India vs Pakistan: ಸೋಲಿಗೆ ಕಾರಣವೇನು? ಕೂತು ಚರ್ಚಿಸುತ್ತೇವೆ ಎಂದ ಬಾಬರ್ ಆಝಂ

India vs Pakistan ICC T20 World Cup 2024: ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಧಿಸುವಂತೆ ದಾಳಿ ಸಂಘಟಿಸಿದ ಪಾಕ್ ಬೌಲರ್​ಗಳು ಟೀಮ್ ಇಂಡಿಯಾವನ್ನು 119 ರನ್​ಗಳಿಗೆ ಆಲೌಟ್ ಮಾಡಿದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 7 ವಿಕೆಟ್ ಕಳೆದುಕೊಂಡು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 113 ರನ್​ಗಳು ಮಾತ್ರ.

India vs Pakistan: ಸೋಲಿಗೆ ಕಾರಣವೇನು? ಕೂತು ಚರ್ಚಿಸುತ್ತೇವೆ ಎಂದ ಬಾಬರ್ ಆಝಂ
Babar Azam
Follow us
|

Updated on: Jun 10, 2024 | 9:53 AM

T20 World Cup 2024: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ ಭಾರತ ತಂಡ 7ನೇ ಬಾರಿ ಜಯ ಸಾಧಿಸಿದೆ. ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಬಾರಿಯ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 119 ರನ್​ ಕಲೆಹಾಕಿದರೆ, ಪಾಕಿಸ್ತಾನ್ ತಂಡ 20 ಓವರ್​ಗಳಲ್ಲಿ 113 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಭಾರತ ತಂಡವು 6 ರನ್​ಗಳ ರೋಚಕ ಜಯ ಸಾಧಿಸಿತು.

ಈ ಸೋಲಿನ ಬಳಿಕ ಮಾತನಾಡಿದ ಪಾಕ್ ತಂಡದ ನಾಯಕ ಬಾಬರ್ ಆಝಂ, ನಾವು ಚೆನ್ನಾಗಿ ಬೌಲಿಂಗ್ ಮಾಡಿದ್ದೇವೆ. ಬ್ಯಾಟಿಂಗ್‌ನಲ್ಲಿ ಬ್ಯಾಕ್ ಟು ಬ್ಯಾಕ್ ವಿಕೆಟ್‌ಗಳನ್ನು ಕಳೆದುಕೊಂಡಿತು. ಅಲ್ಲದೆ ಹೆಚ್ಚು ಡಾಟ್ ಬಾಲ್‌ಗಳನ್ನು ಆಡಿದ್ದೆವು. ಇದು ನಮ್ಮ ರನ್​ ಗತಿ ಮೇಲೆ ಪರಿಣಾಮ ಬೀರಿತು ಎಂದಿದ್ದಾರೆ.

ನಾವು ಪವರ್​ಪ್ಲೇನಲ್ಲೇ ಉತ್ತಮ ಬ್ಯಾಟಿಂಗ್ ಮಾಡಬಹುದಾಗಿತ್ತು. ಪ್ರಮುಖ ಬ್ಯಾಟರ್​ಗಳು ಹೆಚ್ಚು ಡಾಟ್ ಬಾಲ್ ಆಡಿದರೆ, ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿಯುವವರಿಂದ ಹೆಚ್ಚಿನದನ್ನು ನಿರೀಕ್ಷಿಸಲು ಸಾಧ್ಯವಾಗುವುದಿಲ್ಲ.

ಪಿಚ್​ ಕೂಡ ಬ್ಯಾಟಿಂಗ್​ಗೆ ಸಹಕಾರಿಯಾಗಿತ್ತು. ನಿಧಾನವಾಗಿದ್ದರೂ ಚೆಂಡು ಬ್ಯಾಟ್​ಗೆ ಬರುತ್ತಿದ್ದವು. ಆದರೆ ನಾವದನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿಫಲವಾದೆವು ಎಂದು ಬಾಬರ್ ಆಝಂ ಹೇಳಿದರು.

ನಾವು ಎರಡು ಪಂದ್ಯಗಳಲ್ಲಿ ಸೋತಿದ್ದೇವೆ. ಇನ್ನೆರಡು ಪಂದ್ಯಗಳಲ್ಲಿ ಗೆಲ್ಲಲೇಬೇಕು. ಯುಎಸ್​ಎ ಮತ್ತು ಭಾರತದ ವಿರುದ್ಧ ಬ್ಯಾಕ್ ಟು ಬ್ಯಾಕ್ ಸೋಲಲು ಕಾರಣವೇನು ಎಂಬುದನ್ನು ಕೂತು ಚರ್ಚಿಸುತ್ತೇವೆ ಎಂದು ಇದೇ ವೇಳೆ ಬಾಬರ್ ಆಝಂ ಹೇಳಿದರು.

ಇದೀಗ ಬಾಬರ್ ಆಝಂ ಅವರ ಹೇಳಿಕೆಯನ್ನು ಟ್ರೋಲ್ ಮಾಡಲಾಗುತ್ತಿದೆ. ಉಳಿದಿರುವುದು ಕೇವಲ 2 ಮ್ಯಾಚ್​ಗಳು ಮಾತ್ರ. ಅತ್ತ ಟೀಮ್ ಇಂಡಿಯಾ ಹಾಗೂ ಯುಎಸ್​ಎ ತಂಡಗಳು ಸೂಪರ್-8 ಹಂತಕ್ಕೇರುವ ಸಾಧ್ಯತೆಯಿದೆ. ಇದಾದ ಬಳಿಕ ಕೂತು ಚರ್ಚಿಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪಾಕ್ ಕ್ರಿಕೆಟ್ ಪ್ರೇಮಿಗಳು ಆಕ್ರೋಶ ಹೊರಹಾಕಿದ್ದಾರೆ.

ಅಗ್ರಸ್ಥಾನಕ್ಕೇರಿದ ಭಾರತ:

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಧಿಸುವಂತೆ ದಾಳಿ ಸಂಘಟಿಸಿದ ಪಾಕ್ ಬೌಲರ್​ಗಳು ಟೀಮ್ ಇಂಡಿಯಾವನ್ನು 119 ರನ್​ಗಳಿಗೆ ಆಲೌಟ್ ಮಾಡಿದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 7 ವಿಕೆಟ್ ಕಳೆದುಕೊಂಡು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 113 ರನ್​ಗಳು ಮಾತ್ರ. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿದೆ.

ಇದನ್ನೂ ಓದಿ: India vs Pakistan: ಟೀಮ್ ಇಂಡಿಯಾ ಗೆಲುವಿಗೆ ಸಿರಾಜ್ ಕಾರಣ… ಹೇಗೆ ಗೊತ್ತಾ?

ಈ ಗೆಲುವಿನೊಂದಿಗೆ 4 ಅಂಕಗಳನ್ನು ಪಡೆದಿರುವ ಭಾರತ ತಂಡವು ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇನ್ನು ಯುಎಸ್​ಎ ತಂಡ ದ್ವಿತೀಯ ಸ್ಥಾನದಲ್ಲಿದ್ದು, ಪಾಕಿಸ್ತಾನ್ ತಂಡ 4ನೇ ಸ್ಥಾನಕ್ಕೆ ಕುಸಿದಿದೆ.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್