AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: 3ನೇ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ; ಯಾರು ಇನ್, ಯಾರು ಔಟ್?

India vs South Africa 3rd ODI: ಭಾರತ-ದಕ್ಷಿಣ ಆಫ್ರಿಕಾ ನಡುವಿನ 3ನೇ ಏಕದಿನ ಪಂದ್ಯ ಸರಣಿ ನಿರ್ಧಾರಕವಾಗಿದೆ. ಹಿಂದಿನ ಪಂದ್ಯಗಳಲ್ಲಿ ಬೌಲಿಂಗ್ ಹಾಗೂ ಆಲ್​ರೌಂಡರ್ ವಿಭಾಗದ ಕಳಪೆ ಪ್ರದರ್ಶನದಿಂದ ಭಾರತ ಸೋತಿತ್ತು. ತಂಡದ ಸಮತೋಲನಕ್ಕಾಗಿ ನಿತೀಶ್ ರೆಡ್ಡಿ ಮತ್ತು ವಾಷಿಂಗ್ಟನ್ ಸುಂದರ್​ಗೆ ಹೆಚ್ಚಿನ ಅವಕಾಶ ನೀಡುವ ಅಗತ್ಯವಿದೆ. ವಿಶಾಖಪಟ್ಟಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಪ್ರಮುಖ ಬದಲಾವಣೆಗಳ ನಿರೀಕ್ಷೆಯಿದ್ದು, ಇದು ಸರಣಿ ಗೆಲ್ಲಲು ನಿರ್ಣಾಯಕವಾಗಿದೆ.

IND vs SA: 3ನೇ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ; ಯಾರು ಇನ್, ಯಾರು ಔಟ್?
Team India
ಪೃಥ್ವಿಶಂಕರ
|

Updated on: Dec 05, 2025 | 7:21 PM

Share

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಮೂರನೇ ಏಕದಿನ ಪಂದ್ಯ ಶನಿವಾರ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದು ಕುತೂಹಲಕಾರಿಯಾಗಿದೆ. ಏಕೆಂದರೆ ಮೊದಲೆರಡು ಪಂದ್ಯಗಳಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ವಿಭಾಗ ತನ್ನ ಕೆಲಸ ಮಾಡಿತ್ತು. ಆದರೆ ಆಲ್​ರೌಂಡರ್ ವಿಭಾಗ ಹಾಗೂ ಬೌಲಿಂಗ್ ವಿಭಾಗ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಇದರ ಫಲವಾಗಿ ಟೀಂ ಇಂಡಿಯಾ ಬೃಹತ್ ಮೊತ್ತ ಕಲೆಹಾಕಿದರೂ 2ನೇ ಪಂದ್ಯವನ್ನು ಸೋತಿತ್ತು. ಇದೀಗ ಮೂರನೇ ಏಕದಿನ ಪಂದ್ಯ ಉಭಯ ತಂಡಗಳಿಗೆ ಸರಣಿ ನಿರ್ಧಾರಕವಾಗಿರುವುದರಿಂದ, ಈ ಪಂದ್ಯವನ್ನು ಗೆಲ್ಲಬೇಕಾದರೆ, ಭಾರತ ತಂಡ ಕೆಲವು ಬದಲಾವಣೆಗಳೊಂದಿಗೆ ಕಣಕ್ಕಿಳಿಯಬೇಕಾಗಿದೆ. ಹಾಗಿದ್ದರೆ, ಸರಣಿಯ ಕೊನೆಯ ಪಂದ್ಯಕ್ಕೆ ರಾಹುಲ್ ಪಡೆ ಹೇಗಿರಲಿದೆ ಎಂಬುದನ್ನು ನೋಡುವುದಾದರೆ..

ಟೀಂ ಇಂಡಿಯಾದಲ್ಲಿ ಬದಲಾವಣೆ ಅಗತ್ಯ

ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಖಂಡಿತವಾಗಿಯೂ ಬದಲಾವಣೆ ಮಾಡುವ ಅಗತ್ಯವಿದೆ. ಪ್ರಸಿದ್ಧ್ ಕೃಷ್ಣ ಅವರನ್ನು ಬದಲಿಸಿ ನಿತೀಶ್ ರೆಡ್ಡಿಗೆ ಅವಕಾಶ ನೀಡಿದರೆ, ಟೀಂ ಇಂಡಿಯಾ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡನ್ನೂ ಬಲಪಡಿಸಬಹುದು. ಈಗ, ನಿತೀಶ್ ರೆಡ್ಡಿ ತಂಡವನ್ನು ಹೇಗೆ ಬಲಪಡಿಸುತ್ತಾರೆ ಎಂದು ನೀವು ಆಶ್ಚರ್ಯ ಪಡುತ್ತಿರಬಹುದು ? ವಾಸ್ತವವಾಗಿ, ನಿತೀಶ್ ರೆಡ್ಡಿಯನ್ನು ಅರೆಕಾಲಿಕ ಬೌಲರ್ ಆಗಿ ಬಳಸಿಕೊಂಡರೆ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ತಮ್ಮ ಪೂರ್ಣ ಸಾಮರ್ಥ್ಯಕ್ಕೆ ಬಳಸಿಕೊಂಡರೆ, ಭಾರತೀಯ ತಂಡದ ರನ್ ಸೋರಿಕೆ ಸಮಸ್ಯೆಯನ್ನು ಕೊನೆಗೊಳಿಸಬಹುದು.

ಸುಂದರ್ ಅವರನ್ನು ಬಳಸಲೇ ಇಲ್ಲ

ಅಚ್ಚರಿಯೆಂದರೆ, ಟೀಂ ಇಂಡಿಯಾ ಹಿಂದಿನ ಎರಡೂ ಪಂದ್ಯಗಳಲ್ಲಿ ವಾಷಿಂಗ್ಟನ್ ಸುಂದರ್ ಅವರನ್ನು ಬ್ಯಾಟ್ಸ್‌ಮನ್ ಆಗಿ ಬಳಸಿಕೊಂಡಿದೆ. ಆದರೆ ಅವರಿಗೆ ಎರಡೂ ಪಂದ್ಯಗಳಲ್ಲಿ ಕೇವಲ ಏಳು ಓವರ್‌ಗಳನ್ನು ಮಾತ್ರ ನೀಡಲಾಗಿದೆ. ಈ ಏಳು ಓವರ್‌ಗಳಲ್ಲಿಯೂ ಸಹ ಅವರು ಕೇವಲ 46 ರನ್‌ಗಳನ್ನು ಮಾತ್ರ ಬಿಟ್ಟುಕೊಟ್ಟರು, ಇದು ಈ ಏಕದಿನ ಸರಣಿಯ ಪಿಚ್‌ಗಳನ್ನು ಪರಿಗಣಿಸಿದರೆ ಉತ್ತಮ ಪ್ರದರ್ಶನವಾಗಿದೆ. ಸುಂದರ್‌ಗೆ ಹೆಚ್ಚಿನ ಬೌಲಿಂಗ್ ಮಾಡಲು ಏಕೆ ಅವಕಾಶ ನೀಡಲಿಲ್ಲ ಎಂಬುದು ಪ್ರಶ್ನೆ. ಈಗ, ವಿಶಾಖಪಟ್ಟಣದಲ್ಲಿ ಅವರ ಪೂರ್ಣ ಕೋಟಾವನ್ನು ನೀಡಿದರೆ ಮತ್ತು ನಿತೀಶ್ ರೆಡ್ಡಿ ಅವರನ್ನು ಅರೆಕಾಲಿಕ ಬೌಲರ್ ಆಗಿ ಬಳಸಿದರೆ, ತಂಡವು ಖಂಡಿತವಾಗಿಯೂ ಪ್ರಯೋಜನ ಪಡೆಯಬಹುದು. ನಿತೀಶ್ ರೆಡ್ಡಿ ಅವರ ಉಪಸ್ಥಿತಿಯು ತಂಡದ ಬ್ಯಾಟಿಂಗ್ ಅನ್ನು ಬಲಪಡಿಸುತ್ತದೆ ಮತ್ತು ಡೆತ್ ಓವರ್‌ಗಳಲ್ಲಿ ಭಾರತದ ರನ್ ದರವನ್ನು ಹೆಚ್ಚಿಸುತ್ತದೆ. ಇದಕ್ಕೆ ಪೂರಕವಾಗಿ ನಿತೀಶ್ ರೆಡ್ಡಿ ದೊಡ್ಡ ಹೊಡೆತಗಳಿಗೆ ಹೆಸರುವಾಸಿಯಾಗಿದ್ದಾರೆ.

IND vs SA: ಭಾರತ- ಆಫ್ರಿಕಾ ನಡುವಿನ ಕೊನೆಯ ಏಕದಿನ ಪಂದ್ಯ ಯಾವಾಗ ಎಲ್ಲಿ ನಡೆಯಲಿದೆ?

3ನೇ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ 11 – ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ