AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಭಾರತ-ಪಾಕಿಸ್ತಾನ್ ಕದನ ಕುತೂಹಲದ ಪ್ರೊಮೊ ಬಿಡುಗಡೆ

India Vs Pakistan: ಸೆಪ್ಟೆಂಬರ್ 2 ರಂದು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಡಲಿದ್ದು, ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಎದುರಿಸಲಿರುವುದು ವಿಶೇಷ. ಅಂದರೆ ಪಾಕ್ ವಿರುದ್ಧ ಕಣಕ್ಕಿಳಿದು ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.

VIDEO: ಭಾರತ-ಪಾಕಿಸ್ತಾನ್ ಕದನ ಕುತೂಹಲದ ಪ್ರೊಮೊ ಬಿಡುಗಡೆ
India Vs Pakistan
TV9 Web
| Edited By: |

Updated on: Aug 15, 2023 | 7:20 PM

Share

ಏಷ್ಯಾಕಪ್​ನ ಹೈವೋಲ್ಟೇಜ್ ಕದನ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ಪ್ರೊಮೊ ವಿಡಿಯೋವನ್ನು ಸ್ಟಾರ್​ ಸ್ಪೋರ್ಟ್ಸ್ ಬಿಡುಗಡೆ ಮಾಡಿದೆ. ಈ ಬಹು ನಿರೀಕ್ಷಿತ ಪಂದ್ಯದ ಪ್ರೊಮೊ ವಿಡಿಯೋವನ್ನು ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯಂದೇ ರಿಲೀಸ್ ಮಾಡಿರುವುದು ವಿಶೇಷ.

ಸಾಂಪ್ರದಾಯಿಕ ಎದುರಾಳಿಗಳ ಮತ್ತೊಂದು ಮುಖಾಮುಖಿಯನ್ನು ಪ್ರತಿನಿಧಿಸುವ ಈ ಪ್ರೊಮೊ ವಿಡಿಯೋದಲ್ಲಿ ಭಾರತೀಯ ದೇಶಭಕ್ತಿಯನ್ನು ಎತ್ತಿ ಹಿಡಿಯಲಾಗಿದೆ. ಅಲ್ಲದೆ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಮೆನ್ ಇನ್ ಬ್ಲೂ (ಟೀಮ್ ಇಂಡಿಯಾ) ವನ್ನು ಹುರಿದುಂಬಿಸುವಂತೆ ವಿಡಿಯೋದಲ್ಲಿ ತಿಳಿಸಲಾಗಿದೆ.

ಇನ್ನು ಏಷ್ಯಾಕಪ್​ಗಾಗಿ ಈಗಾಗಲೇ ಪಾಕಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಈ ಬಾರಿ ಕೂಡ ಬಾಬರ್ ಆಝಂ ತಂಡವನ್ನು ಮುನ್ನಡೆಸಲಿದ್ದು, ಉಪನಾಯಕನಾಗಿ ಶಾದಾಬ್ ಖಾನ್ ಕಾಣಿಸಿಕೊಳ್ಳಲಿದ್ದಾರೆ. ಮತ್ತೊಂದೆಡೆ ಭಾರತ ಇನ್ನೂ ಕೂಡ ಏಷ್ಯಾಕಪ್ ತಂಡವನ್ನು ಪ್ರಕಟಿಸಿಲ್ಲ. ಪ್ರಸ್ತುತ ಮಾಹಿತಿ ಪ್ರಕಾರ ಆಗಸ್ಟ್ 20 ರಂದು ಟೀಮ್ ಇಂಡಿಯಾವನ್ನು ಘೋಷಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಮೊದಲ ಮುಖಾಮುಖಿ:

ಈ ಬಾರಿಯ ಏಷ್ಯಾಕಪ್​ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಪಾಕಿಸ್ತಾನದ ಮುಲ್ತಾನ್​ನಲ್ಲಿ ಜರುಗಲಿದೆ. ಅಂದರೆ ಈ ಸಲ ಏಷ್ಯಾಕಪ್ ಹೈಬ್ರಿಡ್ ಮಾದರಿಯಲ್ಲಿ ಜರುಗುತ್ತಿದ್ದು, 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದರೆ, ಉಳಿದ ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸಲಿದೆ.

ಅದರಂತೆ ಸೆಪ್ಟೆಂಬರ್ 2 ರಂದು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಡಲಿದ್ದು, ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಎದುರಿಸಲಿರುವುದು ವಿಶೇಷ. ಅಂದರೆ ಪಾಕ್ ವಿರುದ್ಧ ಕಣಕ್ಕಿಳಿದು ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.

ಇದನ್ನೂ ಓದಿ: Asia Cup 2023 Schedule: ಏಷ್ಯಾಕಪ್ ವೇಳಾಪಟ್ಟಿ ಪ್ರಕಟ

ಪಾಕಿಸ್ತಾನ್ ತಂಡ: ಅಬ್ದುಲ್ಲಾ ಶಫೀಕ್, ಫಖರ್ ಝಮಾನ್, ಇಮಾಮ್-ಉಲ್-ಹಕ್, ಬಾಬರ್ ಆಝಂ (ನಾಯಕ), ಸಲ್ಮಾನ್ ಅಲಿ ಅಘಾ, ಇಫ್ತಿಕರ್ ಅಹ್ಮದ್, ತಯ್ಯಬ್ ತಾಹಿರ್, ಸೌದ್ ಶಕೀಲ್, ಮೊಹಮ್ಮದ್ ರಿಝ್ವಾನ್, ಮೊಹಮ್ಮದ್ ಹ್ಯಾರಿಸ್, ಶಾದಾಬ್ ಖಾನ್, ಮೊಹಮ್ಮದ್ ನವಾಝ್, ಉಸಾಮಾ ಅಶ್ರಫ್, ಹ್ಯಾರಿಸ್ ರೌಫ್, ಮೊಹಮ್ಮದ್ ವಾಸಿಂ, ನಸೀಮ್ ಶಾ, ಶಾಹೀನ್ ಅಫ್ರಿದಿ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು