India vs Pakistan: ಭಾರತ-ಪಾಕಿಸ್ತಾನ್​​ ಕದನಕ್ಕೆ ಮಳೆ ಭೀತಿ: ರದ್ದಾಗುತ್ತಾ ಪಂದ್ಯ?

ಆಕ್ಯುವೆದರ್​ ಪ್ರಕಾರ ಅಮೆರಿಕ ಕಾಲಮಾನದಂತೆ ಪಂದ್ಯದ ಪ್ರಾರಂಭದ ಸಮಯದಲ್ಲಿ ಗುಡುಗು ಸಿಡಿಲಿನೊಂದಿಗೆ ಮಳೆ ಆಗುವ ಸಾಧ್ಯತೆ ಇದೆ. ಭಾನುವಾರ ಬೆಳಿಗ್ಗೆ 10 ಗಂಟೆಗೆ ನ್ಯೂಯಾರ್ಕ್‌ನಲ್ಲಿ ಶೇ 40 ರಷ್ಟು ಮಳೆ ಸಾಧ್ಯತೆ ಇದೆ. ಆದಾಗ್ಯೂ, ಮುಂದಿನ ಮೂರು ಗಂಟೆಗಳಲ್ಲಿ ಮಳೆ ಪ್ರಮಾಣ ಕಡೆಮೆ ಆಗಲಿದೆ. ಹೀಗಾಗಿ ಒಟ್ಟಿನಲ್ಲಿ ಸುಮಾರು 1 ಗಂಟೆ ಮಳೆ ಆಗುವ ನಿರೀಕ್ಷೆಯಿದೆ.

India vs Pakistan: ಭಾರತ-ಪಾಕಿಸ್ತಾನ್​​ ಕದನಕ್ಕೆ ಮಳೆ ಭೀತಿ: ರದ್ದಾಗುತ್ತಾ ಪಂದ್ಯ?
ಭಾರತ-ಪಾಕಿಸ್ತಾನ್​​ ಕದನಕ್ಕೆ ಮಳೆ ಭೀತಿ: ರದ್ದಾಗುತ್ತಾ ಪಂದ್ಯ?
Follow us
|

Updated on: Jun 09, 2024 | 4:50 PM

ಐಸಿಸಿ ಪುರುಷರ ಟಿ 20 ವಿಶ್ವಕಪ್ (T20 World Cup)​​ ಈಗಾಗಲೇ ಶುರುವಾಗಿದೆ. ಆದರೆ ಕ್ರಿಕೆಟ್ ಪ್ರೇಮಿಗಳಿಗೆ ಇಂದು ಹಬ್ಬವೆಂದು ಹೇಳಬಹುದು. ಏಕೆಂದರೆ ಭಾರತ ವರ್ಸಸ್ ಪಾಕಿಸ್ತಾನ (IND vs PAK) ನಡುವಿನ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಪಾಕ್ ವಿರುದ್ಧ ಗೆಲ್ಲಲು ನಾಯಕ ರೋಹಿತ್ ಶರ್ಮಾ ಪಡೆ ಸಜ್ಜಾಗಿದೆ. ಇಂದಿನ ಹೈವೋಲ್ಟೇಜ್ ಪಂದ್ಯಕ್ಕಾಗಿ ವಿಶ್ವದಾದ್ಯಂತ ಅಭಿಮಾನಿಗಳು ಕಾತುರರಾಗಿದ್ದಾರೆ. ನ್ಯೂಯಾರ್ಕ್‌ನ ನಸ್ಸೌ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಮಳೆರಾಯ ಕೃಪೆ ತೋರಬೇಕಾಗಿದೆ. ಹಾಗಾದ್ರೆ ಮಹತ್ವದ ಪಂದ್ಯಕ್ಕೆ ಹವಾಮಾನ ಹೇಗಿರಲಿದೆ ತಿಳಿಯಿರಿ.

ಹವಾಮಾನ ವರದಿ:

ಆಕ್ಯುವೆದರ್​ ಪ್ರಕಾರ ಅಮೆರಿಕ ಕಾಲಮಾನದಂತೆ ಪಂದ್ಯದ ಪ್ರಾರಂಭದ ಸಮಯದಲ್ಲಿ ಗುಡುಗು ಸಿಡಿಲಿನೊಂದಿಗೆ ಮಳೆ ಆಗುವ ಸಾಧ್ಯತೆ ಇದೆ. ಭಾನುವಾರ ಬೆಳಿಗ್ಗೆ 10 ಗಂಟೆಗೆ ನ್ಯೂಯಾರ್ಕ್‌ನಲ್ಲಿ ಶೇ 40 ರಷ್ಟು ಮಳೆ ಸಾಧ್ಯತೆ ಇದೆ. ಆದಾಗ್ಯೂ, ಮುಂದಿನ ಮೂರು ಗಂಟೆಗಳಲ್ಲಿ ಮಳೆ ಪ್ರಮಾಣ ಕಡೆಮೆ ಆಗಲಿದೆ. ಹೀಗಾಗಿ ಒಟ್ಟಿನಲ್ಲಿ ಸುಮಾರು 1 ಗಂಟೆ ಮಳೆ ಆಗುವ ನಿರೀಕ್ಷೆಯಿದೆ.

ಇದನ್ನೂ ಓದಿ: India vs Pakistan: ಭಾರತ vs ಪಾಕಿಸ್ತಾನ್: ಹೈವೊಲ್ಟೇಜ್ ಪಂದ್ಯಕ್ಕೆ ಕೌಂಟ್ ಡೌನ್ ಶುರು

ವೆದರ್. ಕಾಮ್​ ಪ್ರಕಾರ ಸುಮಾರು 10 ಗಂಟೆಗೆ ತುಂತುರು ಮಳೆ ಆಗಲಿದ್ದು, ನಂತರ ಹೆಚ್ಚಾಗಬಹುದು. ಇನ್ನು ಪಂದ್ಯವು ರದ್ದಾಗುವ ಸಾಧ್ಯತೆಯಿಲ್ಲ ಮತ್ತು ಪೂರ್ಣ 40 ಓವರ್ಗಳ ಪಂದ್ಯ ನಡೆಯದಿದ್ದರೂ ಸಹ ಫಲಿತಾಂಶವು ಕಾರ್ಡ್ನಲ್ಲಿದೆ. ನಸ್ಸೌ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯಾವಳಿಯಲ್ಲಿ ಪಿಚ್ ಈಗಾಗಲೇ ಸಮಸ್ಯೆಯಾಗಿದೆ.

ಇದನ್ನೂ ಓದಿ: India vs Pakistan: ಟೀಮ್ ಇಂಡಿಯಾ ಕೈಯಲ್ಲಿ ಪಾಕಿಸ್ತಾನ್ ತಂಡದ ಟಿ20 ವಿಶ್ವಕಪ್ ಭವಿಷ್ಯ

ಈ ಟಿ20 ವಿಶ್ವಕಕ್​ನಲ್ಲಿ ಭಾರತದ ಮೊದಲ ಪಂದ್ಯ ಜೂನ್ 5 ರಂದು ನಡೆದಿತ್ತು. ಐರ್ಲೆಂಡ್ ವಿರುದ್ಧ ಆಡುವ ಮೂಲಕ ಈ ಬಾರಿಯ ಟಿ20 ವಿಶ್ವಕಪ್​ಗೆ ಭಾರತ ಪಾದಾರ್ಪಣೆ ಮಾಡಿತ್ತು. ಭಾರತದ ವಿರುದ್ಧ ವಿಶ್ವಕಪ್​​ನಲ್ಲಿ ಸಾಲು ಸಾಲು ಸೋಲುಗಳನ್ನ ಅನುಭವಿಸಿರುವ ಪಾಕಿಸ್ತಾನ, ಈ ಬಾರಿ ಟೀಮ್ ಇಂಡಿಯಾ ವಿರುದ್ಧ ಹಿಂದಿನ ಸೋಲುಗಳ ಸೇಡು ತೀರಿಸಿಕೊಳ್ಳೋಕೆ ಶತಯತ್ನ ನಡೆಸುವುದಕ್ಕೆ ಸಜ್ಜಾಗಿದೆ.

ಆದರೆ ಬಲಿಷ್ಠ ಭಾರತ ತಂಡವನ್ನು ಅದ್ರಲ್ಲೂ ಪಾಕಿಸ್ತಾನದ ವಿರುದ್ಧ ಅತಿಹೆಚ್ಚು ಸ್ಟ್ರೈಕ್ ರೇಟ್ ಹೊಂದಿರೋ ಕಿಂಗ್ ಕೊಹ್ಲಿ ಸೆಣಸಾಡಿ ಜಯಗಳಿಸೋದು ಪಾಕ್ ಪಡೆ ಪಾಲಿಗೆ ಅತಿದೊಡ್ಡ ಸವಾಲಾಗಿ ಪರಿಣಮಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ