AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಭಾರತ-ಪಾಕಿಸ್ತಾನ್ ತಂಡಗಳ ಚಿಂತೆ ಹೆಚ್ಚಿಸಿದ ಸೌತ್ ಆಫ್ರಿಕಾ

India vs Pakistan: ಭಾರತ ಮತ್ತು ಪಾಕಿಸ್ತಾನ್ ತಂಡಗಳು ಟಿ20 ವಿಶ್ವಕಪ್​ನಲ್ಲಿ ಒಟ್ಟು 7 ಬಾರಿ ಸೆಣಸಿದೆ. ಈ ವೇಳೆ ಟೀಮ್ ಇಂಡಿಯಾ 5 ಬಾರಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ಪಾಕಿಸ್ತಾನ್ ತಂಡ ಗೆದ್ದಿರುವುದು ಕೇವಲ ಒಂದು ಬಾರಿ ಮಾತ್ರ. ಇನ್ನೊಂದು ಪಂದ್ಯವು ಟೈನಲ್ಲಿ ಅಂತ್ಯಗೊಂಡಿತ್ತು. ಈ ಟೈ ಪಂದ್ಯದಲ್ಲಿ ಬೌಲ್​ ಔಟ್ ಮೂಲಕ ಭಾರತ ತಂಡ ಜಯ ಸಾಧಿಸಿತ್ತು.

India vs Pakistan: ಭಾರತ-ಪಾಕಿಸ್ತಾನ್ ತಂಡಗಳ ಚಿಂತೆ ಹೆಚ್ಚಿಸಿದ ಸೌತ್ ಆಫ್ರಿಕಾ
IND vs PAK- SA
ಝಾಹಿರ್ ಯೂಸುಫ್
|

Updated on: Jun 09, 2024 | 9:59 AM

Share

T20 World Cup 2024: ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ನ್ಯೂಯಾರ್ಕ್​ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಉಭಯ ತಂಡಗಳಿಗೆ ಹೊಸ ಚಿಂತೆ ಶುರುವಾಗಿದೆ. ಹೀಗೆ ದಿಢೀರ್ ಚಿಂತೆ ಶುರುವಾಗಲು ಕಾರಣ ಸೌತ್ ಆಫ್ರಿಕಾ ತಂಡದ ಪ್ರದರ್ಶನ.

ಹೌದು, ಶನಿವಾರ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೌತ್ ಆಫ್ರಿಕಾ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನೆದರ್​ಲೆಂಡ್ಸ್ ತಂಡ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 103 ರನ್​ಗಳಿಸಲಷ್ಟೇ ಶಕ್ತರಾದರು.

ಈ ಸುಲಭ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ ಕೂಡ ರನ್​ ಗಳಿಸಲು ಪರದಾಡಿದ್ದು ಅಚ್ಚರಿಗೆ ಕಾರಣವಾಗಿತ್ತು. ಬಲಿಷ್ಠ ದಾಂಡಿಗರನ್ನೇ ಹೊಂದಿರುವ ಸೌತ್ ಆಫ್ರಿಕಾ ತಂಡವು ಪವರ್​ಪ್ಲೇನಲ್ಲಿ ಕಲೆಹಾಕಿದ್ದು ಕೇವಲ 16 ರನ್​ಗಳು ಮಾತ್ರ.

ಇನ್ನು 104 ರನ್​ಗಳ ಗುರಿಯನ್ನು ಮುಟ್ಟಲು ಬರೋಬ್ಬರಿ 18.5 ಓವರ್​ಗಳನ್ನು ತೆಗೆದುಕೊಂಡಿದ್ದರು. ಅದರಲ್ಲೂ ಹೊಡಿಬಡಿ ದಾಂಡಿಗನಂದೇ ಖ್ಯಾತಿ ಪಡೆದಿರುವ ಡೇವಿಡ್ ಮಿಲ್ಲರ್ ಅವರ ಸಾಹಸದಿಂದ ಸೌತ್ ಆಫ್ರಿಕಾ ತಂಡ ಈ ಪಂದ್ಯವನ್ನು ಗೆಲ್ಲಲು ಸಾಧ್ಯವಾಯಿತು ಎಂದರೆ ತಪ್ಪಾಗಲಾರದು.

ಏಕೆಂದರೆ ಈ ಪಂದ್ಯದಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಲು ಡೇವಿಡ್ ಮಿಲ್ಲರ್ ಅಜೇಯ 59 ರನ್ ಬಾರಿಸಿದ್ದರು. ಆದರೆ ಈ ಅರ್ಧಶತಕದ ಇನಿಂಗ್ಸ್​ಗಾಗಿ ತೆಗೆದುಕೊಂಡಿರುವುದು ಬರೋಬ್ಬರಿ 51 ಎಸೆತಗಳನ್ನು ಎಂಬುದು ಇಲ್ಲಿ ಉಲ್ಲೇಖಾರ್ಹ.

ಅಂದರೆ ಸ್ಪೋಟಕ ದಾಂಡಿಗನೆಂದೇ ಖ್ಯಾತಿ ಪಡೆದಿರುವ ಡೇವಿಡ್ ಮಿಲ್ಲರ್ 51 ಎಸೆತಗಳಲ್ಲಿ 59 ರನ್​ ಬಾರಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ 6 ವಿಕೆಟ್ ಕಳೆದುಕೊಂಡು ಸೌತ್ ಆಫ್ರಿಕಾ ತಂಡವು 18.5 ಓವರ್​ಗಳಲ್ಲಿ ಗುರಿ ಮುಟ್ಟಿತ್ತು.

ಇಂಡೊ-ಪಾಕ್ ಚಿಂತೆಗೆ ಕಾರಣವೇನು?

ಬಲಿಷ್ಠ ದಾಂಡಿಗರ ಬಳಗ ಹೊಂದಿರುವ ಸೌತ್ ಆಫ್ರಿಕಾ ತಂಡ ರನ್​ ಗಳಿಸಲು ಪರದಾಡಿದ ಇದೇ ಮೈದಾನದಲ್ಲೇ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗುತ್ತಿದೆ. ಇಲ್ಲಿ ಟೀಮ್ ಇಂಡಿಯಾ ಈಗಾಗಲೇ ಒಂದು ಪಂದ್ಯವಾಡಿದ್ದು, ಈ ವೇಳೆಯೂ ಬ್ಯಾಟಿಂಗ್ ಕಷ್ಟಕರವಾಗಿತ್ತು ಎಂಬುದನ್ನು ಖುದ್ದು ರೋಹಿತ್ ಶರ್ಮಾ ಹೇಳಿದ್ದಾರೆ.

ಇದಾಗ್ಯೂ ಭಾರತ ಮತ್ತು ಪಾಕ್ ನಡುವಣ ಪಂದ್ಯಕ್ಕೂ ಮುನ್ನ ನಸ್ಸೌ ಮೈದಾನದ ಪಿಚ್​ನಲ್ಲಿ ಕೆಲ ಮಾರ್ಪಾಡಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಶನಿವಾರ ನಡೆದ ನೆದರ್​ಲೆಂಡ್ಸ್ ವಿರುದ್ದದ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ರನ್​ ಗಳಿಸಲು ಪರದಾಡುತ್ತಿರುವುದು ಕಂಡು ಬಂದಿದೆ. ಹೀಗಾಗಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದಲ್ಲೂ ಬ್ಯಾಟರ್​ಗಳಿಂದ ಅಬ್ಬರ ನಿರೀಕ್ಷಿಸುವಂತಿಲ್ಲ.

ಇದನ್ನೂ ಓದಿ: Babar Azam: ಬಾಬರ್ ಅಬ್ಬರಕ್ಕೆ ಕಿಂಗ್ ಕೊಹ್ಲಿಯ ದಾಖಲೆ ಉಡೀಸ್

ಹೀಗಾಗಿ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಬೃಹತ್ ಮೊತ್ತ ಮೂಡಿಬರುವ ಸಾಧ್ಯತೆ ತುಂಬಾ ಕಡಿಮೆ. ಅದರಲ್ಲೂ ಕ್ರೀಸ್ ಕಚ್ಚಿ ನಿಂತು ಆಡಬೇಕಾದ ಅನಿವಾರ್ಯತೆ ಭಾರತ ಮತ್ತು ಪಾಕಿಸ್ತಾನ್ ತಂಡಗಳ ಬ್ಯಾಟರ್​ಗಳ ಮುಂದಿದೆ. ಹೀಗಾಗಿ ತಾಳ್ಮೆಯುತ ಬ್ಯಾಟಿಂಗ್ ಪ್ರದರ್ಶಿಸುವ ತಂಡ ನಸ್ಸೌ ಸ್ಟೇಡಿಯಂನಲ್ಲಿ ವಿಜಯ ಪತಾಕೆ ಹಾರಿಸುವುದನ್ನು ಎದುರು ನೋಡಬಹುದು.

ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ