AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PMXI: ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ಕೆ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಹೊನಳು-ಬೆಳಕಿನ ಟೆಸ್ಟ್ ಪಂದ್ಯವಾಗಿದ್ದು, ಹೀಗಾಗಿ ಈ ಮ್ಯಾಚ್​​ನಲ್ಲಿ ಪಿಂಕ್ ಬಾಲ್ ಬಳಸಲಾಗುತ್ತದೆ.

IND vs PMXI: ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ಕೆ
IND vs PMXI
ಝಾಹಿರ್ ಯೂಸುಫ್
|

Updated on:Dec 01, 2024 | 1:47 PM

Share

ಭಾರತ ಮತ್ತು ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ನಡುವಣ ಅಭ್ಯಾಸ ಪಂದ್ಯ ಶುರುವಾಗಿದೆ. ಕ್ಯಾನ್​​ಬೆರಾದ ಮನುಕಾ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ. ಶನಿವಾರದಿಂದ ಶುರುವಾಗಬೇಕಿದ್ದ ಈ ಪಂದ್ಯದ ಮೊದಲ ದಿನದಾಟವು ಮಳೆಗೆ ಅಹುತಿಯಾಗಿತ್ತು. ಇದೀಗ ದ್ವಿತೀಯ ದಿನದಾಟದಲ್ಲಿ ಉಭಯ ತಂಡಗಳು ತಲಾ 50 ಓವರ್​​​ಗಳನ್ನು ಆಡಲಿದೆ. ಈ ಮೂಲಕ ಟೀಮ್ ಇಂಡಿಯಾ ಪಿಂಕ್ ಬಾಲ್​​ ಟೆಸ್ಟ್​​ಗೆ ಸಿದ್ಧತೆಗಳನ್ನು ಆರಂಭಿಸಿದೆ.

ಸರಣಿ ನಡುವೆ ಅಭ್ಯಾಸ ಪಂದ್ಯವೇಕೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿ ಶುರುವಾಗಿ ಮೊದಲ ಮ್ಯಾಚ್ ಮುಗಿದಿದೆ. ಇದರ ನಡುವೆ ಅಭ್ಯಾಸ ಪಂದ್ಯವೇಕೆ ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕೆ ಮುಖ್ಯ ಕಾರಣ ಅಡಿಲೇಡ್ ಟೆಸ್ಟ್. ಡಿಸೆಂಬರ್ 6 ರಿಂದ ಶುರುವಾಗಲಿರುವ ಈ ಸರಣಿಯ 2ನೇ ಪಂದ್ಯವು ಅಡಿಲೇಡ್​ನ ಓವಲ್​ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯವು ಹೊನಲು ಬೆಳಕಿನಲ್ಲಿ ಜರುಗಲಿದ್ದು, ಅದಕ್ಕೂ ಮುನ್ನ ಪಿಂಕ್ ಬಾಲ್​​ನಲ್ಲಿ ಅಭ್ಯಾಸ ನಡೆಸಲು ಟೀಮ್ ಇಂಡಿಯಾ ನಿರ್ಧರಿಸಿದೆ.

ಏಕೆಂದರೆ ಭಾರತೀಯ ಆಟಗಾರರು ಪಿಂಕ್ ಬಾಲ್​​ನಲ್ಲಿ ಟೆಸ್ಟ್ ಪಂದ್ಯವಾಡಿ ವರ್ಷ ಕಳೆದಿದೆ. ಹಾಗೆಯೇ ಆಸ್ಟ್ರೇಲಿಯಾ ಪರಿಸ್ಥಿತಿಗೆ ಹೊಂದಿಕ್ಕೊಳ್ಳಲು ಪಿಂಕ್ ಬಾಲ್​​ನಲ್ಲಿ ಅಭ್ಯಾಸ ಪಂದ್ಯ ಅನಿವಾರ್ಯ. ಅದರಂತೆ ಇದೀಗ ಟೀಮ್ ಇಂಡಿಯಾ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ವಿರುದ್ಧ ಪಿಂಕ್ ಬಾಲ್​ನಲ್ಲಿ ಅಭ್ಯಾಸ ಪಂದ್ಯವಾಡುತ್ತಿದೆ. ಈ ಮೂಲಕ ಅಡಿಲೇಡ್ ಟೆಸ್ಟ್ ಪಂದ್ಯ ಗೆಲ್ಲಲು ಭಾರತ ತಂಡ ಭರ್ಜರಿ ಪ್ಲ್ಯಾನ್ ರೂಪಿಸಿದೆ.

ಪ್ರೈಮ್ ಮಿನಿಸ್ಟರ್ಸ್ ಇಲೆವೆನ್: ಜ್ಯಾಕ್ ಎಡ್ವರ್ಡ್ಸ್ (ನಾಯಕ) , ಮ್ಯಾಟ್ ರೆನ್‌ಶಾ , ಜ್ಯಾಕ್ ಕ್ಲೇಟನ್ , ಆಲಿವರ್ ಡೇವಿಸ್ , ಜೇಡನ್ ಗುಡ್‌ವಿನ್ , ಸ್ಯಾಮ್ ಹಾರ್ಪರ್ (ವಿಕೆಟ್ ಕೀಪರ್) , ಚಾರ್ಲಿ ಅ್ಯಂಡರ್ಸನ್ , ಸ್ಯಾಮ್ ಕೊನ್‌ಸ್ಟಾಸ್ , ಸ್ಕಾಟ್ ಬೋಲ್ಯಾಂಡ್ , ಲಾಯ್ಡ್ ಪೋಪ್ , ಹ್ಯಾನೋ ಜೇಕಬ್ಸ್ , ಮಹ್ಲಿ ಬಿಯರ್ಡ್‌ಮನ್ , ಏಡನ್ ಓನ್ ಕಾನರ್ , ಜೆಮ್ ರಯಾನ್, ಜಾಕ್ ನಿಸ್ಬೆಟ್.

ಇದನ್ನೂ ಓದಿ:  ಸ್ಪೋಟಕ ಹಾಫ್ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ಬರೆದ RCB ಹುಡುಗ

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್.

Published On - 9:30 am, Sun, 1 December 24

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ