AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಪಾಕ್ ಮಧ್ಯೆ ಕ್ರಿಕೆಟ್ ಸರಣಿ? ಸಿಕ್ಕಿತು ದೊಡ್ಡ ಸೂಚನೆ

ಸುನೀಲ್ ಗವಾಸ್ಕರ್ ಅವರು ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಪುನರಾರಂಭಕ್ಕೆ ಗಡಿಯಲ್ಲಿ ಶಾಂತಿ ಅತ್ಯಗತ್ಯ ಎಂದು ಹೇಳಿದ್ದಾರೆ. ರಾಷ್ಟ್ರಗಳ ನಡುವಿನ ಸರಣಿಗಳು ICC ಟೂರ್ನಮೆಂಟ್‌ಗಳಿಗೆ ಮಾತ್ರ ಸೀಮಿತವಾಗಿವೆ. ಗಡಿಯಲ್ಲಿ ಶಾಂತಿಯ ವಾತಾವರಣ ನಿರ್ಮಾಣವಾದರೆ ಮಾತ್ರ ಸರ್ಕಾರಗಳು ಈ ಬಗ್ಗೆ ಚರ್ಚಿಸಲು ಸಾಧ್ಯ ಎಂದು ಅವರು ತಿಳಿಸಿದ್ದಾರೆ.

ಭಾರತ-ಪಾಕ್ ಮಧ್ಯೆ ಕ್ರಿಕೆಟ್ ಸರಣಿ? ಸಿಕ್ಕಿತು ದೊಡ್ಡ ಸೂಚನೆ
ಭಾರತ-ಪಾಕ್ ಮಧ್ಯೆ ಕ್ರಿಕೆಟ್ ಸರಣಿ? ಸಿಕ್ಕಿತು ದೊಡ್ಡ ಸೂಚನೆ
ರಾಜೇಶ್ ದುಗ್ಗುಮನೆ
|

Updated on: Feb 28, 2025 | 12:45 PM

Share

ಭಾರತ ಹಾಗೂ ಪಾಕಿಸ್ತಾನ ತಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಮುಖಾಮುಖಿ ಆಗಿತ್ತು. ಈ ರೀತಿ ಐಸಿಸಿ ಸರಣಿಗಳಲ್ಲಿ ಮಾತ್ರ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿ ಆಗುತ್ತವೆಯೇ ಹೊರತು ಎರಡೂ ದೇಶಗಳ ಮಧ್ಯೆ ಸರಣಿಗಳು ನಡೆಯದೇ ದಶಕ ಕಳೆದಿದೆ. 2012-13ರಲ್ಲಿ ಭಾರತ ಹಾಗೂ ಪಾಕಿಸ್ತಾನ ಸರಣಿ ಪಂದ್ಯಗಳನ್ನು ಆಡಿತ್ತು. ಇದಾದ ಬಳಿಕ ಈ ರೀತಿಯ ಯಾವುದೇ ಸರಣ ಎರಡೂ ದೇಶಗಳ ಮಧ್ಯೆ ನಡೆದಿಲ್ಲ. ಇದು ಮತ್ತೆ ನಡೆಯಬೇಕು ಎಂದರೆ ಒಂದೇ ಷರತ್ತು ಇದೆ ಎಂದು ಕಾಮೆಂಟೇಟರ್ ಸುನೀಲ್ ಗವಾಸ್ಕರ್ ಅವರು ಹೇಳಿದ್ದಾರೆ.

ಇತ್ತೀಚೆಗೆ ಚಾನೆಲ್ ಒಂದರಲ್ಲಿ ಮಾತನಾಡಿರೋ ಸುನೀಲ್ ಗವಾಸ್ಕರ್, ‘ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯ ಸರಣಿಯನ್ನು ಆಡುವ ಏಕೈಕ ಮಾರ್ಗವೆಂದರೆ ಎರಡೂ ರಾಷ್ಟ್ರಗಳ ಸರ್ಕಾರಗಳು ಗಡಿಯಲ್ಲಿ ಶಾಂತಿ ನೆಲೆಸುವುದನ್ನು ಖಚಿತಪಡಿಸಿಕೊಳ್ಳಬೇಕು. ಅಂದಾಗ ಮಾತ್ರ ದ್ವಿಪಕ್ಷೀಯ ಸರಣಿ ಸಾಧ್ಯ’ ಎಂದಿದ್ದಾರೆ.

‘ದೇಶದ ಗಡಿಯಲ್ಲಿ ಶಾಂತಿ ಇಲ್ಲದೆ ಭಾರತ ಹಾಗೂ ಪಾಕ್ ಸರಣಿ ಪಂದ್ಯವನ್ನಾಡಲು ಹೇಗೆ ಸಾಧ್ಯ? ಒಂದೊಮ್ಮೆ ಗಡಿಯಲ್ಲಿ ಶಾಂತಿ ನೆಲೆಸಿದರೆ ಭಾರತ ಹಾಗೂ ಪಾಕಿಸ್ತಾನ ಸರ್ಕಾರ ಈ ಬಗ್ಗೆ ಚರ್ಚಿಸಬಹುದು. ಗಡಿಯಲ್ಲಿ ಯಾವುದೇ ಸಮಸ್ಯೆ ಇಲ್ಲ, ಈಗ ಆ ಬಗ್ಗೆ ಚರ್ಚಿಸೋಣ ಎನ್ನುವ ಪರಿಸ್ಥಿತಿ ಬರಬೇಕು’ ಎಂದು ಅವರು ಹೇಳಿದ್ದಾರೆ.  ‘ಶಾಂತಿ ನೆಲೆಸುವವರೆಗೂ ಯಾವುದೇ ದ್ವಿಪಕ್ಷೀಯ ಸರಣಿಗಳು ನಡೆಯುವುದಿಲ್ಲ’ ಎಂದು ಸುನೀಲ್ ಗವಾಸ್ಕರ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ
Image
ಗುಜರಾತ್ ವಿರುದ್ಧವೂ ಸೋತ ಆರ್​ಸಿಬಿ
Image
ನಾಯಕತ್ವ ಸಿಕ್ಕ ಬಳಿಕ 128 ರನ್ ಚಚ್ಚಿದ ಪೃಥ್ವಿ ಶಾ
Image
16 ಗಂಟೆಗಳ ಆಟಕ್ಕೆ 1800 ಕೋಟಿ ಖರ್ಚು ಮಾಡಿದ ಪಾಕಿಸ್ತಾನ

ಇದನ್ನೂ ಓದಿ: Champions Trophy 2025: ಒಂದು ಪಂದ್ಯವನ್ನು ಗೆಲ್ಲದೆ ಹೊರಬಿದ್ದ ಪಾಕಿಸ್ತಾನಕ್ಕೆ ಸಿಕ್ಕ ಹಣವೆಷ್ಟು?

ಈ ವರ್ಷ ಭಾರತ ಹಾಗೂ ಪಾಕ್ ಮಧ್ಯೆ ಸಾಕಷ್ಟು ಪಂದ್ಯಗಳು ನಡೆಯಲಿವೆ. 2025ರ ಏಷ್ಯಾ ಕಪ್​ನಲ್ಲಿ ಭಾರತ ಹಾಗೂ ಪಾಕ್ ಮುಖಾ ಮುಖಿ ಆಗಲಿವೆ. ಸೆಪ್ಟೆಂಬರ್​ನಲ್ಲಿ ಈ ಪಂದ್ಯ ನಡೆಯಲಿದೆ. ಎರಡೂ ತಂಡಗಳು ಒಂದೇ ಗ್ರೂಪ್​​ನಲ್ಲಿ ಕಾಣಿಸಿಕೊಳ್ಳಲಿವೆ. ಸೂಪರ್ 4 ಸ್ಟೇಜ್​ನಲ್ಲೂ ಎರಡೂ ತಂಡಗಳು ಆಡಿವೆ. ಒಂದೊಮ್ಮೆ ಆಯ್ಕೆ ಆದರೆ ಇವರು ಫಿನಾಲೆಯಲ್ಲೂ ಆಡುವ ಸಾಧ್ಯತೆ ಹೆಚ್ಚು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ