AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK, ICC World Cup: ಪಾಕ್ ಬ್ಯಾಟರ್​ಗಳ ಪೆವಿಲಿಯನ್ ಪರೇಡ್: ಸಖತ್ ಟ್ರೋಲ್ ಆದ ಬಾಬರ್ ಪಡೆ

India vs Pakistan Memes: ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 191 ರನ್​ಗೆ ಆಲೌಟ್ ಆಯಿತು. ಆರಂಭದಲ್ಲಿ ದೊಡ್ಡ ಮೊತ್ತದ ಸೂಚನೆ ನೀಡಿದ್ದ ಬಾಬರ್ ಪಡೆ ಊಹಿಸಲಾದ ರೀತಿಯಲ್ಲಿ ಕುಸಿತ ಕಂಡಿತು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಬ್ಯಾಟಿಂಗ್​ನಲ್ಲಿ ನೀಡಿದ ಕಳಪೆ ಪ್ರದರ್ಶನಕ್ಕೆ ಸಖತ್ ಟ್ರೋಲ್ ಆಗುತ್ತಿದೆ.

IND vs PAK, ICC World Cup: ಪಾಕ್ ಬ್ಯಾಟರ್​ಗಳ ಪೆವಿಲಿಯನ್ ಪರೇಡ್: ಸಖತ್ ಟ್ರೋಲ್ ಆದ ಬಾಬರ್ ಪಡೆ
IND vs PAK Memes
Vinay Bhat
|

Updated on:Oct 14, 2023 | 7:10 PM

Share

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023ರ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಪಂದ್ಯ ರೋಚಕತೆ ಸೃಷ್ಟಿಸಿದೆ. ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಪಾಕಿಸ್ತಾನ ತಂಡ ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 191 ರನ್​ಗೆ ಆಲೌಟ್ ಆಯಿತು. ಆರಂಭದಲ್ಲಿ ದೊಡ್ಡ ಮೊತ್ತದ ಸೂಚನೆ ನೀಡಿದ್ದ ಬಾಬರ್ ಪಡೆ ಊಹಿಸಲಾದ ರೀತಿಯಲ್ಲಿ ಕುಸಿತ ಕಂಡಿತು. ಭಾರತೀಯ ಬೌಲರ್​ಗಳು ಪಾಕಿಸ್ತಾನ ಬ್ಯಾಟರ್​ಗಳಿಗೆ ಎಲ್ಲಿಲ್ಲದಂತೆ ಕಾಡಿದರು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಬ್ಯಾಟಿಂಗ್​ನಲ್ಲಿ ನೀಡಿದ ಕಳಪೆ ಪ್ರದರ್ಶನಕ್ಕೆ ಸಖತ್ ಟ್ರೋಲ್ ಆಗುತ್ತಿದೆ.

ಎಕ್ಸ್ ಖಾತೆಯಲ್ಲಿ ಕ್ರಿಕೆಟ್ ಫ್ಯಾನ್ಸ್ ಪಾಕ್ ತಂಡದ ಪ್ರದರ್ಶನದ ಬಗ್ಗೆ ಟ್ರೋಲ್ ಮಾಡಿರುವುದು:

ಪ್ರಸಿದ್ಧ ಕಾರು ಕಂಪನಿ ಎಮ್​ಜಿ ಪಾಕಿಸ್ತಾನ ತಂಡವನ್ನು ಟ್ರೋಲ್ ಮಾಡಿದ್ದು, ತಮ್ಮ ಕಾರಿನ ಫೋಟೋ ಹಂಚಿಕೊಂಡು, ”ಇದು ಪಾಕಿಸ್ತಾನ ಬ್ಯಾಟರ್​ಗಳಿಗೆ ಪೆವಿಲಿಯನ್​ಗೆ ತೆರಳಲು ಸಹಾಯ ಮಾಡಬಹುದು,” ಎಂದು ಬರೆದುಕೊಂಡಿದೆ.

ಇದನ್ನೂ ಓದಿ
Image
ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಯಾಕೆ ಗೊತ್ತೇ?
Image
ಭಾರತದ ಬೌಲಿಂಗ್ ಬಿರುಗಾಳಿಗೆ ತತ್ತರಿಸಿದ ಪಾಕ್: ರೋಹಿತ್ ಪಡೆಗೆ 192 ರನ್​​ಗಳ
Image
IND vs PAK ಪಂದ್ಯದಲ್ಲಿ ವಿರಾಟ್ ಕೊಹ್ಲಿಯಿಂದ ನಡೆಯಿತು ದೊಡ್ಡ ತಪ್ಪು
Image
ಬಾಯ್, ಬಾಯ್: ವಿಕೆಟ್ ಕಿತ್ತಾಗ ಹಾರ್ದಿಕ್ ಕೋಪದಲ್ಲಿ ಆಡಿದ ಮಾತು ವೈರಲ್

ಟಾಸ್ ಸೋತು ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಪಾಕಿಸ್ತಾನ ಪರ ಅಬ್ದುಲ್ ಶಫೀಖ್ ಹಾಗೂ ಇಮಾನ್ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. 8 ಓವರ್ ಆಗುವ ಹೊತ್ತಿಗೆ 41 ರನ್ ಗಳಿಸಿದ್ದಾಗ ಸಿರಾಜ್ ಬೌಲಿಂಗ್​ನಲ್ಲಿ ಶಫೀಖ್ (20) ಎಲ್​ಬಿ ಬಲೆಗೆ ಸಿಲುಕಿದರು. ನಂತರ ಇಮಾಮ್ (36) ಹಾರ್ದಿಕ್ ಪಾಂಡ್ಯ ಬೌಲಿಂಗ್​ನಲ್ಲಿ ಕೀಪರ್ ರಾಹುಲ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಆದರೆ, ಈ ಸಂದರ್ಭ ಜೊತೆಯಾದ ಪಾಕ್ ಅನುಭವಿ ಬ್ಯಾಟರ್​ಗಳಾದ ನಾಯಕ ಬಾಬರ್ ಅಝಂ ಹಾಗೂ ಮೊಹಮ್ಮದ್ ರಿಝ್ವಾನ್ ಎಚ್ಚರಿಕೆಯ ಆಟ ಪ್ರದರ್ಶಿಸಿದರು.

ಭಾರತ-ಪಾಕಿಸ್ತಾನ ಪಂದ್ಯ ಆರಂಭಕ್ಕೂ ಮುನ್ನ ಅಪರೂಪದ ಘಟನೆ: ರಾಷ್ಟ್ರಗೀತೆ ಹಾಡುವಾಗ ಏನಾಯಿತು ನೋಡಿ

ಭಾರತೀಯ ಬೌಲರ್​ಗಳ ಮರ್ಮವನ್ನು ಅರಿತ ಬಾಬರ್-ರಿಝ್ವಾನ್ ಜೋಡಿ 82 ರನ್​ಗಳ ಕಾಣಿಕೆ ನೀಡಿದರು. ಫಾರ್ಮ್ ವೈಫಲ್ಯದಿಂದ ಬಳಲುತ್ತಿದ್ದ ಬಾಬರ್ ಅರ್ಧಶತಕ ಸಿಡಿಸಿದರು. ಆದರೆ, 50 ರನ್ ಗಳಿಸಿದ ಕೂಡಲೇ ಬಾಬರ್ ಅವರು ಸಿರಾಜ್ ಬೌಲಿಂಗ್​ನಲ್ಲಿ ಬೌಲ್ಡ್ ಆದರು. ಇದರ ಬೆನ್ನಲ್ಲೆ ಕುಲ್ದೀಪ್, ಸೌದ್ ಶಕೀಲ್ (6) ಅವರನ್ನು ಎಲ್​ಬಿಡಬ್ಲ್ಯೂ ಮಾಡಿದರೆ, ಇಫ್ತಿಖರ್ ಅಹ್ಮದ್​ರನ್ನು (4) ಬೌಲ್ಡ್ ಮಾಡಿದರು. ಅತ್ತ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದ ರಿಝ್ವಾನ್ 49 ರನ್ ಗಳಿಸಿದ್ದಾಗ ಬುಮ್ರಾ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಶಬಾದ್ ಖಾನ್ ಕೂಡ 2 ರನ್​ಗೆ ಔಟಾದರು.

155 ರನ್​ಗೆ 3ನೇ ವಿಕೆಟ್ ಕಳೆದುಕೊಂಡ ಪಾಕಿಸ್ತಾನ 171 ರನ್ ಆಗುವ ಹೊತ್ತಿಗೆ 7 ವಿಕೆಟ್ ಪತನಗೊಂಡಿತು. ದಿಢೀರ್ ಕುಸಿತದಿಂದ ಬಾಬರ್ ಪಡೆ ಮೇಲೇಳಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 42.5 ಓವರ್​ಗಳಲ್ಲಿ 191 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಜಸ್​ಪ್ರಿತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ 2 ವಿಕೆಟ್ ಕಿತ್ತರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Sat, 14 October 23

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ