AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಪಂದ್ಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಮಂಡಿಯೂರಿದ್ದು ಯಾಕೆ ಗೊತ್ತಾ?

India vs Pakistan, T20 World Cup: ಕಳೆದ ವರ್ಷ ಅಮೆರಿಕದಲ್ಲಿ ನಡೆದ ಕಪ್ಪು ವರ್ಣದ ಜಾರ್ಜ್​ ಫ್ಲಾಯ್ಡ್​ ಎನ್ನುವ ವ್ಯಕ್ತಿಯನ್ನು ಅಲ್ಲಿನ ಬಿಳಿ ವರ್ಣದ ಪೊಲೀಸ್ ಒಬ್ಬ ನಡುರಸ್ತೆಯಲ್ಲಿ ಮೊಣಕಾಲಿನಿಂದ ಕುತ್ತಿಗೆ ಅದುಮಿ ಉಸಿರುಗಟ್ಟಿಸಿ ಕೊಲೆ ಸಾಯಿಸಿದ್ದರು.

India vs Pakistan: ಪಂದ್ಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಮಂಡಿಯೂರಿದ್ದು ಯಾಕೆ ಗೊತ್ತಾ?
Team India
TV9 Web
| Edited By: |

Updated on:Oct 24, 2021 | 11:38 PM

Share

ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ವೇಳೆ ಟೀಮ್ ಇಂಡಿಯಾ ಆಟಗಾರರು ಬ್ಲ್ಯಾಕ್ ಲೈವ್ಸ್​ ಮ್ಯಾಟರ್ ಚಳುವಳಿಗೆ ಬೆಂಬಲ ಸೂಚಿಸಿದರು. ಇದಕ್ಕೂ ಮುನ್ನ ಟಾಸ್ ಗೆದ್ದ ಪಾಕಿಸ್ತಾನ್ ನಾಯಕ ಬಾಬರ್ ಆಜಂ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಲು ಬಂದ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಮೈದಾನದಲ್ಲೇ ಬ್ಲ್ಯಾಕ್ ಲೈವ್ಸ್​ ಮ್ಯಾಟರ್ ( BLM) ಚಳುವಳಿಗೆ ಬೆಂಬಲ ಸೂಚಿಸಿ ಮಂಡಿಯೂರಿದರು. ಇನ್ನು ಉಳಿದ ಟೀಮ್ ಇಂಡಿಯಾ ಆಟಗಾರರು ಡಗೌಟ್‌ನಲ್ಲಿ ಮಂಡಿಯೂರಿ ಬೆಂಬಲ ಪ್ರದರ್ಶಿಸಿದರು. ಇನ್ನು ಪಾಕಿಸ್ತಾನ್ ತಂಡವು ತಮ್ಮ ತಂಡದ ಆಟಗಾರರು ಬಲಗೈಯನ್ನು ಎದೆಯ ಮೇಲಿಟ್ಟು ಬ್ಲ್ಯಾಕ್ ಲೈವ್ಸ್​ ಮ್ಯಾಟರ್ ( BLM) ಚಳುವಳಿ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.

ಕಳೆದ ವರ್ಷ ಅಮೆರಿಕದಲ್ಲಿ  ಕಪ್ಪು ವರ್ಣೀಯ ಜಾರ್ಜ್​ ಫ್ಲಾಯ್ಡ್​ ಎನ್ನುವ ವ್ಯಕ್ತಿಯನ್ನು ಅಲ್ಲಿನ ಬಿಳಿ ವರ್ಣದ ಪೊಲೀಸ್ ಒಬ್ಬ ನಡುರಸ್ತೆಯಲ್ಲಿ ಮೊಣಕಾಲಿನಿಂದ ಕುತ್ತಿಗೆ ಅದುಮಿ ಉಸಿರುಗಟ್ಟಿಸಿ  ಸಾಯಿಸಿದ್ದರು. ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ, ಕಪ್ಪು ವರ್ಣಿಯರ ಮೇಲೆ ಬಿಳಿ ವರ್ಣದವರ ದೌರ್ಜನ್ಯ ಖಂಡಿಸಿ ವಿಶ್ವದಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಇದಕ್ಕೆ ವಿಶ್ವದ ಖ್ಯಾತ ಸೆಲೆಬ್ರಿಟಿಗಳು, ಆಟಗಾರರು ಬೆಂಬಲ ವ್ಯಕ್ತಪಡಿಸಿದ್ದರು.

ಅದರಂತೆ ವೆಸ್ಟ್ ಇಂಡೀಸ್ ಆಟಗಾರರು ತಮ್ಮ ಪಂದ್ಯಗಳ ವೇಳೆ ಮೈದಾನದಲ್ಲಿ ಮಂಡಿಯೂರುವ ಮೂಲಕ ಬ್ಲ್ಯಾಕ್ ಲೈವ್ಸ್​ ಮ್ಯಾಟರ್ ( BLM) ಬೆಂಬಲ ಸೂಚಿಸಿದ್ದರು. ಇನ್ನು ಐಪಿಎಲ್​ನಲ್ಲೂ ಜೇಸನ್ ಹೋಲ್ಡರ್ ಹಾಗೂ ಹಾರ್ದಿಕ್ ಪಾಂಡ್ಯ ಪಂದ್ಯದ ನಡುವೆ ಮಂಡಿಯೂರುವ ಮುಖಾಂತರ ಪ್ರತಿಭಟನೆ ಬೆಂಬಲ ವ್ಯಕ್ತಪಡಿಸಿದ್ದರು.

ಈ ಬಾರಿ ಟಿ20 ವಿಶ್ವಕಪ್​ ಮೂಲಕ ಬ್ಲ್ಯಾಕ್ ಲೈವ್ಸ್​ ಮ್ಯಾಟರ್ ( BLM) ಚಳುವಳಿಗೆ ಬಹುತೇಕ ತಂಡಗಳು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಅದರಂತೆ ತನ್ನ ಮೊದಲ ಪಂದ್ಯದ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಈ ಚಳುವಳಿಗೆ ಬೆಂಬಲ ಪ್ರದರ್ಶಿಸಿದ್ದಾರೆ.

ಇದನ್ನೂ ಓದಿ: India vs Pakistan: 2007ರ ಟಿ20 ವಿಶ್ವಕಪ್ ಫೈನಲ್ ಆಡಿದ್ದ ಇಬ್ಬರು ಆಟಗಾರರ ಮುಖಾಮುಖಿ

ಇದನ್ನೂ ಓದಿ: T20 World cup 2021: ಪಾಕ್ ವಿರುದ್ದದ ಪಂದ್ಯದೊಂದಿಗೆ ಹೊಸ ಸಾಧನೆ ಮಾಡಲಿದ್ದಾರೆ ಕೆಎಲ್ ರಾಹುಲ್, ಪಾಂಡ್ಯ

ಇದನ್ನೂ ಓದಿ: T20 World Cup 2021: ಟಿ20 ರ‍್ಯಾಂಕಿಂಗ್‌​ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?

(India vs Pakistan: Virat Kohli & co. bend the knee to support BLM)

Published On - 9:12 pm, Sun, 24 October 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು