IND vs PAK ODI: ಭಾರತ ವನಿತೆಯರ ಬೆಂಕಿ ಬೌಲಿಂಗ್​ಗೆ ಪಾಕಿಸ್ತಾನ ಉಡೀಸ್: ಮಿಥಾಲಿ ಪಡೆ ಭರ್ಜರಿ ಶುಭಾರಂಭ

ICC Women's World Cup 2022, India vs Pakistan: ಸ್ಮೃತಿ ಮಂದಾನ, ಸ್ನೇಹ್ ರಾಣ ಮತ್ತು ಪೂಜಾ ವಸ್ತ್ರಕರ್ ಅವರ ಆಕರ್ಷಕ ಅರ್ಧಶತಕದ ಜೊತೆ ಬೌಲರ್​ಗಳ ಸಂಘಟಿತ ಪ್ರದರ್ಶನದಿಂದ ಭಾರತೀಯ ವನಿತೆಯರು ಪಾಕಿಸ್ತಾನ ವಿರುದ್ಧದ ಮಹಿಳಾ ಏಕದಿನ ವಿಶ್ವಕಪ್​ನಲ್ಲಿ 107 ರನ್​ಗಳ ಅಮೋಘ ಗೆಲುವು ಸಾಧಿಸಿದರು.

IND vs PAK ODI: ಭಾರತ ವನಿತೆಯರ ಬೆಂಕಿ ಬೌಲಿಂಗ್​ಗೆ ಪಾಕಿಸ್ತಾನ ಉಡೀಸ್: ಮಿಥಾಲಿ ಪಡೆ ಭರ್ಜರಿ ಶುಭಾರಂಭ
IND vs PAK Womens World Cup
Follow us
| Updated By: Vinay Bhat

Updated on:Mar 06, 2022 | 1:18 PM

ನ್ಯೂಜಿಂಡ್​ನ ಮೌಂಟ್‌ ಮೌಂಗನುಯಿಯ ಬೇ ಓವಲ್ ಮೈದಾನದಲ್ಲಿ ನಡೆದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (ICC Women’s World Cup 2022) ನಾಲ್ಕನೇ ಪಂದ್ಯದಲ್ಲಿಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ (India vs Pakistan) ಮಹಿಳಾ ತಂಡ ಗೆದ್ದು ಬೀಗಿದೆ. ಸ್ಮೃತಿ ಮಂದಾನ, ಸ್ನೇಹ್ ರಾಣ ಮತ್ತು ಪೂಜಾ ವಸ್ತ್ರಕರ್ (Pooja Vastrakar) ಅವರ ಆಕರ್ಷಕ ಅರ್ಧಶತಕದ ಜೊತೆ ಬೌಲರ್​ಗಳ ಸಂಘಟಿತ ಪ್ರದರ್ಶನದಿಂದ ಭಾರತೀಯ ವನಿತೆಯರು 107 ರನ್​ಗಳ ಅಮೋಘ ಗೆಲುವು ಸಾಧಿಸಿದರು. ಈ ಮೂಲಕ ಮಹಿಳಾ ಏಕದಿನ ವಿಶ್ವಕಪ್​ನ ಮೊದಲ ಪಂದ್ಯವನ್ನೇ ಮಿಥಾಲಿ ಪಡೆ ಗೆದ್ದು ಭರ್ಜರಿ ಶುಭಾರಂಭ ಮಾಡಿದೆ. ಭಾರತ ನೀಡಿದ್ದ 245 ರನ್​ಗಳ ಸವಾಲಿನ ಟಾರ್ಗೆಟ್ ಬೆನ್ನಟ್ಟಿದ ಪಾಕಿಸ್ತಾನ ನಿಧಾನಗತಿಯ ಆರಂಭ ಪಡೆದುಕೊಂಡಿತು. ಮೊದಲ 11 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 28 ರನ್, ಜೊತೆಗೆ 11ನೇ ಓವರ್​​ನಲ್ಲಿ ಜವೇರಿಯಾ ಖಾನ್ (11) ವಿಕೆಟ್ ಕಳೆದುಕೊಂಡಿತು.

ನಾಯಕಿ ಬಿಸ್ಮಾ ಮರೂಫ್ ಆಟ ಕೇವಲ 15 ರನ್​ಗೆ ಅಂತ್ಯವಾದರೆ, 30 ರನ್ ಗಳಿಸಿದ್ದ ಸಿದ್ರಾ ಅಮೀನ್​ರನ್ನು ಪೆವಿಯನ್​ಗೆ ಅಟ್ಟುವಲ್ಲಿ ಜೂಲನ್ ಗೋಸ್ವಾಮಿ ಯಶಸ್ವಿಯಾದರು. ನಂತರ ಬಂದ ಬ್ಯಾಟರ್​ಗಳು ಯಾರೂ ಹೆಚ್ಚುಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. ಭಾರತೀಯ ಬೌಲಿಂಗ್ ಪಡೆಯನ್ನು ಎದುರಿಸಲಾಗದೆ ಪೆವಿಲಿಯನ್ ಸೇರಿಕೊಂಡರು. ಅಂತಿಮವಾಗಿ ಪಾಕಿಸ್ತಾನ 42.5 ಓವರ್​ನಲ್ಲಿ 137 ರನ್​ಗೆ ಆಲೌಟ್ ಆಯಿತು. ಭಾರತ ಪರ ರಾಜೇಶ್ವರಿ ಗಾಯಕ್ವಾಡ್ 4 ವಿಕೆಟ್ ಕಿತ್ತು ಮಿಂಚಿದರೆ, ಸ್ನೇಹ್ ರಾಣ ಹಾಗೂ ಗೋಸ್ವಾಮಿ ತಲಾ 2, ದೀಪ್ತಿ ಶರ್ಮಾ ಮತ್ತು ಮೇಗ್ನಾ ಸಿಂಗ್ ತಲಾ 1 ವಿಕೆಟ್ ಪಡೆದರು.

ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್​ಗೆ ಇಳಿದ ಭಾರತಕ್ಕೆ ಪಾಕಿಸ್ತಾನ ಆರಂಭದಲ್ಲೇ ಆಘಾತ ಉಂಟುಮಾಡಿತು. ಸ್ಟಾರ್ ಬ್ಯಾಟರ್ ಸ್ಮೃತಿ ಮಂದಾನ ಜೊತೆ ಓಪನರ್ ಆಗಿ ಕಣಕ್ಕಿಳಿದ ಶಫಾಲಿ ವರ್ಮಾ ಪಂದ್ಯದ ಮೂರನೇ ಓವರ್​ನ ಡಯಾನ ಬೇಗ್ ಬೌಲಿಂಗ್​ನಲ್ಲಿ ಶೂನ್ಯಕ್ಕೆ ಕ್ಲೀನ್ ಬೌಲ್ಡ್ ಆಗುವ ಮೂಲಕ ಪೆವಿಲಿಯನ್ ಸೇರಿಕೊಂಡರು. 4 ರನ್​ಗೆ ಮೊದಲ ವಿಕೆಟ್ ಕಳೆದುಕೊಂಡಿದ್ದ ಭಾರತಕ್ಕೆ ಮಂದಾನ ಹಾಗೂ ದೀಪ್ತಿ ಶರ್ಮಾ ಆಸರೆಯಾದರು. ನಿಧಾನಗತಿಯಲ್ಲಿ ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ಈ ಜೋಡಿ 92 ರನ್​ಗಳ ಕಾಣಿಕೆ ನೀಡಿತು. ಭರ್ಜರಿ ಫಾರ್ಮ್​ನಲ್ಲಿರುವ ಮಂದಾನ 75 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್​ನೊಂದಿಗೆ 52 ರನ್ ಗಳಿಸಿದರೆ, ದೀಪ್ತಿ 57 ಎಸೆತಗಳಲ್ಲಿ 40 ರನ್​ಗೆ ಔಟಾದರು. ಈ ಸಂದರ್ಭ ತಂಡಕ್ಕೆ ಆಧಾರವಾಗಬೇಕಿದ್ದ ಅನುಭವಿಗಳು ದಿಢೀರ್ ನಿರ್ಗಮಿಸಿದ್ದು ಭಾರತ ಪಾತಾಳಕ್ಕೆ ಕುಸಿಯಿತು. ನಾಯಕಿ ಮಿಥಾಲಿ ರಾಜ್ 9, ಹರ್ಮನ್​ಪ್ರೀತ್ ಕೌರ್ 5 ಹಾಗೂ ರಿಚ್ಚಾ ಘೋಷ್ ಕೇವಲ 1 ರನ್​ಗೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

96 ರನ್​ಗೆ 2ನೇ ವಿಕೆಟ್ ಕಳೆದುಕೊಂಡಿದ್ದ ಭಾರತ  114 ರನ್ ಆಗುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡಿತು. ಅಲ್ಪ ಮೊತ್ತಕ್ಕೆ ಆಲೌಟ್ ಆಗುವ ಭೀತಿಯಲ್ಲಿದ್ದ ಭಾರತಕ್ಕೆ ಈ ಸಂದರ್ಭ ಮಾನ ಉಳಿಸಿದ್ದು ಸ್ನೇಹ್ ರಾಣ ಹಾಗೂ ಪೂಜಾ ವಸ್ತ್ರಕರ್. ಇವರಿಬ್ಬರು ಹೆಚ್ಚು ಬಾಲ್​ಗಳನ್ನು ತಿನ್ನದೆ ಸಿಂಗ್, ಡಬಲ್ ಪಡೆದುಕೊಂಡು ಭಾರತದ ರನ್ ಗತಿಯನ್ನು ಹೆಚ್ಚಿಸಿದರು. ಅಂತಿಮ ಹಂತದವರೆಗೂ ಕ್ರೀಸ್​ನಲ್ಲೇ ಇದ್ದ ಇವರು ಬರೋಬ್ಬರಿ 122 ರನ್​ಗಳ ಜೊತೆಯಾಟ ಆಡಿದರು. ಕೊನೇ ಹಂತದಲ್ಲಿ ಪೂಜಾ 59 ಎಸೆತಗಳಲ್ಲಿ 8 ಬೌಂಡರಿಯೊಂದಿಗೆ 67 ರನ್​ಗೆ ಔಟಾದರು. ಸ್ನೇಹ್ 48 ಎಸೆತಗಳಲ್ಲಿ 4 ಬೌಂಡರಿ ಬಾರಿಸಿ ಅಜೇಯ 53 ರನ್ ಸಿಡಿಸಿದರು. ಭಾರತ 50 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 244 ರನ್ ಕಲೆಹಾಕಿದೆ. ಪಾಕ್ ಪರ ನಿದಾ ದರ್ ಹಾಗೂ ನಶ್ರಾ ಸಂಧು ತಲಾ 2 ವಿಕೆಟ್ ಕಿತ್ತರು.

107 ರನ್​ಗಳ ಗೆಲುವಿನೊಂದಿಗೆ ಭಾರತ ಮಹಿಳಾ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಗೆದ್ದು ಭರ್ಜರಿ ಶುಭಾರಂಭ ಮಾಡಿದೆ. ಅಲ್ಲದೆ ಪಾಕ್ ವಿರುದ್ಧದ ತನ್ನ ಗೆಲುವಿನ ದಾಖಲೆಯನ್ನು ಮುಂದುವರೆಸಿದೆ. ವಿಶ್ವಕಪ್‌ನ 3 ಮುಖಾಮುಖಿ ಸೇರಿದಂತೆ ಪಾಕ್ ವಿರುದ್ಧ ಈ ಹಿಂದೆ ಆಡಿದ 10 ಏಕದಿನ ಪಂದ್ಯಗಳಲ್ಲೂ ಭಾರತ ಮಹಿಳಾ ತಂಡ ಗೆಲುವು ದಾಖಲಿಸಿದ ಅಜೇಯ ದಾಖಲೆ ಈ ಬಾರಿಯೂ ಮುಂದುವರೆಸಿದೆ.

ಭಾರತ ಮಹಿಳಾ ತಂಡ ತನ್ನ ಮುಂದಿನ ಪಂದ್ಯವನ್ನು ನ್ಯೂಜಿಲೆಂಡ್ ವಿರುದ್ಧ ಆಡಲಿದ್ದು, ಇದು ಮಾರ್ಚ್ 10 ಗುರುವಾರದಂದು ನಡೆಯಲಿದೆ.

Mithali Raj: ಕ್ರಿಕೆಟ್ ದೇವರ ದಾಖಲೆ ಸರಿಗಟ್ಟಿದ ಮಿಥಾಲಿ ರಾಜ್: ಮೊದಲ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದ ಭಾರತ

Ravindra Jadeja: ಜಡೇಜಾ ದ್ವಿಶತಕದ ಹೊಸ್ತಿಲಲ್ಲಿ ಭಾರತ ಡಿಕ್ಲೇರ್ ಘೋಷಿಸಿದ್ದು ಯಾಕೆ ಗೊತ್ತೇ?

Published On - 1:17 pm, Sun, 6 March 22

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ