AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಭಾರತ-ಪಾಕಿಸ್ತಾನ್ ಕದನ ಕುತೂಹಲದ ಪ್ರೊಮೊ ಬಿಡುಗಡೆ

India Vs Pakistan: ಸೆಪ್ಟೆಂಬರ್ 2 ರಂದು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಡಲಿದ್ದು, ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಎದುರಿಸಲಿರುವುದು ವಿಶೇಷ. ಅಂದರೆ ಪಾಕ್ ವಿರುದ್ಧ ಕಣಕ್ಕಿಳಿದು ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.

VIDEO: ಭಾರತ-ಪಾಕಿಸ್ತಾನ್ ಕದನ ಕುತೂಹಲದ ಪ್ರೊಮೊ ಬಿಡುಗಡೆ
India Vs Pakistan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 15, 2023 | 7:20 PM

ಏಷ್ಯಾಕಪ್​ನ ಹೈವೋಲ್ಟೇಜ್ ಕದನ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ಪ್ರೊಮೊ ವಿಡಿಯೋವನ್ನು ಸ್ಟಾರ್​ ಸ್ಪೋರ್ಟ್ಸ್ ಬಿಡುಗಡೆ ಮಾಡಿದೆ. ಈ ಬಹು ನಿರೀಕ್ಷಿತ ಪಂದ್ಯದ ಪ್ರೊಮೊ ವಿಡಿಯೋವನ್ನು ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯಂದೇ ರಿಲೀಸ್ ಮಾಡಿರುವುದು ವಿಶೇಷ.

ಸಾಂಪ್ರದಾಯಿಕ ಎದುರಾಳಿಗಳ ಮತ್ತೊಂದು ಮುಖಾಮುಖಿಯನ್ನು ಪ್ರತಿನಿಧಿಸುವ ಈ ಪ್ರೊಮೊ ವಿಡಿಯೋದಲ್ಲಿ ಭಾರತೀಯ ದೇಶಭಕ್ತಿಯನ್ನು ಎತ್ತಿ ಹಿಡಿಯಲಾಗಿದೆ. ಅಲ್ಲದೆ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಮೆನ್ ಇನ್ ಬ್ಲೂ (ಟೀಮ್ ಇಂಡಿಯಾ) ವನ್ನು ಹುರಿದುಂಬಿಸುವಂತೆ ವಿಡಿಯೋದಲ್ಲಿ ತಿಳಿಸಲಾಗಿದೆ.

ಇನ್ನು ಏಷ್ಯಾಕಪ್​ಗಾಗಿ ಈಗಾಗಲೇ ಪಾಕಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಈ ಬಾರಿ ಕೂಡ ಬಾಬರ್ ಆಝಂ ತಂಡವನ್ನು ಮುನ್ನಡೆಸಲಿದ್ದು, ಉಪನಾಯಕನಾಗಿ ಶಾದಾಬ್ ಖಾನ್ ಕಾಣಿಸಿಕೊಳ್ಳಲಿದ್ದಾರೆ. ಮತ್ತೊಂದೆಡೆ ಭಾರತ ಇನ್ನೂ ಕೂಡ ಏಷ್ಯಾಕಪ್ ತಂಡವನ್ನು ಪ್ರಕಟಿಸಿಲ್ಲ. ಪ್ರಸ್ತುತ ಮಾಹಿತಿ ಪ್ರಕಾರ ಆಗಸ್ಟ್ 20 ರಂದು ಟೀಮ್ ಇಂಡಿಯಾವನ್ನು ಘೋಷಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಮೊದಲ ಮುಖಾಮುಖಿ:

ಈ ಬಾರಿಯ ಏಷ್ಯಾಕಪ್​ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಪಾಕಿಸ್ತಾನದ ಮುಲ್ತಾನ್​ನಲ್ಲಿ ಜರುಗಲಿದೆ. ಅಂದರೆ ಈ ಸಲ ಏಷ್ಯಾಕಪ್ ಹೈಬ್ರಿಡ್ ಮಾದರಿಯಲ್ಲಿ ಜರುಗುತ್ತಿದ್ದು, 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದರೆ, ಉಳಿದ ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸಲಿದೆ.

ಅದರಂತೆ ಸೆಪ್ಟೆಂಬರ್ 2 ರಂದು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಡಲಿದ್ದು, ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಎದುರಿಸಲಿರುವುದು ವಿಶೇಷ. ಅಂದರೆ ಪಾಕ್ ವಿರುದ್ಧ ಕಣಕ್ಕಿಳಿದು ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.

ಇದನ್ನೂ ಓದಿ: Asia Cup 2023 Schedule: ಏಷ್ಯಾಕಪ್ ವೇಳಾಪಟ್ಟಿ ಪ್ರಕಟ

ಪಾಕಿಸ್ತಾನ್ ತಂಡ: ಅಬ್ದುಲ್ಲಾ ಶಫೀಕ್, ಫಖರ್ ಝಮಾನ್, ಇಮಾಮ್-ಉಲ್-ಹಕ್, ಬಾಬರ್ ಆಝಂ (ನಾಯಕ), ಸಲ್ಮಾನ್ ಅಲಿ ಅಘಾ, ಇಫ್ತಿಕರ್ ಅಹ್ಮದ್, ತಯ್ಯಬ್ ತಾಹಿರ್, ಸೌದ್ ಶಕೀಲ್, ಮೊಹಮ್ಮದ್ ರಿಝ್ವಾನ್, ಮೊಹಮ್ಮದ್ ಹ್ಯಾರಿಸ್, ಶಾದಾಬ್ ಖಾನ್, ಮೊಹಮ್ಮದ್ ನವಾಝ್, ಉಸಾಮಾ ಅಶ್ರಫ್, ಹ್ಯಾರಿಸ್ ರೌಫ್, ಮೊಹಮ್ಮದ್ ವಾಸಿಂ, ನಸೀಮ್ ಶಾ, ಶಾಹೀನ್ ಅಫ್ರಿದಿ.

ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ