India vs Pakistan: ಬುಲ್ಡೋಝರ್​ ಮೇಲೆ, ದುಬೈ ಬೀದಿಗಳಲ್ಲಿ… ಹೇಗಿತ್ತು ನೋಡಿ ಭಾರತೀಯರ ಸಂಭ್ರಮ

T20 World Cup 2024: ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ರೋಚಕ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಮುಂದಿನ ಪಂದ್ಯಗಳಲ್ಲಿ ಯುಎಸ್​ಎ ಅಥವಾ ಕೆನಡಾ ವಿರುದ್ಧ ಜಯಗಳಿಸಿದರೆ ಭಾರತ ತಂಡ ಸೂಪರ್-8 ಹಂತಕ್ಕೇರಲಿದೆ. ಅದೇ ಟೀಮ್ ಇಂಡಿಯಾ ವಿರುದ್ಧ ಸೋತಿರುವ ಪಾಕಿಸ್ತಾನ್ ತಂಡ ಮುಂದಿನ 2 ಪಂದ್ಯಗಳಲ್ಲೂ ಜಯಗಳಿಸಬೇಕು. ಅಲ್ಲದೆ ಯುಎಸ್​ಎ ತಂಡದ ಫಲಿತಾಂಶವನ್ನು ಎದುರು ನೋಡಬೇಕಿದೆ.

India vs Pakistan: ಬುಲ್ಡೋಝರ್​ ಮೇಲೆ, ದುಬೈ ಬೀದಿಗಳಲ್ಲಿ... ಹೇಗಿತ್ತು ನೋಡಿ ಭಾರತೀಯರ ಸಂಭ್ರಮ
India vs Pakistan
Follow us
|

Updated on: Jun 10, 2024 | 2:10 PM

T20 World Cup 2024: ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ್ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ರಿಷಭ್ ಪಂತ್ 42 ರನ್​ ಬಾರಿಸಿದ್ದು ಬಿಟ್ಟರೆ, ಉಳಿದವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಭಾರತ ತಂಡವು 19 ಓವರ್​ಗಳಲ್ಲಿ 119 ರನ್​ಗಳಿಸಿ ಆಲೌಟ್ ಆಯಿತು.

120 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಟೀಮ್ ಇಂಡಿಯಾ ಬೌಲರ್​ಗಳ ಕರಾರುವಾಕ್ ದಾಳಿಗೆ ರನ್ ಗಳಿಸಲು ಪರದಾಡಿದ ಪಾಕ್ ಬ್ಯಾಟರ್​ಗಳು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 113 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

ಈ ರೋಚಕ ಗೆಲುವಿನ ಬೆನ್ನಲ್ಲೇ ಭಾರತೀಯ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತು. ಪಂದ್ಯ ನಡೆದ ನ್ಯೂಯಾರ್ಕ್ ಸ್ಟೇಡಿಯಂನ ಹೊರಗೆ ಅಭಿಮಾನಿಗಳು ಬ್ಯಾಂಡ್ ಬಜಾಯಿಸುವ ಮೂಲಕ ಕುಣಿದು ಕುಪ್ಪಳಿಸಿದರು.

ಅತ್ತ ದೂರದ ದುಬೈನಲ್ಲಿ ಅಭಿಮಾನಿಗಳು ಬೀದಿಗಿಳಿದು ಸಂಭ್ರಮಿಸಿದರು. ಇನ್ನು ಇಂದೋರ್​ನಲ್ಲಿ ಅಭಿಮಾನಿಗಳು ಧ್ವಜಗಳೊಂದಿಗೆ ರಸ್ತೆಗಿಳಿದು ಹರ್ಷೋದ್ಘಾರದೊಂದಿಗೆ ಕುಣಿದು ಕುಪ್ಪಳಿಸಿದರು.

ಪುಣೆಯ ಅಭಿಮಾನಿಗಳು ಒಂದೆಜ್ಜೆ ಮುಂದೆ ಹೋಗಿ ಬುಲ್ಡೋಝರ್ ಮೇಲೆ ನಿಂತು ಜಯಕಾರ ಹಾಕುತ್ತಾ ಸಂಭ್ರಮಿಸಿದರು. ಈ ಭರ್ಜರಿ ಸಂಭ್ರಮಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಲ್ಲರಿಂದಲೂ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಭಾರತೀಯ ಅಭಿಮಾನಿಗಳ ಸಂಭ್ರಮ:

ಟೀಮ್ ಇಂಡಿಯಾ ಮುಂದಿನ ಪಂದ್ಯ ಯಾವಾಗ?

ಭಾರತ ತಂಡವು ಜೂನ್ 12 ರಂದು ಯುಎಸ್​ಎ ವಿರುದ್ಧ ಕಣಕ್ಕಿಳಿಯಲಿದೆ. ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೂಪರ್-8 ಹಂತಕ್ಕೇರಲಿದೆ. ಹೀಗಾಗಿ ಮುಂದಿನ ಪಂದ್ಯದ ಮೂಲಕ ಭಾರತ ತಂಡ ಮುಂದಿನ ಹಂತಕ್ಕೇರುವುದನ್ನು ಎದುರು ನೋಡಬಹುದು.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್