AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಭಾರತ-ಪಾಕಿಸ್ತಾನ್ ತಂಡಗಳು ಪ್ರಕಟ: ಯಾರು ಬಲಿಷ್ಠ..?

India vs Pakistan Squad For Asia Cup 2022: ದುಬೈ ಇಂಟರ್​ನ್ಯಾಷನಲ್ ಮೈದಾನದಲ್ಲಿ ಭಾನುವಾರ (ಆಗಸ್ಟ್ 28) ನಡೆಯಲಿರುವ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನಂತು ನಿರೀಕ್ಷಿಸಬಹುದು.

India vs Pakistan: ಭಾರತ-ಪಾಕಿಸ್ತಾನ್ ತಂಡಗಳು ಪ್ರಕಟ: ಯಾರು ಬಲಿಷ್ಠ..?
India vs Pakistan
TV9 Web
| Updated By: ಝಾಹಿರ್ ಯೂಸುಫ್|

Updated on: Aug 10, 2022 | 10:55 AM

Share

ಆಗಸ್ಟ್ 28 ರಂದು ನಡೆಯಲಿರುವ ಭಾರತ-ಪಾಕಿಸ್ತಾನ್ ನಡುವಣ ಏಷ್ಯಾಕಪ್ ಟಿ20 ಕ್ರಿಕೆಟ್​ ಕದನಕ್ಕಾಗಿ ದಿನಗಣನೆ ಶುರುವಾಗಿದೆ. ಈಗಾಗಲೇ ಉಭಯ ತಂಡಗಳು ಬಲಿಷ್ಠ ತಂಡಗಳನ್ನೇ ಪ್ರಕಟಿಸಿದ್ದು, ಅದರಲ್ಲೂ ಪಾಕಿಸ್ತಾನ್ ತಂಡವು ಕಳೆದ ಬಾರಿ ಟಿ20 ವಿಶ್ವಕಪ್​ನಲ್ಲಿ ಆಡಿದ ಆಟಗಾರರನ್ನೇ ಈ ಸಲ ಕೂಡ ತಂಡಕ್ಕೆ ಆಯ್ಕೆ ಮಾಡಿಕೊಂಡಿದೆ. ಅಂದರೆ ಭಾರತದ ವಿರುದ್ದ ಟಿ20 ವಿಶ್ವಕಪ್​ 2021 ರಲ್ಲಿ ಆಡಿದ ಬಹುತೇಕ ಆಟಗಾರರು ಈ ಬಾರಿ ಕೂಡ ಏಷ್ಯಾಕಪ್​ನಲ್ಲಿ ಕಣಕ್ಕಿಳಿಯಲಿದ್ದಾರೆ. ಇತ್ತ ಟೀಮ್ ಇಂಡಿಯಾ ಕೆಲ ಬದಲಾವಣೆಗಳನ್ನು ಮಾಡಿಕೊಂಡಿದ್ದು, ಈ ಮೂಲಕ ಕಳೆದ ಬಾರಿಯ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ.

ಇಲ್ಲಿ ಮುಖ್ಯವಾಗಿ ಟೀಮ್ ಇಂಡಿಯಾ ನಾಯಕ ಬದಲಾಗಿದೆ. ಅಂದರೆ ಟಿ20 ವಿಶ್ವಕಪ್​ ವೇಳೆ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಿದ್ದರು. ಇದೀಗ ರೋಹಿತ್ ಶರ್ಮಾ ಭಾರತ ತಂಡದ ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಟೀಮ್ ಇಂಡಿಯಾದಲ್ಲಿ ಈ ಬಾರಿ ವೇಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುತ್ತಿಲ್ಲ. ಹಾಗೆಯೇ ಸ್ಪಿನ್ನರ್ ಯುಜುವೇಂದ್ರ ಚಹಲ್ ತಂಡಕ್ಕೆ ಮರಳಿದ್ದಾರೆ. ಇದಲ್ಲದೆ ತಂಡದಲ್ಲಿ ಹೊಸ ಫಿನಿಶರ್ ಆಗಿ ದಿನೇಶ್ ಕಾರ್ತಿಕ್ ಕಾಣಿಸಿಕೊಂಡಿದ್ದಾರೆ. ಜೊತೆಗೆ ದೀಪಕ್ ಹೂಡಾ, ಅವೇಶ್ ಖಾನ್, ಅರ್ಷದೀಪ್ ಸಿಂಗ್ ಹಾಗೂ ರವಿ ಬಿಷ್ಣೋಯ್ ಅವರ ಎಂಟ್ರಿಯಾಗಿದೆ. ಹೀಗಾಗಿ ಈ ಬಾರಿ ಪ್ಲೇಯಿಂಗ್ ಇಲೆವೆನ್​ನಲ್ಲೂ ಮಹತ್ವದ ಬದಲಾವಣೆಯಾಗಲಿದೆ.

ಅತ್ತ ಪಾಕಿಸ್ತಾನ್ ತಂಡದಿಂದ ಆಲ್​ರೌಂಡರ್ ಶೊಯೇಬ್ ಮಲಿಕ್ ಹಾಗೂ ವೇಗಿ ಹಸನ್ ಅಲಿ ಹೊರಬಿದ್ದಿದ್ದಾರೆ. ಅವರ ಬದಲಿಗೆ ಯುವ ವೇಗಿ ನಸೀಮ್ ಶಾ ಹಾಗೂ ಸ್ಪಿನ್ನರ್ ಉಸ್ಮಾನ್ ಖಾದಿರ್ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಟಿ20 ವಿಶ್ವಕಪ್​ನಲ್ಲಿ ಆಡಿದ ಬಳಗವನ್ನೇ ಇಲ್ಲೂ ಕೂಡ ಮುಂದುವರೆಸಿದ್ದಾರೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇಲ್ಲಿ ಮೇಲ್ನೋಟಕ್ಕೆ ಉಭಯ ತಂಡಗಳು ಬಲಿಷ್ಠವಾಗಿದ್ದು, ಅದರಲ್ಲೂ ಟೀಮ್ ಇಂಡಿಯಾ ಈ ಬಾರಿ ಪ್ರಮುಖ ಬದಲಾವಣೆ ಮಾಡಿಕೊಂಡು ಮತ್ತಷ್ಟು ಬಲಾರ್ಢ್ಯವಾಗಿ ಕಾಣಿಸಿಕೊಂಡಿದೆ. ಹೀಗಾಗಿ ದುಬೈ ಇಂಟರ್​ನ್ಯಾಷನಲ್ ಮೈದಾನದಲ್ಲಿ ಭಾನುವಾರ (ಆಗಸ್ಟ್ 28) ನಡೆಯಲಿರುವ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನಂತು ನಿರೀಕ್ಷಿಸಬಹುದು.

ಏಷ್ಯಾಕಪ್​ಗಾಗಿ ಪಾಕಿಸ್ತಾನ್ ತಂಡ ಹೀಗಿದೆ:

ಬಾಬರ್ ಆಜಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್, ವಾಸಿಮ್ ಜೂನಿಯರ್, ನಸೀಮ್ ಶಾ, ಶಾಹೀನ್ ಶಾ ಆಫ್ರಿದಿ, ಶಾನವಾಜ್ ದಹಾನಿ ಮತ್ತು ಉಸ್ಮಾನ್ ಖಾದಿರ್.

ಏಷ್ಯಾಕಪ್​ಗಾಗಿ ಟೀಮ್ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಮೀಸಲು ಆಟಗಾರರು: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್ ಹಾಗೂ ದೀಪಕ್ ಚಹರ್.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ