India vs Pakistan, T20 World Cup: ಪಾಕಿಸ್ತಾನ ವಿರುದ್ಧ ಭಾರತದ ಸೋಲಿಗೆ ಕಾರಣವಾಗಿದ್ದು ಇದೇ ತಪ್ಪುಗಳು ನೋಡಿ

Reasons India Lost Match to Pakistan: ವಿರಾಟ್ ಕೊಹ್ಲಿ ಪಡೆಯು ಮಾಡಿದ ಈ ಐದು ತಪ್ಪುಗಳು, ಪಾಕಿಸ್ತಾನ ಆಟಗಾರರಿಗೆ ಇತಿಹಾಸ ಬದಲಿಸಲು ಅವಕಾಶ ಮಾಡಿಕೊಟ್ಟಿದೆ.

India vs Pakistan, T20 World Cup: ಪಾಕಿಸ್ತಾನ ವಿರುದ್ಧ ಭಾರತದ ಸೋಲಿಗೆ ಕಾರಣವಾಗಿದ್ದು ಇದೇ ತಪ್ಪುಗಳು ನೋಡಿ
ಟೀಂ ಇಂಡಿಯಾ
Follow us
| Updated By: Vinay Bhat

Updated on: Oct 25, 2021 | 9:00 AM

ಐಸಿಸಿ ವಿಶ್ವಕಪ್ (T20 World Cup 2021) ಟೂರ್ನಿಯ ಇತಿಹಾಸದಲ್ಲಿ ಒಮ್ಮೆಯೂ ಭಾರತ, ಬದ್ಧ ವೈರಿ ಪಾಕಿಸ್ತಾನ (India vs Pakistan) ವಿರುದ್ಧ ತಲೆ ಬಾಗಿರಲಿಲ್ಲ. ಪಾಕಿಸ್ತಾನ ವಿರುದ್ಧದ ಹೈವೊಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಹೀನಾಯವಾಗಿ ಸೋಲುತ್ತೆ ಅಂತಾ, ಯಾರೋಬ್ಬರು ನಿರೀಕ್ಷಿಸಿರಲಿಲ್ಲ. ಸ್ವತಃ ಪಾಕ್ ಕ್ರಿಕೆಟಿಗರೇ ಇಂತಹದ್ದೊಂದು ಅದ್ದೂರಿ ವಿಜಯೋತ್ಸವ ಆಚರಿಸುತ್ತೇವೆ ಎಂಬ ಕನಸು ಕಂಡಿರಲಿಲ್ಲವೇನೊ. ಎದುರಾಳಿಯ ಒಂದು ವಿಕೆಟ್ ಕೂಡ ಕೀಳಲು ಸಾಧ್ಯವಾಗದ ಕೊಹ್ಲಿ ಪಡೆ (Virat Kohli) ಅಷ್ಟರ ಮಟ್ಟಿಗೆ ನೀರಸ ಪ್ರದರ್ಶನ ತೋರಿದೆ. ಇದರಿಂದ ಭಾರತದ ಮುಂದಿನ ಹಾದಿ ಮತ್ತಷ್ಟು ಕಠಿಣವಾಗಿದೆ. ವಿರಾಟ್ ಕೊಹ್ಲಿ ಪಡೆಯು ಮಾಡಿದ ಈ ಐದು ತಪ್ಪುಗಳು, ಪಾಕ್ ಆಟಗಾರರಿಗೆ ಇತಿಹಾಸ ಬದಲಿಸಲು ಅವಕಾಶ ಮಾಡಿಕೊಟ್ಟಿದೆ.

ಟಾಸ್ ಸೋತ ಭಾರತ: ಹೌದು, ದುಬೈ ಮೈದಾನದಲ್ಲಿ ಟಾಸ್ ಸೋತಿದ್ದೇ ಟೀಮ್ ಇಂಡಿಯಾ ಸೋಲಿಗೆ ಪ್ರಮುಖ ಕಾರಣವಾಯಿತು. ದುಬೈ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ತಂಡಕ್ಕೆ ಬಹುತೇಕ ಸೋಲು ಕಟ್ಟಿಟ್ಟ ಬುತ್ತಿ. ದುಬೈನಲ್ಲಿ ನಡೆದ ಕಳೆದ ಎರಡು ಐಪಿಎಲ್ ಸೀಸನ್​ಗಳಲ್ಲಿ ಆಡಿದ 20 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಮುಗ್ಗರಿಸಿದೆ. ಹೀಗಾಗಿ ಟಾಸ್ ಕೂಡ ಭಾರತದ ಸೋಲಿಗೆ ಮೊದಲ ಮುನ್ನುಡಿ ಬರೆದಿತ್ತು.

ಡ್ಯೂ ಪ್ಯಾಕ್ಟರ್ ಮತ್ತು ಪಿಚ್: ದುಬೈನ ಪಿಚ್ ಮತ್ತು ಡ್ಯೂ ಫ್ಯಾಕ್ಟರ್ ಭಾರತದ ಅರ್ಧ ಅದೃಷ್ಟವನ್ನ ಕಸಿದುಕೊಂಡಿತ್ತು. ದುಬೈನ ಸ್ಲೋ ಪಿಚ್​ನಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದವರಿಗೆ, ಎದುರಾಳಿ ತಂಡದ ಬೌಲರ್​ಗಳಿಂದ ಕರಾರುವಾಕ್ ಬೌಲಿಂಗ್ ಮಾಡಲು ಸಾಧ್ಯ. ಅದೇ ನಂತರ ಬೌಲಿಂಗ್ ಮಾಡುವವರಿಗೆ ದುಬೈನಲ್ಲಿ ಚೆಂಡಿನ ಮೇಲಿನ ಹಿಡಿತ ಕಳೆದುಕೊಳ್ಳುವಂತೆ ಮಾಡಿಬಿಡುತ್ತದೆ.

ಆರಂಭಿಕರ ವೈಫಲ್ಯ: ಎಲ್ಲಕ್ಕಿಂತ ಹೆಚ್ಚಾಗಿ ಟೀಮ್ ಇಂಡಿಯಾದ ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಕೆ. ಎಲ್ ರಾಹುಲ್, ಮೊದಲ ಮೂರು ಓವರ್​ನಲ್ಲೇ ವಿಕೆಟ್ ಒಪ್ಪಿಸಿದ್ದು, ಭಾರತಕ್ಕೆ ಭಾರಿ ಆಘಾತ ನೀಡಿತ್ತು. ಈ ಆರಂಭಿಕ ಆಘಾತದಿಂದ ಕೊಹ್ಲಿ ಪಡೆಗೆ ಕೊನೆವರೆಗೂ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಗಾಯಾಳು ಹಾರ್ದಿಕ್ ಪಾಂಡ್ಯಾ: ಆಲ್ರೌಂಡರ್ ಹಾರ್ದಿಕ್ ಪಾಂಡ್ಯಾ ಫಿಟ್ನೆಸ್ ವಿಚಾರದಲ್ಲಿ ಅನುಮಾನಗಳಿದ್ದವು. ಈ ಅನುಮಾನ ಪಾಂಡ್ಯಾ ಬ್ಯಾಟಿಂಗ್ ಮಾಡಲು ಕಣಕ್ಕಿಳಿದಾಗ ನಿಜವಾಗಿತ್ತು. ಬ್ಯಾಟಿಂಗ್ ಮಾಡುವಾಗ ಪಾಂಡ್ಯಾ ಬಲಭುಜಕ್ಕೆ ನೋವಾಗಿದೆ. 11 ರನ್​ಗಳಿಸಿ ಔಟಾದ ಪಾಂಡ್ಯಾ ಫೀಲ್ಡಿಂಗ್ ಮಾಡಲು ಬರಲಿಲ್ಲ. ಪಾಂಡ್ಯಾ ಬದಲು ಫಾರ್ಮ್ನಲ್ಲಿದ್ದ ಶಾರ್ದೂಲ್ ಠಾಕೂರ್​ಗೆ ಅವಕಾಶ ನೀಡಿದರೆ, ಕತೆಯೇ ಬೇರೆಯಾಗುತ್ತಿತ್ತು.

ಬೌಲರ್​ಗಳ ನೀರಸ ಪ್ರದರ್ಶನ: ಯುಎಇನಲ್ಲಿ ನಡೆದ ಐಪಿಎಲ್​ನಲ್ಲಿ ವಿಕೆಟ್​ಗಳ ಸುರಿಮಳೆಗೈಯುತ್ತಿದ್ದ ಭಾರತೀಯ ಬೌಲರ್​ಗಳ ಆರ್ಭಟ, ಪಾಕ್ ಬ್ಯಾಟರ್​ಗಳ ಮುಂದೆ ನಡೆಯಲೇ ಇಲ್ಲ. ರಿಝ್ವಾನ್ ಮತ್ತು ಬಾಬರ್ ಜುಗಲ್ಬಂಧಿಗೆ ಕೊಹ್ಲಿ ಬೌಲರ್​ಗಳು ಸುಸ್ತಾದರು. ಯಾವ ಸ್ಪಿನ್ನರ್​ ಕೈಚಳಕವೂ ನಡೆಯಲಿಲ್ಲ.

ವರದಿ: ಸಂಜಯ್.

Virat Kohli: ಪಾಕಿಸ್ತಾನ ಪತ್ರಕರ್ತನ ಮೈಚಳಿ ಬಿಡಿಸಿದ ವಿರಾಟ್ ಕೊಹ್ಲಿ: ಖಡಕ್ ಪ್ರಶ್ನೆಗೆ ನಾಯಕ ಉತ್ತರ ಹೇಗಿತ್ತು ಗೊತ್ತಾ?

KL Rahul: ನೋಬಾಲ್​ಗೆ ಔಟಾದ ಕೆ.ಎಲ್. ರಾಹುಲ್; ಅಂಪೈರ್ ತಪ್ಪಿನಿಂದ ಭಾರತಕ್ಕೆ ದೊಡ್ಡ ಮೋಸ

(India vs Pakistan Here is the Five Reasons Why Virat Kohli Team India Lost Match to Pakistan)

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ