಸು ತಂದುಕೊಟ್ಟರು.

ಈ ಹಂತದಲ್ಲಿ ಜೊತೆಗೂಡಿದ ರಿಜ್ವಾನ್ ಹಾಗೂ ಇಫ್ತಿಕರ್ ಅಹ್ಮದ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು. ಪರಿಣಾಮ 10 ಓವರ್​ಗಳಲ್ಲಿ ಪಾಕಿಸ್ತಾನ್ ತಂಡವು 68 ರನ್​ ಕಲೆಹಾಕಿತು. ಮೊದಲ ಹತ್ತು ಓವರ್​ಗಳಲ್ಲಿ ಮೇಲುಗೈ ಸಾಧಿಸಿ ಟೀಮ್ ಇಂಡಿಯಾ ಬೌಲರ್​ಗಳು ಪಾಕ್ ಬ್ಯಾಟ್ಸ್​ಮನ್​ಗಳ ಮೇಲೆ ಒತ್ತಡ ಹಾಕುವಲ್ಲಿ ಯಶಸ್ವಿಯಾದರು.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಅದರಂತೆ 13ನೇ ಓವರ್​ನ ಹಾರ್ದಿಕ್ ಪಾಂಡ್ಯರ ಮೊದಲ ಎಸೆತದಲ್ಲೇ ಇಫ್ತಿಕರ್ ಅಹ್ಮದ್ (28) ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ಹೊರನಡೆದರು. ಇದಾಗ್ಯೂ ಮತ್ತೊಂದೆಡೆ ಮೊಹಮ್ಮದ್ ರಿಜ್ವಾನ್ ಕ್ರೀಸ್ ಕಚ್ಚಿ ನಿಂತಿದ್ದರು. ಇದೇ ವೇಳೆ ಮತ್ತೆ ದಾಳಿಗಿಳಿದ ಹಾರ್ದಿಕ್ ಪಾಂಡ್ಯ ಎಸೆತವನ್ನು ಥರ್ಡ್​ಮ್ಯಾನ್​ನತ್ತ ಬಾರಿಸಲು ಹೋಗಿ ರಿಜ್ವಾನ್ (42) ಕೂಡ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಖುಷ್ದಿಲ್ ಶಾ (7) ಜಡೇಜಾಗೆ ಕ್ಯಾಚ್ ನೀಡಿ ಹೊರನಡೆದರು. ಈ ಮೂಲಕ ಹಾರ್ದಿಕ್ ಪಾಂಡ್ಯ 15ನೇ ಓವರ್​ನಲ್ಲಿ ಟೀಮ್ ಇಂಡಿಯಾಗೆ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು.

ಪರಿಣಾಮ ಪಾಕ್ ತಂಡವು 15ನೇ ಓವರ್​ನಲ್ಲಿ 100 ರನ್​ಗಳ ಗಟಿದಾಡುವಷ್ಟರಲ್ಲಿ 5 ಪ್ರಮುಖ ವಿಕೆಟ್ ಕಳೆದುಕೊಂಡಿತು. ಇನ್ನು ಆಸೀಫ್ ಅಲಿ 9 ರನ್​ಗಳಿಸಿ ಭುವನೇಶ್ವರ್ ಕುಮಾರ್ ಬೌಲಿಂಗ್​ನಲ್ಲಿ ಬೌಂಡರಿ ಲೈನ್​ನಲ್ಲಿದ್ದ ಸೂರ್ಯಕುಮಾರ್​ ಯಾದವ್​ಗೆ ಕ್ಯಾಚ್ ನೀಡಿದರು. ಇನ್ನು 18ನೇ ಓವರ್​ನಲ್ಲಿ ನವಾಜ್ (1) ವಿಕೆಟ್ ಪಡೆಯುವ ಮೂಲಕ ಅರ್ಷದೀಪ್ ಸಿಂಗ್ ಟೀಮ್ ಇಂಡಿಯಾಗೆ 7ನೇ ಯಶಸ್ಸು ತಂದುಕೊಟ್ಟರು.

18ನೇ ಓವರ್ ಮುಕ್ತಾಯದ ವೇಳೆಗೆ 124 ರನ್​ ಕಲೆಹಾಕಿದ್ದ ಪಾಕಿಸ್ತಾನ್ ತಂಡಕ್ಕೆ 19ನೇ ಓವರ್​ನಲ್ಲಿ ಭುವನೇಶ್ವರ್ ಕುಮಾರ್ ಆಘಾತ ನೀಡಿದರು. ಬ್ಯಾಕ್ ಟು ಬ್ಯಾಕ್ 2 ವಿಕೆಟ್ ಕಬಳಿಸುವ ಮೂಲಕ ಅಂತಿಮ ಓವರ್​ಗಳಲ್ಲಿ ರನ್​ ಗತಿಯನ್ನು ನಿಯಂತ್ರಿಸಿದರು. ಅಂತಿಮ ಹಂತದಲ್ಲಿ 6 ಎಸೆತಗಳಲ್ಲಿ 16 ರನ್​ ಬಾರಿಸಿದ್ದ ದಹಾನಿಯನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಪಾಕಿಸ್ತಾನ್ ತಂಡವನ್ನು 19.5 ಓವರ್​ಗಳಲ್ಲಿ 147 ರನ್​ಗಳಿಗೆ ಆಲೌಟ್ ಮಾಡಿತು.

ಟೀಮ್ ಇಂಡಿಯಾ ಭುವನೇಶ್ವರ್ ಕುಮಾರ್ 4 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ 3 ವಿಕೆಟ್ ಕಬಳಿಸಿದರು. ಇನ್ನು ಅರ್ಷದೀಪ್ ಸಿಂಗ್ 2 ವಿಕೆಟ್ ಉರುಳಿಸಿದರೆ, ಅವೇಶ್ ಖಾನ್ 1 ವಿಕೆಟ್ ಪಡೆದರು.

Published On - 9:29 pm, Sun, 28 August 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್